ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಲಾಭ ಪಡೆಯಲು ಬೇರೆಯವರಿಗೆ ಅವಕಾಶ ನೀಡಬಾರದು: ಡಿಕೆಶಿ
Team Udayavani, Feb 21, 2022, 9:54 AM IST
ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಲಾಭ ಪಡೆಯುವುದಕ್ಕೆ ಬೇರೆಯವರಿಗೆ ಅವಕಾಶ ನೀಡಬಾರದು. ಶಾಂತಿ ಕಾಪಾಡುವುದಕ್ಕೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕುವೆಂಪು ಅವರು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದಾರೆ. ಶಾಂತಿ ಸುವ್ಯವಸ್ಥೆ ಕದಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಹೇಳಿದರು.
ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯ ನಾಯಕರಿಂದ ಮಾಹಿತಿ ಪಡೆದಿದ್ದೇನೆ. ತಕ್ಷಣ ಸೆಕ್ಷನ್ 144 ಜಾರಿಗೊಳಿಸಬೇಕು, ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜೀನಾಮೆಗೆ ಆಗ್ರಹ : ಘಟನೆಗೆ ಸಂಬಂಧಪಟ್ಟಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಶಾಸಕ ಪ್ರಿಯಾಂಕ ಖರ್ಗೆ ಆಗ್ರಹಿಸಿದ್ದಾರೆ.
ಗೃಹ ಸಚಿವರ ತವರು ಜಿಲ್ಲೆಯಲ್ಲಿ ಪದೇ ಪದೇ ಇಂಥ ಘಟನೆಗಳು ನಡೆಯುತ್ತಿವೆ. ಇದು ಗುಪ್ತಚರ ವ್ಯವಸ್ಥೆಯ ವೈಫಲ್ಯ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗದಲ್ಲಿ ಹಿಂದೂ ಸಂಘಟನೆ ಯುವಕನ ಬರ್ಬರ ಹತ್ಯೆ
ಈ ವೇಳೆ ಶಾಂತಿಯುತ ವಾತಾವರಣ ನಿರ್ಮಿಸಲು ಅಗತ್ಯ ಕ್ರಮ ವಹಿಸುವಂತೆ ಅರಗ ಜ್ಞಾನೇಂದ್ರಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಶಾಲಾ ಕಾಲೇಜುಗಳಿಗೆ ರಜೆ ಮತ್ತು ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯ ಬಗ್ಗೆಯೂ ಮಾಹಿತಿ ನೀಡಿದ ಗೃಹ ಸಚಿವರು ಮಾಹಿತಿ ನೀಡಿದ್ದು, ಘಟನೆ ಸಂಬಂಧ 10.30ಕ್ಕೆ ಸುದ್ದಿಗೊಷ್ಠಿ ನಡೆಸುವ ಬಗ್ಗೆಯೂ ಸಿಎಂಗೆ ಆರಗ ಮಾಹಿತಿ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.