Karnataka ರಾಜ್ಯದ ಮೊದಲ “ಹೆಲ್ತ್‌ ಎಟಿಎಂ’ಗೆ ಚಾಲನೆ ;ಪ್ರಯೋಜನಗಳೇನು?


Team Udayavani, Sep 17, 2023, 11:45 PM IST

1-sadasd

ಕಲಬುರಗಿ: ರಾಜ್ಯದಲ್ಲೇ ಮೊತ್ತಮೊದಲ ಬಾರಿಗೆ ಸ್ಥಾಪಿಸಲಾದ “ಸ್ಮಾರ್ಟ್‌ ಹೆಲ್ತ್‌ ಕಿಯೋಸ್ಕ್'(ಹೆಲ್ತ್‌ ಎಟಿಎಂ)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ನಗರದಲ್ಲಿ ರವಿವಾರ ನಡೆದ “ಕಲ್ಯಾಣ ಕರ್ನಾಟಕ ಉತ್ಸವ’ ಕಾರ್ಯಕ್ರಮದಲ್ಲಿ ಅವರು ಕಲಬುರಗಿ ಜಿಲ್ಲಾಡಳಿತ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಾರಿಗೊಳಿಸಲಾದ “ಈ ಆರೋಗ್ಯ ಮಿತ್ರ’ ಯೋಜನೆ ಯನ್ನು ಲೋಕಾರ್ಪಣೆ ಮಾಡಿದರು.

ಜನಸ್ನೇಹಿ ಎಟಿಎಂ ಸ್ಮಾರ್ಟ್‌ ಹೆಲ್ತ್‌ ಕಿಯೋಸ್ಕ್ ಗಳ ಮೂಲಕ ತಪಾಸಣೆ ಮಾಡಿ ಶೀಘ್ರರೋಗ ಪತ್ತೆ ಹಾಗೂ ನಿಯಂತ್ರಣಕ್ಕೆ ತರಲು ತಂತ್ರಜ್ಞಾನ ಬಳಸಿ ಈ ವಿಶಿಷ್ಟ ಹೆಲ್ತ್‌ ಎಟಿಎಂ ಸ್ಥಾಪಿಸಲಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮಾಹಿತಿ ಕ್ಷಿಪ್ರ ವಾಗಿ ಗೊತ್ತಾಗುತ್ತದೆ. ಬಳಿಕ ಯಾವ ವಿಧಾನದ ಚಿಕಿತ್ಸೆ ಪಡೆಯಬೇಕು ಹಾಗೂ ಎಲ್ಲಿ ಪಡೆಯಬೇಕು ಎನ್ನುವ ಎಲ್ಲ ಮಾಹಿತಿ ಲಭ್ಯವಾಗಲಿದೆ.

ಆರೋಗ್ಯ ಎಟಿಎಂ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ತಂತ್ರಜ್ಞಾನವಾ ಗಿದ್ದು, ಪ್ರಾಥಮಿಕ ಮತ್ತು ತಡೆಗಟ್ಟಬಹು ದಾದ ಆರೋಗ್ಯ ಸೇವೆಗಳನ್ನು ಸುಲಭ ವಾಗಿ ಹಾಗೂ ಕೈಗಟಕುವ ದರದಲ್ಲಿ ಒದಗಿಸುತ್ತದೆ. ನಗರ ಪ್ರದೇಶಗಳಲ್ಲಿ ಜನರ ಜೀವನ ಶೈಲಿಗೆ ಅನುಗುಣವಾಗಿ, ಕಡಿಮೆ ಸಮಯದಲ್ಲಿ ಪರೀಕ್ಷೆಗಳನ್ನು ಮಾಡುವ ಮೂಲಕ ಸಮಯ ಮತ್ತು ಹಣ ಉಳಿಸಬಹುದು. ಗ್ರಾಮೀಣ ಪ್ರದೇಶಗಳಿಗೆ ಅಗತ್ಯವಿರುವ ಆರೋಗ್ಯ ಸಿಬಂದಿ ಅಂತರವನ್ನು ಕಡಿಮೆ ಮಾಡಿ ದುರ್ಗಮ ಪ್ರದೇಶಗಳಿಗೂ ಆರೋಗ್ಯ ಸೇವೆಗಳನ್ನು ತಲುಪಿಸಬಹುದು. ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡುವ ಮೂಲಕ ಸಮಯದ ಹಿಂದುಳಿದ ವರ್ಗವನ್ನು ಸಬಲೀಕರಣಗೊಳಿಸುವುದು ಹೆಲ್ತ್‌ ಎಟಿಎಂ ಗುರಿಯಾಗಿದೆ.

ಪ್ರಯೋಜನಗಳು
ಜನಸಂದಣಿ ಪ್ರದೇಶಗಳಲ್ಲಿ ಲಭ್ಯವಿರುವ ಆರೋಗ್ಯ ಎಟಿಎಂಗಳ ಮೂಲಕ ಸರಳವಾದ ಆರೋಗ್ಯ ಸೇವೆಗಳ ಲಭ್ಯತೆ, ನಿಖರವಾದ ವೈದ್ಯಕೀಯ ಪರೀಕ್ಷೆ ಮತ್ತು ಹೆಚ್ಚಿನ ಆರೋಗ್ಯ ತಪಾಸಣೆಗಾಗಿ ಅರೋಗ್ಯ ಎಟಿಎಂಗಳನ್ನು ಬಳಸುವುದರಿಂದ ಸಮಯ ಮತ್ತು ಹಣ ಉಳಿತಾಯವಾಗಲಿದೆ. ಸಮಗ್ರ ಆರೋಗ್ಯ ಸೇವೆಗಳಿಂದ ತುರ್ತು ಸ್ಪಂದನೆ, ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವುದರ ಮೂಲಕ ಉತ್ತಮ ಆರೋಗ್ಯ ಮತ್ತು ಒಟ್ಟಾರೆ ಯೋಗಕ್ಷೇಮ ಲಭ್ಯವಾಗಲಿದೆ. ನಿರಂತರ ಆರೋಗ್ಯ ತಪಾಸಣೆ ಮತ್ತು ಮೇಲ್ವಿಚಾರಣೆ ಮೂಲಕ ರೋಗಗಳನ್ನು ಪತ್ತೆ ಹಚ್ಚಲು ಮತ್ತು ತಡೆಗಟ್ಟಲು ಸಹಕಾರಿಯಾಗಿದ್ದು, ರೋಗಿಯ ದಾಖಲೆಗಳನ್ನು ಗೌಪ್ಯವಾಗಿಡಲಾಗುತ್ತದೆ. ಹತ್ತು ನಿಮಿಷಗಳಲ್ಲಿ 50ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಬಹುದು. ತ್ವರಿತವಾಗಿ ಆರೋಗ್ಯದ ವರದಿ ನೀಡಲಾಗುತ್ತದೆ. ಆರೋಗ್ಯಕ್ಕೆ ಅಗತ್ಯವಿರುವ ಆಹಾರದ ಮಾಹಿತಿ ನೀಡಲಾಗುತ್ತದೆ.
ಕÇಬುರಗಿ ಜಿಲ್ಲೆಯಲ್ಲಿ ಎಚ್‌.ಪಿ.ಎಂಟರ್‌ಪ್ರೈಸಸ್‌ ವತಿಯಿಂದ 25 ಹೆಲ್ತ್‌ ಎಟಿಎಂಗಳನ್ನು ಸಿಎಸ್‌ಆರ್‌ ಅನುದಾನದಡಿ ಪಡೆದು ಅಳವಡಿಸಲಾಗುತ್ತಿದೆ. ಸಚಿವ ಪ್ರಿಯಾಂಕ್‌ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ| ಅಜಯ್‌ ಸಿಂಗ್‌ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಬರ ನಿರ್ವಹಣೆಗೆ ಹಣಕಾಸಿನ ತೊಂದರೆ ಇಲ್ಲ
ಬರ ನಿರ್ವಹಣೆಗೆ ರಾಜ್ಯದಲ್ಲಿ ಸದ್ಯ ಹಣಕಾಸಿನ ತೊಂದರೆ ಇಲ್ಲ. 20 ಕೋ.ರೂ. ನೀಡಿದ್ದೇವೆ. ಭೀಕರವಾದ ದಿನಗಳು ಇನ್ನೂ ಎದುರಾಗಿಲ್ಲ. ಒಂದೊಮ್ಮೆ ಅಂಥ ಪರಿಸ್ಥಿತಿ ಎದುರಾದರೆ ಯುಧ್ದೋಪಾದಿಯಲ್ಲಿ ತುರ್ತು ಕ್ರಮ ಕೈಗೊಳ್ಳಲು ಸರಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸ ಸಿಗುತ್ತಿಲ್ಲ. ಇದರಿಂದಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಳೆ ಹೋಗುವ ಸಾಧ್ಯತೆಗಳಿವೆ. ಆದ್ದರಿಂದ ನರೇಗಾ ಕೂಲಿ ದಿನಗಳನ್ನು 150ಕ್ಕೆ ಹೆಚ್ಚಿಸುವ ಪ್ರಸ್ತಾವ ಇದೆ. ಕೇಂದ್ರ ಸರಕಾರ ಇದಕ್ಕೆ ಒಪ್ಪಿದರೆ ಗುಳೆ ತಪ್ಪಿಸಬಹುದು ಎಂದು ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.