KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!


Team Udayavani, Jun 21, 2024, 6:45 AM IST

14

ಬೆಂಗಳೂರು: ಕಳೆದ ಒಂದೂಕಾಲು ದಶಕಗಳಿಂದ ಕೋಲಾರ, ಕೆಜಿಎಫ್ ಭಾಗದಲ್ಲಿ ಸ್ಥಗಿತಗೊಂಡಿದ್ದ ಗಣಿ ಚಟುವಟಿಕೆ ಮತ್ತೆ ಗರಿಗೆದರಲಿದೆ. ಭಾರತ್‌ ಚಿನ್ನದ ಗಣಿ ಕಂಪನಿಗೆ (ಬಿಜಿಎಂಎಲ್‌) ಗಣಿ ಚಟುವಟಿಕೆ ನಡೆಸಲು ರಾಜ್ಯ ಸರಕಾರ ಕೊನೆಗೂ ಅಸ್ತು ಎಂದಿದೆ.

ಕೇಂದ್ರ ಸರಕಾರಿ ಸ್ವಾಮ್ಯದ ಸಾರ್ವಜನಿಕ ವಲಯದ ಸಂಸ್ಥೆಯಾದ ಬಿಜಿಎಂಲ್‌ನ ಗಣಿ ಗುತ್ತಿಗೆ ಅವಧಿಯು 2012ರಲ್ಲಿ ಮುಕ್ತಾಯಗೊಂಡಿತ್ತು. ರಾಜ್ಯ ಸರಕಾರದ ವಿಶೇಷ ಅನುಮತಿಗಾಗಿ ಇಷ್ಟು ವರ್ಷ ಕಾದು ಕುಳಿತಿದ್ದ ಬಿಜಿಎಂಎಲ್‌ಗೆ ಸಿಹಿ ಸುದ್ದಿ ಸಿಕ್ಕಿದ್ದು, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಈ ಕುರಿತು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಕಾನೂನು ಸಚಿವ ಎಚ್‌.ಕೆ. ಪಾಟೀಲ್‌, ಪ್ರಸ್ತುತ ಕೋಲಾರದ ಕೆಜಿಎಫ್ನಲ್ಲಿ ನಿಷ್ಕ್ರಿಯಗೊಂಡಿರುವ 1003.04 ಎಕರೆ ಗಣಿ ಗುತ್ತಿಗೆ ಪ್ರದೇಶದಲ್ಲಿನ 13 ಗಣಿ ತ್ಯಾಜ್ಯ (ಟೈಲಿಂಗ್‌ ಡಂಪ್‌)ಗಳಲ್ಲಿ ಗಣಿ ಚಟುವಟಿಕೆಗಳನ್ನು ಮುಂದುವರಿಸಲು ಗಣಿ ಮತ್ತು ಖನಿಜಗಳ ಅಭಿವೃದ್ಧಿ ಮತ್ತು ನಿಯಂತ್ರಣ ಕಾಯ್ದೆ (ಎಂಎಂಆರ್‌ಡಿ) ಸೆಕ್ಷನ್‌ 17ರ ಅನ್ವಯ ಷರತ್ತುಬದ್ಧ ಸಹಮತಿಯನ್ನು ಸರಕಾರ ನೀಡಿದೆ ಎಂಬುದನ್ನು ಸ್ಪಷ್ಟಪಡಿಸಿದರು.

ಗಣಿ ತ್ಯಾಜ್ಯದಲ್ಲಿ ಮಾತ್ರ ಚಟುವಟಿಕೆ:

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬಂಗಾರದಿನ್ನಿ ಹಾಗೂ ಸುತ್ತಮುತ್ತಲಿನ ಮತ್ತಿತರ ಗ್ರಾಮಗಳ 5213.21 ಹೆಕ್ಟೇರ್‌ ಪ್ರದೇಶದಲ್ಲಿ ಚಿನ್ನ, ಬೆಳ್ಳಿ, ಗ್ರಾಫೈಟ್‌ ಖನಿಜಗಳ ಗಣಿಗಾರಿಕೆ ನಡೆಸಲು 1973ರ ಆ. 9ರಿಂದ 20 ವರ್ಷಗಳ ಗುತ್ತಿಗೆಯನ್ನು ಬಿಜಿಎಂಎಲ್‌ ಸಂಸ್ಥೆಗೆ ನೀಡಲಾಗಿತ್ತು. 1993ರ ಆ. 9ರಿಂದ ಮತ್ತೆ 20 ವರ್ಷ ಎಂದರೆ 2013ರ ವರೆಗೆ ಗಣಿ ಗುತ್ತಿಗೆ ವಿಸ್ತರಿಸಲಾಗಿತ್ತು. 2012ರಲ್ಲಿ ಪುನಃ 20 ವರ್ಷ ಗಣಿ ಗುತ್ತಿಗೆ ನವೀಕರಿಸಲು ಬಿಜಿಎಂಎಲ್‌ ಅರ್ಜಿ ಸಲ್ಲಿಸಿತ್ತು. ಇದೀಗ ಗಣಿ ತ್ಯಾಜ್ಯಗಳಲ್ಲಿ ಮಾತ್ರ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಿದೆ. ಅಂದರೆ, ಈ ಹಿಂದೆ ಗಣಿಗಾರಿಕೆ ನಡೆಸಿ ಹೊರತೆಗೆದು 1003.04 ಎಕರೆಯ 13 ಕಡೆ ರಾಶಿ ಹಾಕಿರುವ ತ್ಯಾಜ್ಯಗಳಲ್ಲಿ ಇರುವ ಅದಿರನ್ನು ಸಂಸ್ಕರಣೆಗೆ ಒಳಪಡಿಸಲು ಅನುಮತಿಸಲಾಗಿದೆ.

ಬಾಕಿ ಮೊತ್ತದ ಬದಲು 2330 ಎಕರೆ:

ಒಟ್ಟಾರೆ 5,213 ಎಕರೆಯನ್ನು 1973ರಿಂದ ಬಿಜಿಎಂಎಲ್‌ ಗಣಿ ಚಟುವಟಿಕೆಗೆ ಬಳಸುತ್ತಿತ್ತು. ಈ ಪೈಕಿ 1003 ಎಕರೆಯಲ್ಲಿ ಗಣಿ ತ್ಯಾಜ್ಯಗಳ 13 ರಾಶಿಯನ್ನು ಸುರಿದಿದ್ದು, ಎಂಎಆರ್‌ಡಿ ಅನ್ವಯ ರಾಜ್ಯ ಸರಕಾರದ ಅನುಮತಿ ಇಲ್ಲದೆ ಯಾವುದೇ ಚಟುವಟಿಕೆಯನ್ನು ನಡೆಸುವಂತಿರಲಿಲ್ಲ. ಹೀಗಾಗಿ ಎಲ್ಲ ಚಟುವಟಿಕೆಗಳೂ ನಿಷ್ಕ್ರಿಯಗೊಂಡಿದ್ದವು. 2022-23ನೇ ಸಾಲಿನವರೆಗೆ ಬಿಜಿಎಂಎಲ್‌ನಿಂದ ರಾಜ್ಯ ಸರಕಾರಕ್ಕೆ 75,24,88,025 ರೂ.ಗಳು ಪಾವತಿಯಾಗಬೇಕಿತ್ತು. ಇದೀಗ 2023-24ನೇ ಸಾಲಿನ ಮೊತ್ತವನ್ನೂ ರಾಜ್ಯ ಸರಕಾರಕ್ಕೆ ಪಾವತಿಸಲು ಬಿಜಿಎಂಎಲ್‌ಗೆ ನಿರ್ದೇಶನ ನೀಡುವಂತೆ ಕೇಂದ್ರ ಸರಕಾರಕ್ಕೆ ಕೋರಿತ್ತು. 75.24 ಕೋಟಿ ರೂ.ಗಳ ಬದಲಿಗೆ ಇದೇ ಪ್ರದೇಶದಲ್ಲಿನ 2,330 ಎಕರೆಯನ್ನು ರಾಜ್ಯ ಸರಕಾರಕ್ಕೆ ನೀಡಲು ಬಿಜಿಎಂಎಲ್‌ ಒಪ್ಪಿಕೊಂಡಿದ್ದು, ಈ ಸ್ಥಳದಲ್ಲಿ ಕೈಗಾರಿಕಾ ವಸಾಹತು ಸ್ಥಾಪಿಸಲು ಸರಕಾರ ಯೋಜಿಸಿದೆ.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

Valmiki ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.