Valmiki ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಎಸ್‌ಐಟಿ ಬುಲಾವ್‌

ಜು. 9ರಂದು ವಿಚಾರಣೆಗೆ ಹಾಜರಾಗಲು ನೋಟಿಸ್‌

Team Udayavani, Jul 6, 2024, 6:54 AM IST

SIT

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಸಂಬಂಧ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದೆ.

ಜು. 9ರಂದು ವಿಚಾರಣೆಗೆ ಹಾಜರಾಗುವಂತೆ ಬಿ. ನಾಗೇಂದ್ರ ಹಾಗೂ ಬಸವನಗೌಡ ದದ್ದಲ್‌ಗೆ ನೋಟಿಸ್‌ ನೀಡಿರುವುದಾಗಿ ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಹಗರಣದಲ್ಲಿ ದದ್ದಲ್‌ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬ ನಗದು ರೂಪದಲ್ಲಿ ನಿಗಮಕ್ಕೆ ಸೇರಿದ ದುಡ್ಡು ಪಡೆದ ಆರೋಪ ಕೇಳಿಬಂದಿದೆ.

ಇದಲ್ಲದೆ ಮಾಜಿ ಸಚಿವ ಬಿ. ನಾಗೇಂದ್ರ ಆಪ್ತರಾದ ನೆಕ್ಕಂಟಿ ನಾಗರಾಜ್‌ ಹಾಗೂ ಅವರ ಭಾವಮೈದ ನಾಗೇಶ್ವರರಾವ್‌ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದರು. ಆರೋಪಿಗಳ ವಿಚಾರಣೆ ಹಾಗೂ ತನಿಖೆಯ ವೇಳೆ ಸಿಕ್ಕಿರುವ ಕೆಲವು ಸಾಕ್ಷ್ಯಗಳನ್ನು ಆಧರಿಸಿ ಇಬ್ಬರಿಗೂ ನೋಟಿಸ್‌ ನೀಡಲಾಗಿದೆ ಎಂದು ತಿಳಿದು ಬಂದಿದೆ. ವಿಚಾರಣೆ ವೇಳೆ ಸೂಕ್ತ ಮಾಹಿತಿ ನೀಡದಿದ್ದರೆ ಇಬ್ಬರನ್ನೂ ಬಂಧಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

ಹಗರಣದಲ್ಲಿ 11 ಮಂದಿ ಬಂಧನ
ಪ್ರಕರಣ ಸಂಬಂಧ ಇದುವರೆಗೆ 11 ಮಂದಿಯನ್ನು ಬಂಧಿಸಲಾಗಿದ್ದು, ಒಟ್ಟು 28 ಕೋಟಿ ರೂ.ಗಳನ್ನು ಜಪ್ತಿ ಮಾಡಲಾಗಿದೆ. ಆರಂಭದಲ್ಲಿ 18 ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂಬುದು ಕಂಡುಬಂದಿತ್ತು. ತನಿಖೆಯನ್ನು ಚುರುಕು ಗೊಳಿಸುತ್ತಿದ್ದಂತೆ ಆರೋಪಿತರ ಕಂಪೆನಿಗಳ ಮೂಲಕ ನೂರಾರು ಬ್ಯಾಂಕ್‌ ಖಾತೆಗಳಿಂದ ಕೋಟ್ಯಂತರ ಹಣ ವರ್ಗಾವಣೆಯಾಗಿತ್ತು. ಆ ಸಂದರ್ಭದಲ್ಲಿ ಇಲಾಖೆಯ ಸಚಿವರಾಗಿದ್ದ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷರಾಗಿರುವ ಬಸವನಗೌಡ ದದ್ದಲ್‌ರ ಗಮನಕ್ಕೆ ಇಷ್ಟು ಗಂಭೀರವಾದ ವಿಚಾರ ಬಾರಲಿಲ್ಲವೇ, ಇವರ ಸಹಕಾರದಲ್ಲೇ ಹಗರಣ ನಡೆದಿದೆಯೇ ಎಂಬಿತ್ಯಾದಿ ಗೊಂದಲಗಳಿಗೆ ಎಸ್‌ಐಟಿ ಸ್ಪಷ್ಟೀಕರಣ ಕೇಳುವ ಸಾಧ್ಯತೆಗಳಿವೆ.

ತನಿಖಾ ಸಂಸ್ಥೆಯಿಂದ ವಿಚಾರಣೆಗೆ ನೋಟಿಸ್‌ ಬರುವ ಸಾಧ್ಯತೆ ಬಗ್ಗೆ “ಉದಯವಾಣಿ’ ಜೂ. 9ರಂದೇ ಸುದ್ದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Exam 2

SSLC; ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ ಅ. 25 ಕ್ಕೆ

aane

Wild Elephant  ಕಾಟ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಬಿಡಾರ

1-aranya

Forest Act ತಿದ್ದುಪಡಿ ಸೇರಿ ಬೇಡಿಕೆ ಈಡೇರಿಕೆಗೆ ಇಂದು ಸಭೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.