![Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ](https://www.udayavani.com/wp-content/uploads/2024/06/mumbai-2-415x234.jpg)
Kota ಮೇಲ್ಮನೆ ಸ್ಥಾನ ನಳಿನ್ ಕುಮಾರ್ಗೆ ? ವಿಧಾನಸಭೆ ಮೂಲಕ ಪರಿಷತ್ ಪ್ರವೇಶಿಸಲು ಯತ್ನ
Team Udayavani, May 18, 2024, 7:20 AM IST
![Kota ಮೇಲ್ಮನೆ ಸ್ಥಾನ ನಳಿನ್ ಕುಮಾರ್ಗೆ ? ವಿಧಾನಸಭೆ ಮೂಲಕ ಪರಿಷತ್ ಪ್ರವೇಶಿಸಲು ಯತ್ನ](https://www.udayavani.com/wp-content/uploads/2024/05/KOTA-A-620x349.jpg)
ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರ ಮೇಲ್ಮನೆ ಸ್ಥಾನಕ್ಕೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆಯ್ಕೆಯಾಗ ಲಿದ್ದಾರೆಯೇ ಎಂಬ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಸದ್ಯದಲ್ಲೇ ವಿಧಾನಸಭೆಯ ಮೂಲಕ ವಿಧಾನಪರಿಷತ್ತಿಗೆ ಸದಸ್ಯರನ್ನು ಚುನಾಯಿಸಲಾಗುತ್ತದೆ. ಇದರ ಮೂಲಕ ಮೇಲ್ಮನೆ ಪ್ರವೇಶಿಸುವುದಕ್ಕೆ ಬಿಜೆಪಿಯಲ್ಲಿ ಪ್ರಯತ್ನ ಪ್ರಾರಂಭವಾಗಿದ್ದು, ನಳಿನ್ ಕುಮಾರ್ ಅವರಿಗೆ ಪರಿಷತ್ ಸ್ಥಾನ ಕಲ್ಪಿಸಬೇಕೆಂಬ ಚರ್ಚೆ ಪ್ರಾರಂಭವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ- ಚಿಕ್ಕಮಗಳೂರಿನಿಂದ ಗೆದ್ದರೆ ಪರಿಷತ್ತಿನಲ್ಲಿ ಅವರ ಸ್ಥಾನ ತೆರವಾಗುತ್ತದೆ. ಆ ಸ್ಥಾನಕ್ಕೆ ನಳಿನ್ ಅವರನ್ನು ಆಯ್ಕೆ ಮಾಡಬಹುದು ಎನ್ನಲಾಗುತ್ತಿದೆ. ಸದ್ಯದ ಲೆಕ್ಕಾಚಾರದ ಪ್ರಕಾರ ಬಿಜೆಪಿಗೆ ಈ ಚುನಾವಣೆಯಲ್ಲಿ ಮೂರು ಸ್ಥಾನ ಗಳು ಲಭಿಸಲಿವೆ. ಇದರ ಮೇಲೆ ಘಟಾನುಘಟಿ ನಾಯಕರು ಕಣ್ಣಿರಿಸಿದ್ದು, ಕರಾವಳಿ ಭಾಗದ ಶಾಸಕರು ಹಾಗೂ ಸಂಘ ಪರಿವಾರದ ಕೆಲವು ಹಿರಿಯರು ನಳಿನ್ ಪರ ವಾದ ಮಂಡಿಸಿದ್ದಾರೆ. ಇದರ ಜತೆಗೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೆಸರು ಕೂಡ ಪ್ರಸ್ತಾವವಾಗುತ್ತಿದೆ.
ನಳಿನ್ ಪರ ವಾದ ಮಂಡಿಸುವುದಕ್ಕೆ ಬಿಜೆಪಿ ನಾಯಕರು ಕೆಲವು ಪ್ರಬಲ ಕಾರಣಗಳನ್ನೇ ನೀಡಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅಧ್ಯಕ್ಷರಾದ ನಳಿನ್ ಸರಕಾರದ ವಿರುದ್ಧದ ಆರೋಪದ ಮಧ್ಯೆಯೂ ಸಂಘಟ ನಾತ್ಮಕವಾಗಿ ಉತ್ತಮವಾಗಿಯೇ ಕೆಲಸ ಮಾಡಿದ್ದಾರೆ. ಪಕ್ಷದ ಶಿಸ್ತಿನ ಗೆರೆ ಯನ್ನು ದಾಟಿಲ್ಲ. ಲೋಕ ಸಭಾ ಚುನಾವಣೆಗೆ ಬದಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸು ತ್ತೇವೆ ಎಂದಾಗಲೂ ವಿರೋಧ ವ್ಯಕ್ತಪಡಿಸದೆ ಪಕ್ಷದ ಜತೆಗೆ ನಿಂತರು. ಹೀಗಾಗಿ ಅವರಿಗೆ ಪಕ್ಷದ ಸಹಜ ನ್ಯಾಯದ ಪ್ರಕಾರವೇ ಬದಲಿ ವ್ಯವಸ್ಥೆ ಕಲ್ಪಿಸಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಇದಕ್ಕೆ ಪಕ್ಷದ ಎಲ್ಲ ಬಣಗಳು ಒಪ್ಪುವ ಸಾಧ್ಯತೆ ಹೆಚ್ಚಿದೆ. ಇದೆಲ್ಲದರ ಮಧ್ಯೆ ಅವರಿಗೆ ರಾಜ್ಯಸಭಾ ಸದಸ್ಯತ್ವ ನೀಡಬೇಕೆಂಬ ವಾದವೂ ಇದೆ. ಈ ಮಧ್ಯೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಯವರಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದ್ದು, ಮೇಲ್ಮನೆ ಸ್ಪರ್ಧೆಯಲ್ಲಿ ಅವರ ಹೆಸರು ಕೂಡ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
![Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ](https://www.udayavani.com/wp-content/uploads/2024/06/mumbai-2-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ](https://www.udayavani.com/wp-content/uploads/2024/06/mumbai-2-150x84.jpg)
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-150x92.jpg)
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
![4-belthanagdy](https://www.udayavani.com/wp-content/uploads/2024/06/4-belthanagdy-150x90.jpg)
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
![3-Shivamogga](https://www.udayavani.com/wp-content/uploads/2024/06/3-Shivamogga-150x90.jpg)
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
![2-gadag](https://www.udayavani.com/wp-content/uploads/2024/06/2-gadag-150x90.jpg)
Gadag: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.