ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣೆ ಇನ್ನಿಲ್ಲ

ವೀರಪ್ಪ ಮೊಯ್ಲಿ ಕ್ಯಾಬಿನೆಟ್ ನಲ್ಲಿ ಸಚಿವರಾಗಿದ್ದರು‌

Team Udayavani, Sep 5, 2022, 2:35 PM IST

1-sddsdsa

ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣೆ ಸೋಮವಾರ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋ ಸಹಜ ಅಲ್ಪ ಕಾಲದ ಅಸ್ವಸ್ಥತೆ ಯಿಂದ ಬಳಲುತ್ತಿದ್ದರು. ಮರೆವಿನ(ಅಲ್ಜಮೇರಿಯಾ) ಸಹ ಅವರನ್ನು ಕಾಡುತ್ತಿತ್ತು. ಮಧ್ಯಾಹ್ನ 1.30 ಕ್ಕೆ ಕೊನೆಯುಸಿರೆಳೆದಿದ್ದಾರೆ.

ಸಿದ್ಧರದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಆರಂಭಿಸಿದ್ದ ಅವರು ಶಿಕ್ಷಕರನ್ನು ಸಂಘಟಿಸಿದ್ದರು. ತಾಲೂಕು ಅಭಿವೃದ್ಧಿ ಮಂಡಳಿ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದರು‌. 1983 ರಿಂದ ಮೂರು ಅವಧಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದರು. 1993 ರಲ್ಲಿ  ವೀರಪ್ಪ ಮೊಯ್ಲಿ ಸಚಿವ ಸಂಪುಟದಲ್ಲಿ ವಯಸ್ಕರ ಶಿಕ್ಷಣ ಮತ್ತು ಸಾಕ್ಷರತೆ ಶಿಕ್ಷಣ ಖಾತೆ ಪಡೆದು 10 ತಿಂಗಳು ಸಚಿವರಾಗಿದ್ದರು. ಬಂಗಾರಪ್ಪ ಅವರ ಕ್ಲಾಸಿಕ್ ಕಂಪ್ಯೂಟರ್ ಹಗರಣವನ್ನು ಸದನದಲ್ಲಿ ಪ್ರಶ್ನಿಸಿ ,ಬಂಗಾರಪ್ಪ ಅಧಿಕಾರ ಕಳೆದುಕೊಳ್ಳಲು ಕಾರಣರಾಗಿದ್ದರು.

ಕಾರವಾರ- ಜೊಯಿಡಾ ಶಾಸಕರಾಗಿ ಮೂರು ಅವಧಿ ಪೂರೈಸಿದ್ದ ಅವರು1996 ರಲ್ಲಿ ಸೋಲು ಅನುಭವಿಸಿದರು. ನಂತರ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕ ವಸಂತ ಅಸ್ನೋಟಿಕರ್ ವಿರುದ್ಧ ಸೋಲು ಅನುಭವಿಸಿದರು. ನಂತರ ಜೆಡಿಎಸ್ ಸಹ ಸೇರಿದ್ದ ರಾಣೆ ಮತ್ತೆ ಸೋಲು ಕಂಡರು. ನಂತರ ರಾಜಕೀಯ ದಿಂದ ಹಿಂದೆ ಸರಿದರು.

ಶಿಕ್ಷಣ ಸಂಸ್ಥೆ 
ಪ್ರಭಾಕರ ರಾಣೆ ಭಾಪೂಜಿ ಗ್ರಾಮೀಣ ವಿಕಾಸ ಸಮಿತಿ ಸ್ಥಾಪಿಸಿ ಅದರ ಅಧ್ಯಕ್ಷರಾದರು. ಕಾರವಾರ ಜೊಯಿಡಾ ತಾಲೂಕಿನಲ್ಲಿ ಶಾಲಾ‌ ಕಾಲೇಜು ಸ್ಥಾಪಿಸಿ ಬಡ ಕುಟುಂಬಗಳ ಮಕ್ಕಳು ಶಿಕ್ಷಣ ಬೆಳಕು ಕಾಣಲು ಕಾರಣರಾಗಿದ್ದರು. ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆಗಿದ್ದರು. ಜನ ಶಿಕ್ಷಣ ಸಂಸ್ಥಾನವನ್ನು ಉತ್ತರ ಕನ್ನಡದಲ್ಲಿ ಕ್ರಿಯಾಶೀಲ ಗೊಳಿಸಿದರು. ಸಚಿವರಾಗಿದ್ದ ಅವಧಿಯಲ್ಲಿ ಅಂತಾರಾಷ್ಟ್ರೀಯ ಯುವ ಸಮ್ಮೇಳನವನ್ನು ಸಿದ್ಧರ ಗ್ರಾಮದಲ್ಲಿ ನಡೆಸಿ, ದೇಶ ವಿದೇಶ ಗಳಿಂದ ಯುವ ಜನರು ಕಾರವಾರಕ್ಕೆ ಬರಲು ಕಾರಣರಾಗಿದ್ದರು.

ಕರಾವಳಿ ಉತ್ಸವಕ್ಕೆ ಸಾಹಿತಿ ಅನಂತಮೂರ್ತಿಯನ್ನು ಕರೆಯಿಸಿ ಉದ್ಘಾಟಿಸಿದ್ದರು. ರಾಣೆ ಅವರು ಪತ್ನಿ ಹಾಗೂ ಅಪಾರ ಬಂಧು ಬಳಗ ವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.