ಐರ್ಲೆಂಡ್‌ನಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಉಪನ್ಯಾಸ

ಈ-ಶ್ರಮ್ ನೊಂದಣಿ ಮೂಲಕ ಅಸಂಘಟಿತ ಕಾರ್ಮಿಕರಿಗೂ ಸವಲತ್ತು:ಕಾರ್ಮಿಕ ಸಂಕ್ಷೇಮವೇ ಆದ್ಯತೆ

Team Udayavani, Sep 2, 2022, 4:17 PM IST

1-asd

ಡುಬ್ಲಿನ್ : ವಿವಿಧ ಬಗೆಯ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳನ್ನು ನೀಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯಕ್ಕೆ ಪ್ರತಿಯಾಗಿ ಈ-ಶ್ರಮ್ ನೋಂದಣಿ ಮೂಲಕ ಶ್ರಮಿಕ ವರ್ಗವನ್ನು ಒಂದು ಚಾವಣಿ ಅಡಿಗೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಪ್ರತಿಪಾದಿಸಿದರು.

ಐರ್ಲೆಂಡ್ ವ್ಯಯಕ್ತಿಕ ಪ್ರವಾಸ ಕೈಗೊಂಡಿರುವ ಅವರು, ಅಲ್ಲಿ “ಭಾರತ-ಐರ್ಲೆಂಡ್ ಸ್ನೇಹ ಉಪನ್ಯಾಸ ಮಾಲಿಕೆಯಡಿ ಭಾರತೀಯರಿಗೆ ವಿದೇಶಗಳಲ್ಲಿನ ಅವಕಾಶ- ಕರ್ನಾಟಕದ ದೃಷ್ಟಿಕೋನ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ, ಭಾರತ ಸರ್ಕಾರವು ಅಸಂಘಟಿತ ಕಾರ್ಮಿಕರ ಬಗೆಗಿನ ದತ್ತಾಂಶ ಪಡೆದುಕೊಂಡು ಆ ಮೂಲಕ ಸವಲತ್ತುಗಳನ್ನು ಸುಲಲಿತವಾಗಿ ವಿತರಿಸುವ ಸಲುವಾಗಿ ಈ-ಶ್ರಮ್ ಪೋರ್ಟಲ್ ಆರಂಭಿಸಿದೆ, ಈ ಶ್ರಮ್ ಪೋರ್ಟಲ್‌ನಲ್ಲಿ ಕರ್ನಾಟಕವು 1.9 ಕೋಟಿ ಕಾರ್ಮಿಕರ ನೋಂದಣಿ ಗುರಿ ಹೊಂದಿದ್ದು, ಆ ಪೈಕಿ ಈವರೆಗೆ 70 ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಈ ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ ಸಂಪೂರ್ಣ ಉಚಿತವಾಗಿದ್ದು, ನೊಂದಾಯಿತ ಕಾರ್ಮಿಕರು ಪ್ರಧಾನ ಮಂತ್ರಿ ಸುರಕ್ಷ ಭಿಮಾ ಯೋಜನೆಯಡಿ ಸವಲತ್ತುಗಳನ್ನು ಪಡೆಯಲು ಅರ್ಹರಾಗಲಿದ್ದು, 2 ಲಕ್ಷ ರೂ.ವರೆಗೆ ಪರಿಹಾರ ಸಿಗಲಿದೆ ಎಂದ ಸಚಿವರು, ಭಾರತವು ಅಂತರಾಷ್ಟ್ರೀಯ ವಲಸೆ ಕಾರ್ಮಿಕರ ಕೇಂದ್ರವನ್ನು ತೆರೆದಿದ್ದು, ಈ ಕೇಂದ್ರವು ಶ್ರಮಿಕ ವರ್ಗದವರಿಗೆ ತಮ್ಮ ಕೌಶಲ್ಯಕ್ಕೆ ತಕ್ಕಂತೆ ವಿದೇಶಗಳಲ್ಲಿ ಕಾರ್ಯನಿರ್ವಹಿಸಲು ಅನುಕೂಲ ಮಾಡಿಕೊಡುತ್ತದೆ ಎಂದರು.

ಈ ಕೇಂದ್ರವು ವಲಸೆ ಕಾರ್ಮಿಕರಿಗೆ ಅಗತ್ಯ ತರಬೇತಿ ಜತೆಗೆ 10 ಲಕ್ಷ ರೂಪಾಯಿಗಳ ವಿಮೆಯೊಂದಿಗೆ ಸಾಮಾಜಿಕ ಭದ್ರತೆಯನ್ನೂ ನೀಡುತ್ತಿದೆ. ಇದರಿಂದ ಕಾರ್ಮಿಕರ ಆತ್ಮವಿಶ್ವಾಸದ ಜತೆಗೆ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶ್ರಮಿಕರ ಸಂಕ್ಷೇಮಕ್ಕೆ ಹತ್ತು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರತಿಪಾದಿಸಿದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರು, ಮಹಿಳೆಯರಿಗೆ ರಾತ್ರಿ ಪಾಳೆಯದಲ್ಲೂ ಕಾರ್ಯನಿರ್ವಹಿಸಲು ಅನುಕೂಲವಾಗುವಂತಹ ಕಾಯ್ದೆಯನ್ನು ಜಾರಿ ಮಾಡಲಾಗಿದೆ ಮತ್ತು ಈ ಕಾಯ್ದೆಯಡಿ ರಾತ್ರಿ ಪಾಳೆಯದಲ್ಲಿ ಕಾರ್ಯನಿರ್ವಹಿಸುವ ಸ್ತ್ರೀಯರಿಗೆ ಅಗತ್ಯ ಅನುಕೂಲ ಮತ್ತು ಸುರಕ್ಷತೆಗೆ ಆದ್ಯತೆ ನೀಡಲಾಗಿದೆ ಎಂದರು.

ಕರ್ನಾಟಕದಲ್ಲಿ ಸಂಘಟಿತ, ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಗಳ ಜತೆ ಜತೆಗೆ ವಿವಿಧ ಕಾರ್ಮಿಕ ಸಂಕ್ಷೇಮ ಸಮಿತಿಗಳು ಕಾರ್ಯನಿರ್ವಹಿಸುತ್ತಿದ್ದು ಕಾರ್ಮಿಕ ಮತ್ತು ಮಾಲೀಕರ ನಡುವಿನ ಸಂಬAಧ ಸುಧಾರಣೆಗೆ ಸತತವಾಗಿ ಶ್ರಮಿಸಲಾಗುತ್ತಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಅಸಂಘಟಿತ ಕಾರ್ಮಿಕರ ಮಂಡಳಿ, ಇಎಸ್‌ಐ ಸೇವೆಗಳು, ಬಾಯ್ಲರ್ ವಿಭಾಗಗಳು ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಕಾರ್ಮಿಕ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಆನಿವಾಸಿ ಭಾರತೀಯರಿಗೆ ವಿವರಿಸಿದ ಸಚಿವ ಹೆಬ್ಬಾರ್, ಕೋವಿಡ್ ಒಂದು ಮತ್ತು ಎರಡನೇ ಅಲೆ ವೇಳೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕಾರ್ಮಿಕರ ತ್ವರಿತ ಅಗತ್ಯಗಳಿಗೆ ಸ್ಪಂದಿಸಲಾಯಿತು ಎಂದರು.

ಜಾಗತಿಕ ಸಾಂಕ್ರಾಮಿಕ್ ಕೋವಿಡ್-19ರ ಸಂದರ್ಭದಲ್ಲಿ ಶ್ರಮಿಕ ವರ್ಗಕ್ಕೆ ಸಿದ್ಧಪಡಿಸಿದ ಆಹಾರ ಪದಾರ್ಥ, ರೇಷನ್ ಕಿಟ್, ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಜತೆಗೆ ಒಂದು ಬಾರಿ ಆರ್ಥಿಕ ಸಹಾಯಧನವನ್ನೂ ವಿತರಿಸಲಾಯಿತು. ರಾಜ್ಯ ಸರ್ಕಾರವು ಕಾರ್ಮಿಕ ಮತ್ತು ಮಾಲೀಕನ ನಡುವಿನ ಸಂಬಂಧ ಸುಧಾರಣೆಗೆ ಅನುವಾಗುವಂತೆ ಹಲವು ಕಾಯ್ದೆ ಕಾನೂನುಗಳನ್ನು ಜಾರಿ ಮಾಡುತ್ತಿದ್ದು, ಶ್ರಮಿಕರ ಸಂಕ್ಷೇಮಕ್ಕೆ ಆದ್ಯತೆ ನೀಡಲಾಗಿದೆ. ವಿವಿಧ ವರ್ಗಗಳ ಶ್ರಮಿಕರಿಗೆ ಪ್ರತಿ ಐದು ವರ್ಷಕ್ಕೊಮ್ಮೆ ಕನಿಷ್ಠ ವೇತನ ನಿಗಧಿಪಡಿಸಲಾಗುತ್ತಿದೆ ಎಂದ ಅವರು, ರಾಜ್ಯ ಸರ್ಕಾರವು ಕಾರ್ಮಿಕ ಕಾಯ್ದೆಗಳಿಗೆ ಪ್ರತಿಯಾಗಿ 29 ಕಾನೂನುಗಳನ್ನು ಜಾರಿ ಮಾಡಿದ್ದು, ಇದಕ್ಕಾಗಿ ಕಾರ್ಮಿಕ ನ್ಯಾಯಾಲಯಗಳನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದರು.

2006ರಲ್ಲಿ ಕೇಂದ್ರ ಸರ್ಕಾರದ ನೀತಿಯಂತೆ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸೆಸ್ ಮೂಲಕ ಸಂಪನ್ಮೂಲ ಕ್ರೂಢೀಕರಣ ಮಾಡುತ್ತಿದ್ದು, ಕಾರ್ಮಿಕರಿಗೆ ಅಗತ್ಯ ತರಬೇತಿ ಜತೆಗೆ ಸಾಮಗ್ರಿಗಳ ಕಿಟ್ ವಿತರಣೆ ಮಾಡುತ್ತಿದೆ. ಕಾರ್ಮಿಕರು ಮಾತ್ರವಲ್ಲದೆ, ಶ್ರಮಿಕರ ಕುಟುಂಬ ವರ್ಗಕ್ಕೂ ಹತ್ತು ಹಲವು ಯೋಜನೆಗಳನ್ನು ರೂಪಿಸಿ ಜಾರಿ ಮಾಡಲಾಗಿದೆ ಎಂದ ಕಾರ್ಮಿಕರ ಸಚಿವರು, ಆರೋಗ್ಯ ತಪಾಸಣಾ ಶಿಬಿರ, ಮೊಬೈಲ್ ಕ್ಲಿನಿಕ್, ಶ್ರಮಿಕರ ಮಕ್ಕಳ ಉನ್ನತ ವ್ಯಾಸಂಗಕ್ಕೆ ತರಬೇತಿ, ಶಿಷ್ಯ ವೇತನ ಜತೆಗೆ ಅಸಂಘಟಿತ ಕಾರ್ಮಿಕ ವಲಯಕ್ಕೂ ಆಶಾದೀಪ ಸೇರಿದಂತೆ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಲಾಗಿದೆ ಎಂದು ಕಾರ್ಮಿಕ ಇಲಾಖೆ ಸಾಧನೆಗಳ ಬಗ್ಗೆ ವಿವರಣೆ ನೀಡಿದರು.

ಇಎಸ್‌ಐ ಆಸ್ಪತ್ರೆಗಳ ಉನ್ನತೀಕರಣದ ಜತೆಗೆ ಶ್ರಮಿಕ ವರ್ಗಕ್ಕೆ ಆರೋಗ್ಯ ಸೇವೆಗಳು ಸುಲಭದಲ್ಲಿ ದಕ್ಕುವಂತೆ ಮಾಡುವ ಸಲುವಾಗಿ ಖಾಸಗಿ ಆಸ್ಪತ್ರೆಗಳೊಂದಿಗೂ ಸಮನ್ವಯ ಸಾಧಿಸಲಾಗಿದೆ. ಕೋವಿಡ್ ಸಂದರ್ಭ ಕಾರ್ಮಿಕ ಇಲಾಖೆಗೆ ಸವಾಲಿನ ಸಂದರ್ಭವನ್ನು ಸೃಷ್ಟಿಸಿತಾದರೂ, ಆಹಾರ ವಿತರಣೆ, ಸಾರಿಗೆ ವ್ಯವಸ್ಥೆ, ಆಹಾರ ಸಾಮಗ್ರಿಗಳ ವಿತರಣೆ ಜತೆಗೆ ಸಹಾಯಧನ ವಿತರಿಸಿರುವ ಬಗ್ಗೆ ವಿವರಣೆ ನೀಡಿದ ಕಾರ್ಮಿಕ ಸಚಿವರು ಕೋವಿಡ್ ಸಂದರ್ಭದಲ್ಲಿ ಶ್ರಮಿಕ ವರ್ಗಕ್ಕೆ ನಿಂತ ರಾಜ್ಯ ನಮ್ಮದು ಎಂದು ಹೆಮ್ಮೆಯಿಂದ ವಿವರಣೆ ನೀಡಿದರು.

ಸಭೆಯಲ್ಲಿ ಐರ್ಲೆಂಡ್‌ನ ಭಾರತೀಯ ರಾಯಭಾರಿ ಅಖಿಲೇಶ್ ಮಿಶ್ರ ಸೇರಿದಂತೆ ಹಲವು ಆನಿವಾಸಿ ಭಾರತೀಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.