ವಾರಾಂತ್ಯ ಕರ್ಫ್ಯೂ ವಿಷಯದಲ್ಲಿ ಬಿಜೆಪಿಯವರಿಂದ ಅರಾಜಕತೆ ಸೃಷ್ಟಿ: ರಕ್ಷಾ ರಾಮಯ್ಯ ಟೀಕೆ


Team Udayavani, Jan 19, 2022, 4:36 PM IST

ವಾರಾಂತ್ಯ ಕರ್ಫ್ಯೂ ವಿಷಯದಲ್ಲಿ ಬಿಜೆಪಿಯವರಿಂದ ಅರಾಜಕತೆ ಸೃಷ್ಟಿ: ರಕ್ಷಾ ರಾಮಯ್ಯ ಟೀಕೆ

ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಣ, ವಾರಾಂತ್ಯ ಕರ್ಫ್ಯೂ ಮುಂದುವರೆಸುವ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರು ಭಿನ್ನ ಭಿನ್ನವಾಗಿ ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದು, ಇದರಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಮತ್ತು ಸರ್ಕಾರದ ಕಾರ್ಯವೈಖರಿ ಬಗ್ಗೆ ವಿಶ್ವಾಸವಿಲ್ಲ ಎಂಬುದನ್ನು ಬಿಜೆಪಿ ನಾಯಕರೇ ಬಹಿರಂಗವಾಗಿ ಹೇಳುತ್ತಿದ್ದಾರೆ. ಇದು ಅರಾಜಕತೆಯ ಆಡಳಿತ ವೈಖರಿಗೆ ನಿದರ್ಶನವಾಗಿದೆ.  ಸರ್ಕಾರವನ್ನು ಹಾದಿ ಬೀದಿಯಲ್ಲಿ ಜನತೆ ವ್ಯಂಗ್ಯಮಾಡುವ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾರಾಂತ್ಯ ಕರ್ಫ‍್ಯೂ ರದ್ದುಗೊಳಿಸುವಂತೆ ಒತ್ತಾಯಿಸಿದ್ದು, ಇದಕ್ಕೆ ಪೂರಕವಾಗಿ ಸಂಸದ ಪ್ರತಾಪ್ ಸಿಂಹ ಇದೀಗ ಜನರ ಸಮಸ್ಯೆಗಳ ಬಗ್ಗೆ ಜ್ಙಾನೋದಯವಾದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ವೀರಾವೇಶದಿಂದ ಸರ್ಕಾರಕ್ಕೆ ಬುದ್ದಿ ಮಾತು ಹೇಳಿ ತಮ್ಮ ದ್ವಿಮುಖ ನೀತಿಯನ್ನು ಬಹಿರಂಗವಾಗಿ ತೋರ್ಪಡಿಸಿಕೊಂಡಿದ್ದಾರೆ. ಸಚಿವರಾದ ಆರ್. ಅಶೋಕ್, ಕೆ. ಸುಧಾಕರ್ ಒಂದೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದು, ಇದರಿಂದ ಜನತೆ ಗೊಂದಲಕ್ಕೆ ಒಳಗಾಗಿದ್ದಾರೆ ಎಂದು ರಕ್ಷಾ ರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ರಕ್ಷಾ ರಾಮಯ್ಯ, ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಕ್ಕಾಪಾಲಾಗಿದ್ದಾರೆ. ಇದರಿಂದ ಸರ್ಕಾರದ ನಾಯಕತ್ವಕ್ಕೆ ನೆಲೆಯೂ ಇಲ್ಲ, ಬೆಲೆಯೂ ಎಂಬುದು ಸಾಬೀತಾಗಿದೆ. ಮೇಕೆ ದಾಟು ಪಾದಯಾತ್ರೆಗೆ ತಡೆಯೊಡ್ಡುವ ಏಕೈಕ ಉದ್ದೇಶದಿಂದ ವಾರಾಂತ್ಯದ ಕರ್ಫ್ಯೂ, ನಿಷೇಧಾಜ್ಞೆ ಜಾರಿ ಮಾಡಿರುವುದು ಬಿಜೆಪಿ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟವಾಗಿದೆ. ಅಂಗೈ ಹುಣ‍್ಣಿಗೆ ಕನ್ನಡಿ ಬೇಕಾಗಿಲ್ಲ ಅಲ್ಲವೇ ಎಂದು ಮುಖ್ಯಮಂತ್ರಿ ಅವರನ್ನು ಕೆಪಿವೈಸಿಸಿ ಅಧ್ಯಕ್ಷರು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ಕ್ರಮಗಳಿಂದಾಗಿ ರಾಜ್ಯದಲ್ಲಿ ಸುಮಾರು 3 ಲಕ್ಷ ಸಣ‍್ಣ ಮತ್ತು ಮಧ್ಯಮ ಕೈಗಾರಿಕೆಗಳು ಮುಚ್ಚಲ್ಪಟ್ಟಿವೆ. ಪೀಣ್ಯಾ ಕೈಗಾರಿಕಾ ವಲಯದಲ್ಲಿ ಮೂರು ಸಾವಿರಕ್ಕೂ ಅಧಿಕ ಕೈಗಾರಿಕೆಗಳು ಬಂದ್ ಆಗಿವೆ. ಕೈಗಾರಿಕೆಗಳಿಗೆ ಪೂರೈಸುವ ಕಬ್ಬಿಣ ಮತ್ತಿತರ ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಲಕ್ಷಾಂತರ ಮಂದಿ ಮನೆಗಳನ್ನು ಕಟ್ಟಲಾಗದೇ ಅರ್ಧಕ್ಕೆ ನಿಲ್ಲಿಸಿದ್ದಾರೆ. ಇವುಗಳ ಬೆಲೆ ನಿಯಂತ್ರಣಕ್ಕೆ ಯಾವುದೇ ಸರ್ಕಾರಗಳು ಈವರೆಗೆ ಒಂದೇ ಒಂದು ಸಭೆ ನಡೆಸಿಲ್ಲ. ಇದು ಇವರ ಜನಪರ ಆಡಳಿತ ಎಂದು ರಕ್ಷಾ ರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇಷ್ಟೆಲ್ಲಾ ಅನಾಹುತ ಆದ ಮೇಲೆ ಇದೀಗ ಬಿಜೆಪಿ ನಾಯಕರಿಗೆ “ಜನರ ಜೀವ ಮತ್ತು ಜೀವನ ರಕ್ಷಿಸುವ” ಕುರಿತು ಕಾಳಜಿ ಬಂದಿರುವುದನ್ನು ನಿಜಕ್ಕೂ ಮೆಚ್ಚಬೇಕು. ಇನ್ನಾದರೂ ವೀಕ್ ಎಂಡ್ ಕರ್ಫ್ಯೂ, ಮತ್ತಿತರ ಅವೈಜ್ಞಾನಿಕ ಕ್ರಮಗಳ ಮೂಲಕ ಜನರನ್ನು ಶೋಷಣೆ ಮಾಡುವುದನ್ನು ಕೈಬಿಟ್ಟು ವೈಜ್ಞಾನಿಕ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಿ. ಜನರ ಆರೋಗ್ಯ ಮತ್ತು ಬದುಕಿನ ವಿಚಾರದಲ್ಲಿ ಚೆಲ್ಲಾಟ ಆಡುವುದನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.