KSOU; ದೇಶದಲ್ಲೇ 64 ಕೋರ್ಸ್‍ಗಳ ಪದವಿ ನೀಡುವ ಏಕೈಕ ವಿವಿ

ಯುಜಿಸಿ ಮಾನ್ಯತೆ...ಡಿ.ಕೆ.ಶಿವಕುಮಾರ್, ಉಮಾಶ್ರೀ, ಸಿ.ಟಿ.ರವಿ ಅವರಿಗೆ ಉನ್ನತ ಶಿಕ್ಷಣ

Team Udayavani, Feb 8, 2024, 5:15 PM IST

1-sadsad

ವಿಜಯಪುರ : ವೈವಿಧ್ಯಮ 64 ಕೋರ್ಸ್‍ಗಳನ್ನು ಹೊಂದಿರುವ ದೇಶದ ಏಕೈಕ ವಿಶ್ವವಿದ್ಯಾಲಯ ಎನಿಸಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ಉನ್ನತ ಶಿಕ್ಷಣದಿಂದ ವಂಚಿತರಿಗೆ ನಮ್ಮ ವಿಶ್ವವಿದ್ಯಾಲಯ ಅವರ ಉನ್ನತ ಶಿಕ್ಷಣದ ಕನಸು ನನಸು ಮಾಡುವಲ್ಲಿ ಸೂಕ್ತ ಆಯ್ಕೆಯಾಗಿದೆ ಎಂದು ಕುಲಪತಿ ಪ್ರೊ.ಶರಣಪ್ಪ ಹಲಸೆ ಹೇಳಿದರು.

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ಸಾಧನೆ, ಕೋರ್ಸ್‍ಗಳು, ಪ್ರವೇಶದ ಅವಕಾಶಗಳ ಕುರಿತು ವಿವರಿಸಿದ ಅವರು, ರಾಜ್ಯದಲ್ಲಿ ದೂರ ಶಿಕ್ಷಣ ನೀಡುತ್ತಿರುವ ಏಕೈಕ ವಿಶ್ವವಿದ್ಯಾಲಯ ನಮ್ಮದು ಮಾತ್ರ. ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳು ನೀಡುವ ಶೈಕ್ಷಣಿಕ ಕ್ರಮಗಳ ಪದವಿಗೆ ದೂರ ಶಿಕ್ಷಣದ ಮೂಲಕ ಪಡೆಯುವ ನಮ್ಮ ಪದಿವಿಗಳೂ ಸಮಾನವಾಗಿವೆ ಎಂದರು.

ನಮ್ಮ ವಿಶ್ವವಿದ್ಯಾಲಯದಲ್ಲಿ 10 ವಿಷಯಗಳ ಆನ್‍ಲೈನ್ ಕೋರ್ಸ್‍ಗಳೂ ಇದ್ದು, ರಾಜ್ಯದಲ್ಲಿ 34 ಪ್ರಾದೇಶಿಕ ಕೇಂದ್ರ. 131 ಪ್ರಾದೇಶಿಕ ಕಲಿಕಾ ಕೇಂದ್ರಗಳನಗನು ಹೊಂದಿದೆ. ಮೈಸೂರು ಭಾಗದಲ್ಲಿ ನಮ್ಮ ವಿಶ್ವವಿದ್ಯಾಲಯ ಹೆಚ್ಚು ಪ್ರಗತಿ ಸಾಧಿಸಿದ್ದು, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ವಿಸ್ತರಿಸಲು ವಿಶೇಷ ಆದ್ಯತೆ ನೀಡುತ್ತಿದ್ದೇವೆ ಎಂದರು.

ಕೆಲಸದಲ್ಲಿರುವವರು, ಬಡತನ, ಗ್ರಾಮೀಣ ಭಾಗದ ಉನ್ನತ ಶಿಕ್ಷಣ ಅವಕಾಶ ವಂಚಿತರು, ಇತರೆ ಕಾರಣಕ್ಕೆ ಉನ್ನತ ಶಿಕ್ಷಣದಿಂದ ವಂಚಿತರಿಗೆ ನಮ್ಮ ವಿಶ್ವವಿದ್ಯಾಲಯದ ಮೊದಲ ಆಯ್ಕೆಯಾಗಿದೆ. ಯುಜಿಸಿ ಎ+ ಮಾನ್ಯತೆ ಪಡೆದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕಡಿಮೆ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಅವಕಾಶವಿದೆ ಎಂದರು.

ಇದಲ್ಲದೇ ಬೇರೆ ವಿಶ್ವವಿದ್ಯಾಲಯದಲ್ಲಿ ಈಗಾಗಲೇ ಭೌತಿಕ ಪ್ರವೇಶದೊಂದಿಗೆ ನೇರ ತರಗತಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಕೂಡ ನಮ್ಮ ವಿಶ್ವವಿದ್ಯಾಲಯದಲ್ಲಿ ಬೇರೊಂದು ಕೋರ್ಸ್‍ನಲ್ಲಿ ದೂರ ಶಿಕ್ಷಣದಲ್ಲಿ ಪ್ರವೇಶ ಪಡೆದು, ಏಕ ಕಾಲಕ್ಕೆ ಎರಡೂ ಕೋರ್ಸ್ ಮಾಡಲು ಅವಕಾಶವಿದೆ. ಇದರು ನಮ್ಮ ವಿಶ್ವವಿದ್ಯಾಲಯದ ಹಿರಿಮೆ ಎಂದರು.

ಆನ್‍ಲೈನ್ ಮೂಲಕವೇ ಅರ್ಜಿ ಸಲ್ಲಿಸುವ ಹಾಗೂ ಆನ್‍ಲೈನ್ ಮೂಲಕವೇ ವಿಶ್ವವಿದ್ಯಾಲಯದ ಎಲ್ಲ ಶುಲ್ಕಗಳನ್ನು ಭರಿಸಬೇಕಿದೆ. ನಮ್ಮ ವಿಶ್ವವಿದ್ಯಾಲಯದಲ್ಲಿ ಜನವರಿ ಹಾಗೂ ಜುಲೈ ಹೀಗೆ ವಾರ್ಷಿಕ ಎರಡು ಬಾರಿ ಪ್ರವೇಶ ಕಲ್ಪಿಸಲಾಗುತ್ತದೆ. 2023-34ನೇ ಸಾಲಿನ ಮೊಲದ ಹಂತದ ಜನವರಿ ಆವೃತ್ತಿಯ ಪ್ರವೇಶಕ್ಕೆ ಮಾರ್ಚ್ 31 ಕೊನೆ ದಿನ. ವಿವಿಧ ವಿಷಯಗಳ ಸಂಯೋಜನೆ ಹೊಂದಿರುವ ಪದವಿಗಳ ಸ್ನಾತಕ-ಸ್ನಾತಕೋತ್ತರ, ಸಂಶೋಧನಾ ಪಿಎಚ್‍ಡಿ ಮಾತ್ರವಲ್ಲದೇ ವಿವಿಧ ವಿಷಯಗಳ ಸರ್ಟಿಫಿಕೇಟ್ ಕೋರ್ಸ್‍ಗಳನ್ನೂ ನೀಡಲಾಗುತ್ತದೆ ಎಂದರು.

ನಮ್ಮ ವಿಶ್ವವಿದ್ಯಾಲಯದಿಂದಲೇ ಈಗಾಗಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಸಚಿವೆ ಉಮಾಶ್ರೀ, ಸಿ.ಟಿ.ರವಿ ಅವರಂಥ ನಾಯಕರೂ ಸ್ನಾತಕೋತ್ತರ, ಸಂಶೋಧನಾ ಮಹಾಪ್ರಬಂಧ ಮಂಡಿಸುವ ಮೂಲಕ ಪಿಎಚ್‍ಡಿ ಪದವಿಗಳನ್ನೂ ಪಡೆದಿದ್ದಾರೆ. ನಮ್ಮ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರುವ ಹಲವರು ಕೇಂದ್ರ-ರಾಜ್ಯ ಸರ್ಕಾರಗಳ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿ, ಸೇವೆ ಸಲ್ಲಿಸುತ್ತಿದ್ದಾರೆ ಎಂದು ವಿವರಿಸಿದರು.

ನಮ್ಮ ವಿಶ್ವವಿದ್ಯಾಲಯದಲ್ಲಿ ಇಲ್ಲದ ಕೋಸ್‍ಗಳಲ್ಲೂ ಅಧ್ಯಯನ ಮಾಡಲು ಪ್ರತಿಷ್ಠಿತಿ ಇತರೆ ವಿಶ್ವವಿದ್ಯಾಲಯಗಳೊಂದಿಗೆ ಶೈಕ್ಷಣಿಕ ಒಪ್ಪಂದ ಮಾಡಿಕೊಳ್ಳಲೂ ಯೋಜಿಸಿದ್ದೇವೆ. ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ವಿಭಾಗವಿದ್ದು, ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ. ಡಿಜಿಟಲ್ ಮೌಲ್ಯಮಾಪನದ ಮೂಲಕ ಗುಣಮಟ್ಟದ ಮೌಲ್ಯಮಾಪನ, ಶೀಘ್ರ ಫಲಿತಾಂಶ ಪ್ರಕಟಣೆಗೆ ಅನುಕೂಲ ಕಲ್ಪಿಸಲಾಗಿದೆ. ಪ್ರಸಾರಾಂಗ, ರೇಡಿಯೋ ಸೌಲಭ್ಯವೂ ಇದೆ ಎಂದು ವಿವರಿಸಿದರು.

ವಿಜಯಪುರ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಡಿ.ಎಸ್.ಮೈತ್ರಿ, ಧಾರವಾಡ ಪ್ರಾದೇಶಿಕ ಕೇಂದ್ರದ ನಿರ್ದೇಶಕ ರಾಘವೇಂದ್ರ ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.