CM ಸಂಧಾನ ಸಕ್ಸಸ್: ರಾಜ್ಯಾದ್ಯಂತ ಖಾಸಗಿ ವೈದ್ಯರ ಮುಷ್ಕರ ಅಂತ್ಯ
Team Udayavani, Nov 17, 2017, 5:15 PM IST
ಬೆಂಗಳೂರು: ತಕ್ಷಣವೇ ರಾಜ್ಯಾದ್ಯಂತ ವೈದ್ಯರು ಸೇವೆಗೆ ಹಾಜರಾಗಬೇಕೆಂದು ಹೈಕೋರ್ಟ್ ವಿಭಾಗೀಯ ಪೀಠ ಖಾಸಗಿ ವೈದ್ಯರಿಗೆ ಖಡಕ್ ಆದೇಶ ನೀಡಿದ್ದರೆ, ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಖಾಸಗಿ ವೈದ್ಯರ ಜತೆ ನಡೆಸಿದ ಸಭೆ ಯಶಸ್ವಿಯಾಗಿದೆ. ಇದರೊಂದಿಗೆ ಮುಷ್ಕರ ವಾಪಸ್ ಪಡೆಯಲು ಖಾಸಗಿ ವೈದ್ಯರು ನಿರ್ಧರಿಸುವ ಮೂಲಕ ರಾಜ್ಯ ಸರ್ಕಾರ ಮತ್ತು ಖಾಸಗಿ ವೈದ್ಯರ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಂತಾಗಿದೆ.
ಭಾರತೀಯ ವೈದ್ಯ ಸಂಘದ ಕರ್ನಾಟಕ ಘಟಕ ಮತ್ತು ವಿವಿಧ ವೈದ್ಯಕೀಯ ಸಂಘಟನೆಗಳು ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿರೋಧಿಸಿ ನ.13ರಿಂದ ಬೆಳಗಾವಿಯಲ್ಲಿ ಮುಷ್ಕರ ನಡೆಸುತ್ತಿದ್ದು, ಪ್ರತಿಭಟನೆ ಶುರುವಾದ ದಿನದಿಂದ ಇಲ್ಲಿವರೆಗೆ ಖಾಸಗಿ ಆಸ್ಪತ್ರೆಗಳ ಒಪಿಡಿ ವಿಭಾಗದ ಸೇವೆ ಸಿಗದ ಪರಿಣಾಮ ಹಲವು ಸಾವು ಸಂಭವಿಸಿತ್ತು.
ಖಾಸಗಿ ವೈದ್ಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವೈದ್ಯರ ಸಂಘದ ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಧೇಯಕಕ್ಕೆ ಕೆಲವು ಬದಲಾವಣೆ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಕೊನೆಗೂ ವೈದ್ಯರ ಸಂಘದ ಪದಾಧಿಕಾರಿಗಳು ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ ಜಾರಿಗೆ ಒಪ್ಪಿಗೆ ಸೂಚಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಹೈಕೋರ್ಟ್ ಚಾಟಿ:
ಏತನ್ಮಧ್ಯೆ ಖಾಸಗಿ ವೈದ್ಯರ ಮುಷ್ಕರ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ವೈದ್ಯರ ಮುಷ್ಕರದ ಬಗ್ಗೆ ಕಿಡಿಕಾರಿದ್ದು, ನಿಮಗೆ ಮಾನವೀಯತೆ ಇಲ್ಲವೇ? ನೀವು ವೈದ್ಯರೋ ಅಥವಾ ಮನುಷ್ಯತ್ವ ಮರೆತವರೋ ಎಂದು ಚಾಟಿ ಬೀಸಿತ್ತು. ನಿಮಗೆ ಕಾಯ್ದೆ ಬಗ್ಗೆ ಅಸಮಾಧಾನ ಇದ್ದಿದ್ದರೆ ಕೋರ್ಟ್ ನಲ್ಲಿ ಪ್ರಶ್ನಿಸಿ, ಅದನ್ನು ಬಿಟ್ಟು ನೀವು(ವೈದ್ಯರು) ಬೀದಿಗೆ ಇಳಿದದ್ದು ಯಾಕೆ ಎಂದು ಪ್ರಶ್ನಿಸಿತು. ಕೂಡಲೇ ಮುಷ್ಕರ ವಾಪಸ್ ಪಡೆದು ಸೇವೆಗೆ ತೆರಳುವಂತೆ ಹೈಕೋರ್ಟ್ ಖಡಕ್ ಆದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.