Congress Govt; ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ: ಅಶೋಕ್ ಆಕ್ರೋಶ
ಕೇವಲ ಹಿಂದೂಗಳನ್ನೂ ಟಾರ್ಗೆಟ್ ಮಾಡುವ ಹುನ್ನಾರ : ವಿಪಕ್ಷ ನಾಯಕ
Team Udayavani, Sep 13, 2024, 11:46 PM IST
ಬೆಂಗಳೂರು: ರಾಜ್ಯದಲ್ಲಿ ಮೂಲ ಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರಕಾರ ಅಧಿಕಾರದಲ್ಲಿದೆ. ಕೇವಲ ಹಿಂದೂ ಗಳನ್ನು ಮಾತ್ರ ಟಾರ್ಗೆಟ್ ಮಾಡುವ ಈ ಹುನ್ನಾರ ಕೈಬಿಡದಿದ್ದರೆ ಬಿಜೆಪಿ ನಾಗಮಂಗಲದಲ್ಲಿ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ನಾಗಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ. ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸರಕಾರ ಉತ್ತರ ಕೊಡಬೇಕು ಎಂದು ಪ್ರಶ್ನೆ ಎತ್ತಿದ್ದಾರೆ.
-ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆ ಆಗಿದ್ದರೂ ಈ ವರ್ಷ ಮುಂಜಾಗ್ರತ ಕ್ರಮವಾಗಿ ಬಂದೋಬಸ್ತ್ ಮಾಡಲಿಲ್ಲವೇಕೆ?
-ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ಸಹ ನಿರ್ಲಕ್ಷ್ಯ ಮಾಡಲಾಯಿತೇ?
-ಗಣಪತಿ ಮೆರವಣಿಗೆಗೆ ರೂಟ್ ಮ್ಯಾಪ್ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಏಕೆ ಭದ್ರತೆ ನೀಡಲಿಲ್ಲ?
-ಪಟ್ಟಣದಲ್ಲಿ ಇದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ?
-ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40 ಕಿ.ಮೀ. ದೂರದಲ್ಲಿರುವ ಹೆಚ್ಚಿನ ಸಿಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ?
-ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್ಐಆರ್ ನಲ್ಲಿ ಎ 1 ಮಾಡಿರುವುದೇಕೆ?
-ಎ 1 ನಿಂದ ಎ 23 ವರೆಗೆ ಕೇವಲ ಹಿಂದೂಗಳ ಮೇಲೆ ಎಫ್ ಐಆರ್ ಮಾಡಿ ಶನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ಸೀಮೆ ನ್ಯಾಯ?
-ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?
-25 ಕೋಟಿ ರೂಪಾಯಿ ಮೊತ್ತದ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದ್ದರೂ, ಗೃಹ ಸಚಿವರಿಗೆ ಇದೊಂದು ಸಣ್ಣ ಘಟನೆ, ಆಕಸ್ಮಿಕ ಘಟನೆ ಅನ್ನಿಸಲು ಕಾರಣ ಏನು?
– ಇಷ್ಟೆಲ್ಲಾ ಅನಾಹುತ ಆಗಿದ್ದರೂ ಬೆಂಗಳೂರಿನಿಂದ ಕೇವಲ 130 ಕಿ.ಮೀ. ದೂರವಿರುವ ನಾಗಮಂಗಲಕ್ಕೆ ಗೃಹ ಸಚಿವರು ಇನ್ನೂ ಭೇಟಿ ನೀಡಿಲ್ಲವೇಕೆ?
ಬಿಜೆಪಿ ಸತ್ಯಶೋಧನ ಸಮಿತಿ ರಚನೆ
ಬೆಂಗಳೂರು: ನಾಗಮಂಗಲ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಡಿಸಿಎಂ ಡಾ| ಸಿ.ಎನ್. ಅಶ್ವತ್ಥನಾರಾಯಣ ನೇತೃತ್ವದಲ್ಲಿ ಬಿಜೆಪಿ ಸತ್ಯಶೋಧನ ಸಮಿತಿಯನ್ನು ರಚನೆ ಮಾಡಿದೆ. ಈ ಸಮಿತಿಯಲ್ಲಿ ಮಾಜಿ ಸಚಿವರಾದ ಬೈರತಿ ಬಸವರಾಜ, ಕೆ.ಸಿ. ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸದಸ್ಯರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.