![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 29, 2019, 3:00 AM IST
ಮಂಡ್ಯ: ಈಶ ಫೌಂಡೇಷನ್ ಸಂಸ್ಥಾಪಕ ಸದ್ಗುರು ಅವರು ಸೆ.3ರಂದು ಕಾವೇರಿ ಉಗಮ ಸ್ಥಾನ ತಲಕಾವೇರಿಯಿಂದ “ಕಾವೇರಿ ಕೂಗು’ ಸಂಚಾರ ಆರಂಭಿಸಲಿದ್ದಾರೆ ಎಂದು ಈಶ ಫೌಂಡೇಷನ್ನ ಸ್ವಯಂಸೇವಕ ಬಿ.ಎನ್.ಸುಬ್ರಹ್ಮಣಿ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಧ್ಯಾಹ್ನ 3.30ಕ್ಕೆ ಮಡಿಕೇರಿಯ ಕ್ರಿಸ್ಟಲ್ ಹಾಲ್ ಬಳಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಕಾವೇರಿ ಕೂಗಿನ ಬಗ್ಗೆ ಸದ್ಗುರು ಅವರು ತಿಳಿಸಿ ಕೊಡಲಿದ್ದಾರೆ.
ಸೆ.4ರಂದು ಸಂಜೆ 4 ಗಂಟೆಗೆ ಹುಣಸೂರಿನ ಮುನೇಶ್ವರ ಮೈದಾನ, 5 ರಂದು ಸಂಜೆ 6 ಗಂಟೆಗೆ ಮೈಸೂರಿನ ಮಾನಸಗಂಗೋತ್ರಿಯ ಆಂಫಿ ಥಿಯೇಟರ್, 6ರಂದು ಸಂಜೆ 4 ಗಂಟೆಗೆ ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣ, 8ರಂದು ಸಂಜೆ 5.30ಕ್ಕೆ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಂತರ, ತಮಿಳುನಾಡಿನ ಪೂಂಪುಹಾರದಲ್ಲಿರುವ ತಿರುವಾವುರ್ ಮೂಲಕ ಸಂಚಾರ ಮುಂದುವರಿಸಿ, ಚೆನ್ನೈನಲ್ಲಿ ಮುಕ್ತಾಯಗೊಳಿಸಲಿದ್ದಾರೆ ಎಂದರು.
ಇದು 1,500 ಕಿ.ಮೀ.ದೂರದ ಪ್ರಯಾಣವಾಗಿದ್ದು, ಹಾದಿಯುದ್ದಕ್ಕೂ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕರ್ನಾಟಕ ಹಾಗೂ ತಮಿಳುನಾಡಿಗೆ ಸೇರಿದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ 242 ಕೋಟಿ ಮರಗಳನ್ನು ನೆಟ್ಟು ಬೆಳೆಸುವುದು ಯೋಜನೆಯ ಮೂಲ ಉದ್ದೇಶ. ಸ್ಥಳೀಯ ನೀರು, ಮಣ್ಣು, ಹವಾಮಾನಗಳಿಗೆ ತಕ್ಕಂತೆ 17 ಜಾತಿಯ ಸಸಿಗಳನ್ನು ಎಚ್ಚರಿಕೆಯಿಂದ ಆರಿಸಲಾಗಿದೆ. ಜೊತೆಗೆ, ಅವುಗಳ ವಾಣಿಜ್ಯ ಮೌಲ್ಯವನ್ನೂ ಪರಿಗಣಿಸಲಾಗಿದೆ ಎಂದು ಹೇಳಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.