Janthakal mining case; ಸಿದ್ದರಾಮಯ್ಯಗೆ ಸವಾಲು ಹಾಕಿದ ಎಚ್.ಡಿ.ಕುಮಾರಸ್ವಾಮಿ
Team Udayavani, Aug 18, 2024, 7:48 PM IST
ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರವು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಲ್ಲಿ ನನ್ನನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಪಡೆಯುವ ಬದಲು ಸುಪ್ರೀಂ ಕೋರ್ಟ್ಮೊರೆ ಹೋಗಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಭಾನುವಾರ (ಆ18) ಸವಾಲು ಹಾಕಿದ್ದಾರೆ.
ಸಿದ್ದರಾಮಯ್ಯ ಅವರ ಆರೋಪದ ವಿರುದ್ಧ ಕಿಡಿ ಕಾರಿದ ಎಚ್ ಡಿಕೆ ‘ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಅಗತ್ಯವೇನಿದೆ? ಎಷ್ಟು ದಿನಗಳಿಂದ ಈ ನಾಟಕ ಮಾಡುತ್ತಿದ್ದೀರಿ? ‘ ಎಂದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು,”2023, ನವೆಂಬರ್ 23 ರಂದು ಕುಮಾರಸ್ವಾಮಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ಕೋರಿ ಲೋಕಾಯುಕ್ತ ರಾಜ್ಯಪಾಲರಿಗೆ ವರದಿ ಕಳುಹಿಸಿದ್ದರೂ 2007ರ ಗಣಿಗಾರಿಕೆ ಪ್ರಕರಣದಲ್ಲಿ ಅನುಮತಿ ನೀಡಿರಲಿಲ್ಲ” ಎಂದು ಆರೋಪ ಮಾಡಿದ್ದರು.
ಜಂತಕಲ್ ಗಣಿಗಾರಿಕೆ ಪ್ರಕರಣದಲ್ಲಿ ವಿಷಯಗಳು ಅಂತಿಮವಾಗಿ ನಿರ್ಧರಿಸುವವರೆಗೆ ಬೇರೆ ಯಾವುದೇ ನ್ಯಾಯಾಲಯವು ಈ ವಿಷಯಗಳಿಗೆ ಸಂಬಂಧಿಸಿದಂತೆ ಯಾವುದೇ ಆದೇಶವನ್ನು ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.
“ಸುಪ್ರೀಂ ಕೋರ್ಟ್ಗೆ ಹೋಗದಂತೆ ನಿಮ್ಮನ್ನು ತಡೆಯುವವರು ಯಾರು? ನನ್ನ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಫೈಲ್ ಕಳುಹಿಸುವ ಈ ನಾಟಕ ನನ್ನನ್ನು ಹೆದರಿಸಲು ಮತ್ತು ನನ್ನನ್ನು ಮೌನಗೊಳಿಸಲು ಸಾಧ್ಯವೇ? ನೀವು ಮಾಡಿದ್ದು ಇದೇನಾ?” ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.