Mallikarjun Kharge: ಕುಟುಂಬ ವಿರುದ್ಧಲೋಕಾಯುಕ್ತಕ್ಕೆ ದೂರು

ಬೆಂಗಳೂರಿನ 2 ಕಡೆ ಸಕಾರಿ ಸ್ವತ್ತು ಹಂಚಿಕೆ; ದೂರಿನ ಜತೆಗೆ 394 ಪುಟಗಳ ದಾಖಲೆ ಸಲ್ಲಿಕೆ

Team Udayavani, Sep 28, 2024, 7:25 AM IST

Mallikarjun Kharge

ಬೆಂಗಳೂರು: ನಗರದ ಎರಡು ಬೇರೆ-ಬೇರೆ ಪ್ರದೇಶಗಳಲ್ಲಿ ತಮ್ಮ ಅಧಿಕಾರ ಮತ್ತು ರಾಜಕೀಯ ಪ್ರಭಾವ ಬಳಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬದವರು ಸರಕಾರಿ ಸ್ವತ್ತನ್ನು ಹಂಚಿಕೆ ಮಾಡಿಸಿಕೊಂಡಿದ್ದು ಈ ಸಂಬಂಧ ತನಿಖೆ ನಡೆಸುವಂತೆ ಕೋರಿ ಬಿಜೆಪಿ ಮುಖಂಡ ಎನ್‌.ಆರ್‌. ರಮೇಶ್‌ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.

ಶುಕ್ರವಾರ ಲೋಕಾಯುಕ್ತ ಕಚೇರಿಗೆ ತೆರಳಿ 394 ಪುಟಗಳ ದಾಖಲೆಯನ್ನು ಅಧಿಕಾರಿಗಳಿಗೆ ನೀಡಿ ಭೂ ಹಂಚಿಕೆ ಪ್ರಕರಣದ ಮಾಹಿತಿ ನೀಡಿದರು. ಕಾನೂನುಗಳನ್ನು ಗಾಳಿಗೆ ತೂರಿ ಖರ್ಗೆ ಕುಟುಂಬಸ್ಥರು “ಸಿದ್ಧಾರ್ಥ ವಿಹಾರ ಟ್ರಸ್ಟ್‌’ ಹೆಸರಿನಲ್ಲಿ ಸರಕಾರಿ ಸ್ವತ್ತನ್ನು ಮಂಜೂರು ಮಾಡಿಸಿಕೊಂಡಿದ್ದಾರೆ. ತಮ್ಮ ರಾಜಕೀಯ ಪ್ರಭಾವ ಬಳಸಿ ಕೋಟ್ಯಂತರ ರೂ. ಸರಕಾರಿ ಆಸ್ತಿ ಹಂಚಿಕೆ ಮಾಡಿಸಿಕೊಂಡಿದ್ದಾರೆ. ಈ ಸಂಬಂಧ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಒಂದೇ ಟ್ರಸ್ಟ್‌ 2
ಕಡೆ ಸಿಎ ನಿವೇಶನ
ಈ ವೇಳೆ ಮಾತನಾಡಿದ ಎನ್‌.ಆರ್‌. ರಮೇಶ್‌, ಖರ್ಗೆ ಕುಟುಂಬ ತಮ್ಮ ರಾಜಕೀಯ ಪ್ರಭಾವ ಬಳಸಿ ಬಿಡಿಎ ಮತ್ತು ಕೆಐಎಡಿಬಿಯಲ್ಲಿ ನಿವೇಶನ ಪಡೆದಿದೆ. “ಸಿದ್ದಾರ್ಥ ವಿಹಾರ ಟ್ರಸ್ಟ್‌’ ಸಂಸ್ಥೆ ಹೆಸರಿಗೆ 2 ಪ್ರತ್ಯೇಕ ಪ್ರದೇಶಗಳಲ್ಲಿ 2 ಪ್ರತ್ಯೇಕ ಸರಕಾರಿ ಸಂಸ್ಥೆಗಳ ಮೂಲಕ 2 ಸಿಎ ನಿವೇಶನಗಳನ್ನು ಹಂಚಿಕೆ ಮಾಡಿಸಿಕೊಳ್ಳುವ ಮೂಲಕ ಘೋರ ವಂಚನೆ ಎಸಗಿದ್ದಾರೆ ಎಂದರು.

2014ರಲ್ಲಿ ಈ ಟ್ರಸ್ಟ್‌ ಮೂಲಕ ಶಿಕ್ಷಣ ಉದ್ದೇಶಕ್ಕಾಗಿ ಬಿಟಿಎಂ ಲೇಔಟ್‌ನಲ್ಲಿ 4ನೇ ಹಂತದಲ್ಲಿ 30 ವರ್ಷಗಳ ಗುತ್ತಿಗೆ ಅವಧಿಗೆ ಬಿಡಿಎ ನಿವೇಶನ ಪಡೆದಿದ್ದು ಇದನ್ನು ಮರೆ ಮಾಚಿದೆ. ಈಗ ಯಲಹಂಕ ಬಳಿಯ ಬಾಗಲೂರಿನಲ್ಲಿ ಕೆಐಎಡಿಬಿ Hi -Tech Defence and Aerospace Park ಪ್ರದೇಶದಲ್ಲಿ ಖರ್ಗೆ ಕುಟುಂಬ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ 5 ಎಕರೆ ವಿಸ್ತೀರ್ಣದ ಸಿಎ ನಿವೇಶನ ಹಂಚಿಕೆ ಮಾಡಿಸಿಕೊಂಡಿದೆ ಎಂದು ಆರೋಪಿಸಿದರು.

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬಿಟಿಎಂ ಲೇಔಟ್‌ನಲ್ಲಿ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಸಿಎ ನಿವೇಶನ ನೀಡಲಾಗಿತ್ತು. ಈ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಖರ್ಗೆ ಪುತ್ರ ರಾಹುಲ್‌ ಖರ್ಗೆ ಅವರಿಗೆ ಬಾಗಲೂರಿನಲ್ಲಿ ಸಿಎ ನಿವೇಶ ಮಂಜೂರು ಮಾಡಲಾಗಿದೆ. ಕಾನೂನು ಗಾಳಿ ತೂರಿ ಜಾಗ ಮಂಜೂರು ಮಾಡಿರುವ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ| ಎಸ್‌. ಸೆಲ್ವಕುಮಾರ್‌ ಜತೆಗೆ ಸ್ವಜನ ಪಕ್ಷಪಾತ ತೋರಿರುವ ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಶೀಘ್ರ ರಾಜ್ಯಪಾಲರ ಭೇಟಿ
ಇದೊಂದು ಕೋಟ್ಯಂತರ ರೂ. ಭೂ ಹಗರಣವಾಗಿದ್ದು, ರಾಜ್ಯಪಾಲರನ್ನು ಭೇಟಿ ಮಾಡಿ ತನಿಖೆಗೆ ಅನುಮತಿ ನೀಡುವಂತೆ ಮನವಿ ಮಾಡುತ್ತೇನೆ. ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯ ಕೇಳಲಾಗಿದೆ. ಸೋಮವಾರ ಅವಕಾಶ ನೀಡುವ ನಿರೀಕ್ಷೆಯಿದೆ ಎಂದು ಪಾಲಿಕೆ ಮಾಜಿ ಸದಸ್ಯರೂ ಆಗಿರುವ ರಮೇಶ್‌ ತಿಳಿಸಿದರು.

ಸಿದ್ದುಗೆ ನಮ್ಮ ಬೆಂಬಲ
ಮುಡಾ ಪ್ರಕರಣದಲ್ಲಿ ಕಾನೂನು ಅದರ ಕ್ರಮವನ್ನು ಕೈಗೊಳ್ಳುತ್ತದೆ. ಸಂದರ್ಭ ಬಂದಾಗ ನಾವೂ ಪರಿಶೀಲಿಸುತ್ತೇವೆ. ಈಗಂತೂ ಏನೇನೂ ಇಲ್ಲ. ನಾವೀಗ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತೇವೆ.
– ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

Tragedy: ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರ ಶವ ಪತ್ತೆ…

Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

2-bng

Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

HD-Kumaraswamy

Congress Government: ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಂದು ಎಚ್‌ಡಿಕೆ ದಾಖಲೆ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

HD-Kumaraswamy

Congress Government: ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಂದು ಎಚ್‌ಡಿಕೆ ದಾಖಲೆ ಬಿಡುಗಡೆ

vidhana-Soudha

Cabinet Decision: ಸಿಬಿಐ ಪವರ್‌ ಕಟ್‌: ರಾಜ್ಯ ಸರಕಾರ ಸಮರ್ಥನೆ

Revenue-Dep

Revenue Department: ಬಗರ್‌ಹುಕುಂ ಅರ್ಜಿ ವಿಲೇವಾರಿಗೆ 8 ತಿಂಗಳ ಗಡುವು

Mallikharjun-kharge

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಲ್ಲಿಕಾರ್ಜುನ ಖರ್ಗೆ ಬಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Tragedy: ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರ ಶವ ಪತ್ತೆ…

Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

2-bng

Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.