Karnataka ;ಸಾರಿಗೆ ನೌಕರರ ವೇತನ ಶೇ. 12-15 ಹೆಚ್ಚಳ?


Team Udayavani, May 17, 2024, 6:40 AM IST

Ramalinga reddy 2

ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ 4 ವರ್ಷಗಳಿಗೊಮ್ಮೆ ನಡೆಯುವ ಸಾರಿಗೆ ನೌಕರರ ವೇತನ ಪರಿಷ್ಕರಣೆ ಚರ್ಚೆ ಮುನ್ನೆಲೆಗೆ ಬಂದಿದ್ದು, ಈ ಬಾರಿಯೂ ಶೇ. 12ರಿಂದ 15ರಷ್ಟು ವೇತನ ಹೆಚ್ಚಳ ಮಾಡುವ ಸಂಬಂಧ ಚಿಂತನೆ ನಡೆದಿದೆ.

ಕಳೆದ ಬಾರಿ ಅಂದರೆ 2023ರಲ್ಲಿ ಸರಕಾರ ಅಳೆದು-ತೂಗಿ ಶೇ. 15ರಷ್ಟು ವೇತನ ಪರಿಷ್ಕರಣೆ ಮಾಡಿತ್ತು. ಇದು 2020ರ ಜ. 1ರಿಂದ ಪೂರ್ವಾನ್ವಯ ಆಗುವಂತೆ ಆದೇಶ ಹೊರಡಿಸಲಾಗಿತ್ತು. ಇದರಲ್ಲಿ 38 ತಿಂಗಳ ವೇತನ ಪರಿಷ್ಕರಣೆಯ ಬಾಕಿ ಇನ್ನೂ ಪಾವತಿ ಮಾಡಬೇಕಿದೆ. ಅಷ್ಟರಲ್ಲಿ ಮತ್ತೂಂದು ಪರಿಷ್ಕರಣೆ ಸಮಯ ಬಂದಿದೆ. ಈ ಹಿನ್ನೆಲೆಯಲ್ಲಿ ಸರಕಾರ ಈಗ ಮೂರು ವರ್ಷಗಳ ಹಿಂಬಾಕಿ ಸಹಿತ ಮುಂದಿನ ನಾಲ್ಕು ವರ್ಷದ ವೇತನ ಹೆಚ್ಚಳ ಮಾಡಬೇಕಾದ ಇಕ್ಕಟ್ಟಿಗೆ ಸಿಲುಕಿದೆ. ಸಾರ್ವತ್ರಿಕ ಚುನಾವಣೆಯು ಸರಕಾರಕ್ಕೆ ತುಸು ನೆಮ್ಮದಿ ನೀಡಿತ್ತು. ಚುನಾವಣೆ ಮುಗಿಯುತ್ತಿದ್ದಂತೆ ಈ ಸಂಬಂಧದ ಚರ್ಚೆ ಆರಂಭವಾಗಿದೆ. ಈಗಾಗಲೇ ಸಾರಿಗೆ ನೌಕರರ ವಿವಿಧ ಸಂಘಟನೆಗಳು ಸಾರಿಗೆ ಸಚಿವರು ಮತ್ತು ಕೆಎಸ್ಸಾರ್ಟಿಸಿ ಆಡಳಿತ ಮಂಡಳಿ ಯನ್ನು ಭೇಟಿಯಾಗಿ ಮನವಿ ಸಲ್ಲಿಸಿವೆ. ಅದರ ಮೇಲೆ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳ ಸಭೆಯೂ ನಡೆದಿದೆ. ಆದರೆ ನೀತಿಸಂಹಿತೆ ಅನಂತರ ಈ ಸಂಬಂಧದ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ.

“ಶಕ್ತಿ’ಯಿಂದ ಹೆಚ್ಚಿದ ಒತ್ತಡ!
ಸಾರಿಗೆ ನೌಕರರು ಶಕ್ತಿ ಗ್ಯಾರಂಟಿ ಯಶಸ್ಸಿನ ರೂವಾರಿಗಳು, ಇದರಿಂದ ಆದಾಯ ಹೆಚ್ಚಿದೆ ಎಂದು ಸರಕಾರ ಹೇಳಿದೆ.

ಈ ಮಧ್ಯೆ ಸರಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಚಿಂತನೆ ನಡೆದಿದೆ. ಇದೆಲ್ಲವೂ ಸಹಜವಾಗಿ ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಒತ್ತಡ ಹೆಚ್ಚುವಂತೆ ಮಾಡಿದೆ. ಅದೆಲ್ಲವನ್ನೂ ಪರಿಗಣಿಸಿ ಕಳೆದ ಬಾರಿಯಂತೆ ಈ ಸಲವೂ ಶೇ. 12ರಿಂದ 15ರಷ್ಟು ವೇತನ ಪರಿಷ್ಕರಣೆ ಮಾಡುವ ಸಂಬಂಧ ಚರ್ಚೆ ನಡೆದಿದೆ. ಆದರೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

ಸಾರಿಗೆ ನೌಕರರ ಒಕ್ಕೂಟ ಮತ್ತು ರಾಜ್ಯ ಸಾರಿಗೆ ಸಂಸ್ಥೆ ನಡುವಿನ ಒಪ್ಪಂದದ ಪ್ರಕಾರ ಪ್ರತೀ 4 ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಮಾಡಬೇಕು. ಆದರೆ ಕೆಲವು ಬಾರಿ ಇದು ನಿಯಮಿತವಾಗಿ ಆಗುವುದೇ ಇಲ್ಲ. 2020ರ ಜನವರಿಯಲ್ಲಿ ಆಗಬೇಕಾದ ಪರಿಷ್ಕರಣೆ 2023ರಲ್ಲಾಯಿತು. ಅದು 2023ರ ಮಾ. 1ರಿಂದ ಜಾರಿಗೆ ಬಂದಿದೆ. ಅದಕ್ಕೂ ಹಿಂದಿನ 38 ತಿಂಗಳ ಬಾಕಿ 1,700 ಕೋಟಿ ರೂ. ಇದೆ. ಇನ್ನೂ ವಿಚಿತ್ರವೆಂದರೆ ಬಿಎಂಟಿಸಿ ನೌಕರರಿಗೆ 16 18 ತಿಂಗಳ ತುಟ್ಟಿಭತ್ತೆ, ರಜೆ ನಗದೀಕರಣ ಮೊತ್ತ ಕೂಡ ಬಾಕಿ ಉಳಿಸಿಕೊಳ್ಳಲಾಗಿದೆ. ಅಷ್ಟರಲ್ಲಿ ಈಗ ಮತ್ತೂಂದು ಪರಿಷ್ಕರಣೆ ಸಮಯ ಬಂದಿದೆ. ಇದು ಕಳೆದ ಜನವರಿಯಲ್ಲೇ ಆಗಬೇಕಿತ್ತು. ಚುನಾವಣೆ ನೆಪದಲ್ಲಿ ಮುಂದೂಡಲ್ಪಟ್ಟಿತು ಎಂದು ಸಾರಿಗೆ ನೌಕರರ ಒಕ್ಕೂಟ ಮತ್ತು ಸಾರಿಗೆ ಸಂಸ್ಥೆ ಸಿಬಂದಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧದ ಚರ್ಚೆ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಸಾರಿಗೆ ಇಲಾಖೆಗೆ ಪ್ರಸ್ತಾವನೆ ಕೂಡ ಸಲ್ಲಿಕೆ ಆಗಿಲ್ಲ. ಸಾರಿಗೆ ಸಂಸ್ಥೆಯ ಆಡಳಿತ ಮಂಡಳಿ ಹಂತದಲ್ಲೇ ಚರ್ಚೆ ನಡೆದಿದೆ.
ಅಷ್ಟಕ್ಕೂ ಕಳೆದ ವರ್ಷವಷ್ಟೇ ಪರಿಷ್ಕರಣೆ ಮಾಡಲಾಗಿದೆ. ಸರಕಾರದ ಮಟ್ಟದಲ್ಲೂ ಗ್ಯಾರಂಟಿ ಮತ್ತಿತರ ಆರ್ಥಿಕ ಹೊರೆ ಇದೆ. ಈ ಹಂತದಲ್ಲಿ ಮತ್ತೊಂದು ಪರಿಷ್ಕರಣೆ ಕಷ್ಟ ಎಂಬ ವಾದವೂ ಕೇಳಿಬರುತ್ತಿದೆ.

ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಲೇಬೇಕು. ಆದರೆ ಚುನಾವಣ ನೀತಿಸಂಹಿತೆ ಜಾರಿ ಯಲ್ಲಿದೆ. ಅದು ಪೂರ್ಣಗೊಂಡ ಅನಂತರ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗು ವುದು. ಸದ್ಯಕ್ಕಂತೂ ಈ ಸಂಬಂಧ ಇದು ವರೆಗೆ ಯಾವುದೇ ನಿರ್ಧಾರ ಆಗಿಲ್ಲ. -ರಾಮಲಿಂಗಾರೆಡ್ಡಿ,ಸಚಿವರು, ಸಾರಿಗೆ ಇಲಾಖೆ

ವಿಜಯ ಕುಮಾರ ಚಂದರಗಿ

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.