Koppala: ಓಮಿನಿ-ಲಾರಿ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
ಮೂವರಿಗೆ ಗಂಭೀರ ಗಾಯ; ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ
Team Udayavani, Aug 24, 2024, 8:03 AM IST
ಕೊಪ್ಪಳ: ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ದುರ್ಮರಣಕ್ಕೀಡಾದ ಘಟನೆ ಹುಬ್ಬಳ್ಳಿಯ ಹೆಬ್ಬಸೂರ ಗ್ರಾಮದ ಬಳಿ ಆ.24ರ ಶನಿವಾರ ಸಂಭವಿಸಿದೆ.
ಓಮಿನಿ ಮತ್ತು ಲಾರಿ ನಡುವೆ ಅಪಘಾತ ನಡೆದಿದ್ದು, ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.
ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ಜಾಫರಸಾಬ ಮಂಗಳೂರು(60), ಮುಸ್ತಫಾ (36), ಶೊಹೇಬ್(6) ಮೃತಪಟ್ಟವರಾಗಿದ್ದು, ಇಮಾಮ ಸಾಬ (60), ಹುಸೇನ ಬಾಷಾ (38), ಫೈಜಲ್ (8) ಗಂಭೀರ ಗಾಯಗೊಂಡವರಗಿದ್ದಾರೆ.
ಇವರು ಹಲಗಾಕ್ಕೆ ಚಿಕಿತ್ಸೆಗಾಗಿ ಓಮಿನಿ ವಾಹನದಲ್ಲಿ ತೆರಳಿದ್ದು, ರಾತ್ರಿ ವಾಪಾಸ್ ಬರುವ ವೇಳೆ ವಾಹನ ನಿಯಂತ್ರಣ ತಪ್ಪಿ ಲಾರಿಗೆ ಗುದ್ದಿದೆ ಎನ್ನಲಾಗಿದೆ.
ಅಪಘಾತದಲ್ಲಿ ತೀರ್ವ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಂದೇ ಕುಟುಂಬದ ಮೂವರ ಸಾವಿನ ಸುದ್ದಿ ಕೇಳಿ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.