ದಿಗ್ಗಜರಿಂದ ನೇರವಾಗಿ ಹೂಡಿಕೆ ಘೋಷಣೆ; 5 ವರ್ಷಗಳಲ್ಲಿ ಲಕ್ಷ ಕೋಟಿ; ಜಿಂದಾಲ್‌

7 ವರ್ಷಗಳಲ್ಲಿ ಲಕ್ಷ ಕೋಟಿ; ಅದಾನಿ

Team Udayavani, Nov 2, 2022, 11:45 PM IST

ದಿಗ್ಗಜರಿಂದ ನೇರವಾಗಿ ಹೂಡಿಕೆ ಘೋಷಣೆ; 5 ವರ್ಷಗಳಲ್ಲಿ ಲಕ್ಷ ಕೋಟಿ; ಜಿಂದಾಲ್‌

ಬೆಂಗಳೂರು: ಒಡಂಬಡಿಕೆ ಗಳ ಹೊರತಾಗಿ ಕೆಲವು ಪ್ರಮುಖ ಕೈಗಾರಿಕೋದ್ಯಮಿಗಳಿಂದ ನೇರವಾಗಿ ಸಾವಿರಾರು ಕೋಟಿ ರೂ. ಹರಿದು ಬರುವ ಭರವಸೆ ರಾಜ್ಯಕ್ಕೆ ದೊರಕಿತು.

ಹೂಡಿಕೆದಾರರ ಸಮಾವೇಶದ ಉದ್ಘಾಟನ ವೇದಿಕೆಯಲ್ಲಿ ಜಿಂದಾಲ್‌ ಗ್ರೂಪ್‌, ವೇದಾಂತ ಗ್ರೂಪ್‌, ಅದಾನಿ ಸೇರಿದಂತೆ ವಿವಿಧ ಕೈಗಾರಿಕಾ ದಿಗ್ಗಜರು ಮುಂಬರುವ ನಿಗದಿತ ವರ್ಷಗಳಲ್ಲಿ ರಾಜ್ಯದಲ್ಲಿ ತಮ್ಮ ಉದ್ಯಮಗಳನ್ನು ವಿಸ್ತರಿಸುವ ಮೂಲಕ ಸಾವಿರಾರು ಕೋಟಿ ರೂ. ಹೂಡಿಕೆ ಮಾಡುವ ಭರವಸೆ ನೀಡಿದರು.

ಆರಂಭದಲ್ಲಿ ಸಜ್ಜನ್‌ ಜಿಂದಾಲ್‌ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಜಿಂದಾಲ್‌ ಕಂಪೆನಿಯು ಒಂದು ಲಕ್ಷ ಕೋಟಿ ರೂ. ಹೂಡಿಕೆ ಮಾಡಿದೆ. ಇಲ್ಲಿ ಉದ್ಯಮಿಗಳಿಗೆ ಅತ್ಯಂತ ಪೂರಕ ವಾತಾವರಣ ಇದ್ದು, ಮುಂದಿನ ಐದು ವರ್ಷಗಳಲ್ಲಿ ಇನ್ನೂ ಒಂದು ಲಕ್ಷ ಕೋಟಿ ರೂ. ಹೂಡಿಕೆ ಮಾಡಲಾಗುವುದು ಎಂದು ಘೋಷಿಸಿದರು.

ಅದಿರು, ನವೀಕರಿಸಬಹುದಾದ ಇಂಧನ, ಬಂದರು ಮೂಲಸೌಕರ್ಯ, ಶಿಕ್ಷಣ, ಕೌಶಲ್ಯ ಮತ್ತಿತರ ಕ್ಷೇತ್ರಗಳಲ್ಲಿ ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗುವುದು ಎಂದ ಅವರು, ಖನಿಜ ಸಂಪತ್ತುಗಳ ಹರಾಜಿಗೆ ಸಂಬಂಧಿಸಿದಂತೆ ಇನ್ನಷ್ಟು ಸುಧಾರಣೆಗಳನ್ನು ಸರಕಾರ ತರುವ ಅವಶ್ಯಕತೆ ಇದೆ ಎಂದು ಅಭಿ ಪ್ರಾಯಪಟ್ಟರು.

50 ಸಾವಿರ ಕೋಟಿ ಹೂಡಿಕೆ
ವೇದಾಂತ ಗ್ರೂಪ್‌ನ ಪ್ರತೀಕ್‌ ಅಗರವಾಲ್‌ ಮಾತ ನಾಡಿ, ಮುಂದಿನ 5 ವರ್ಷಗಳಲ್ಲಿ ಕಂಪೆ ನಿಯು ವಿವಿಧ ರಾಜ್ಯಗಳಲ್ಲಿ ವಿದ್ಯುತ್‌ ಉತ್ಪಾದನೆಯಲ್ಲಿ 50 ಸಾವಿರ ಕೋಟಿ ಹೂಡಿಕೆ ಮಾಡಲು ಉದ್ದೇಶಿಸಿದೆ. ಈ ಪೈಕಿ ಕರ್ನಾಟಕದಲ್ಲಿ ಸಿಂಹಪಾಲು ಇರಲಿದೆ ಎಂದರು.

ಪ್ರಸ್ತುತ ಸಾವಿರ ಮೆ.ವಾ. ಪವನ ಮತ್ತು ಸೋಲಾರ್‌ ವಿದ್ಯುತ್‌ ಉತ್ಪಾದನ ಯೋಜನೆ    ಯನ್ನು ಕರ್ನಾಟಕದಲ್ಲಿ ಅನುಷ್ಠಾನಗೊಳಿಸ   ಲಾಗಿದ್ದು, ಈ ವಿದ್ಯುತ್‌ ಅನ್ನು ರಾಜಸ್ತಾನ, ಛತ್ತೀಸಗಡ, ಒರಿಸ್ಸಾಕ್ಕೆ ಪೂರೈಸಲಾಗುತ್ತಿದೆ. ಕಳೆದ ಆರು ವರ್ಷಗಳಲ್ಲಿ ಕಂಪೆನಿಯಿಂದ ಸರ್ಕಾರಕ್ಕೆ ಬರೀ ವರಮಾನವೇ ಎರಡು ಲಕ್ಷ ಕೋಟಿ ಪಾವತಿಸಲಾಗಿದೆ ಎಂದು ವಿವರಿಸಿದರು.

7 ವರ್ಷಗಳಲ್ಲಿ 1 ಲಕ್ಷ ಕೋಟಿ ಹೂಡಿಕೆ: ಗೌತಮ್‌ ಅದಾನಿ ಅವರ ಪುತ್ರ ಕರಣ್‌ ಅದಾನಿ, ವಿದ್ಯುತ್‌, ಅನಿಲ ಕೊಳವೆ ಮಾರ್ಗ, ಲಾಜಿಸ್ಟಿಕ್‌ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮುಂದಿನ ಏಳು ವರ್ಷಗಳಲ್ಲಿ ರಾಜ್ಯದಲ್ಲಿ ಒಂದು ಲಕ್ಷ ಕೋಟಿ ಹೂಡಿಕೆ ಮಾಡಲು ಉದ್ದೇಶಿಸಲಾಗಿದೆ ಎಂದರು.

ಈಗಾಗಲೇ ರಾಜ್ಯದಲ್ಲಿ 20 ಸಾವಿರ ಕೋಟಿ ಹೂಡಿಕೆ ಮಾಡಲಾಗಿದೆ. ಉಡುಪಿಯಲ್ಲಿ 1,200 ಮೆ.ವಾ. ಸಾಮರ್ಥ್ಯದ ವಿದ್ಯುತ್‌ ಉತ್ಪಾದನಾ ಘಟಕ, ಮಲ್ಟಿ ಮಾಡೆಲ್‌ ಲಾಜಿಸ್ಟಿಕ್‌ ಪಾರ್ಕ್‌ ಒಳಗೊಂಡಂತೆ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಭಾರತಿ ಎಂಟರ್‌ ಪ್ರೈಸಸ್‌ನ ಉಪಾಧ್ಯಕ್ಷ ರಾಜನ್‌ ಭಾರತಿ ಮಿತ್ತಲ್‌, ಟೆಲಿಕಮ್ಯುನಿಕೇಷನ್ಸ್‌ ನಲ್ಲಿ ರಾಜ್ಯದಲ್ಲಿ ಈಗಾಗಲೇ 35 ಸಾವಿರ ಕೋಟಿ ಮೊತ್ತದಷ್ಟು ಹೂಡಿಕೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಹೆಚ್ಚುವರಿ ಯಾಗಿ 20 ಸಾವಿರ ಕೋಟಿ ಹೂಡಿಕೆ ಗುರಿ ಹೊಂದಿದ್ದೇವೆ ಎಂದರು.

ಟಾಪ್ ನ್ಯೂಸ್

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Bajpe -ಕಟೀಲು ರಾಜ್ಯ ಹೆದ್ದಾರಿಯಲ್ಲಿ ಹೊಂಡ-ಗುಂಡಿ

2(1)

Kadaba police Station: ದಾಖಲೆ ಕಾಪಿಡುವುದೇ ಇಲ್ಲಿ ಸಾಹಸದ ಕೆಲಸ

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

1

Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.