![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 27, 2022, 11:49 AM IST
ಬೆಂಗಳೂರು: ಕ್ರೀಡಾಪಟುಗಳಿಗೆ ಪ್ಯಾರಾ ಸೈಲಿಂಗ್ ಹಾಗೂ ಕ್ರೀಡಾಕೂಟದ ಪ್ರಚಾರದ ಏರ್ ಕ್ರಾಫ್ಟ್ಗಳಿಗೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು.
ಸಚಿವ ಡಾ.ನಾರಾಯಣಗೌಡ ಅವರು ಸಸ್ನಾ 172 ವಿಮಾನದಲ್ಲಿ ಹಾರಾಟ ನಡೆಸುವ ಮೂಲಕ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಪ್ರಚಾರದ ಏರ್ ಕ್ರಾಫ್ಟ್ ಗಳಿಗೆ ಚಾಲನೆ ನೀಡಿದರು.
ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ನಲ್ಲಿ ಪಾಲ್ಗೊಂಡಿರುವ ಕ್ರೀಡಾಪಟುಗಳಿಗಾಗಿ ಏರ್ಪಡಿಸಿರುವ ಪ್ಯಾರಾ ಸೈಲಿಂಗ್ಗೆ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಇಂದಿನಿಂದ ಕ್ರೀಡಾಪಟುಗಳಿಗೆ ಉಚಿತವಾಗಿ ಪ್ಯಾರಾಸೈಲಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ.
ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ನ ಪ್ರಚಾರಕ್ಕೆ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಕೈಜೋಡಿಸಿದೆ. ಸರ್ಕಾರಿ ವೈಮಾನಿಕ ಶಾಲೆಯ ಎರಡು ವಿಮಾನಗಳ ಮೂಲಕ ಪ್ರಚಾರ ಆರಂಭಿಸಿದೆ. ಈ ಎರಡು ವಿಮಾನ ಪ್ರತಿದಿನ ಸಿಟಿರೌಂಡ್ಸ್ ಮಾಡಲಿವೆ. ಜೈನ್ ವಿವಿ ಸೇರಿದಂತೆ ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪುಷ್ಪಾನಮನ ಸಲ್ಲಿಸಲಾಗುತ್ತದೆ. ಜೊತೆಗೆ ಸಮಾರೋಪ ಸಮಾರಂಭದ ದಿನ ವಿಮಾನದ ಮೂಲಕ ಪುಷ್ಪ ನಮನ ಸಲ್ಲಿಸಲು ಕೂಡ ಚಿಂತನೆ ನಡೆಸಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.