ಅರ್ಕಾವತಿ ಪ್ರಕರಣ; ಕೆಂಪಣ್ಣ ಆಯೋಗದಿಂದ ಸಿದ್ದರಾಮಯ್ಯಗೆ ಕ್ಲೀನ್ ಚಿಟ್?
Team Udayavani, Aug 23, 2017, 1:55 PM IST
ಬೆಂಗಳೂರು: ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನ್ಯಾ.ಕೆಂಪಣ್ಣ ಆಯೋಗ ಕ್ಲೀನ್ ಚಿಟ್ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿವೆ.
ಕೆಲವು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿ ಮಾಡಿರುವ ಖಾಸಗಿ ಟಿವಿ ಚಾನೆಲ್ ಗಳು, ಅರ್ಕಾವತಿ ಬಡಾವಣೆಯನ್ನು ಕಾನೂನಿನ ಚೌಕಟ್ಟಿನಲ್ಲೇ ಡಿನೋಟಿಫಿಕೇಶನ್ ಮಾಡಿರುವುದು ಆಯೋಗದ ತನಿಖೆ ವೇಳೆ ಪತ್ತೆಹಚ್ಚಲಾಗಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯಗೆ ಆಯೋಗ ಕ್ಲೀನ್ ಚಿಟ್ ನೀಡಿರುವುದಾಗಿ ವಿವರಿಸಿದೆ.
ಏನಿದು ಪ್ರಕರಣ:
ಎಸ್ಎಂ ಕೃಷ್ಣ ಸರ್ಕಾರ 2003ರಲ್ಲಿ ರೂಪಿಸಿದ್ದ ಅರ್ಕಾವತಿ ಬಡಾವಣೆ ಯೋಜನೆಗೆ ಬಿಡಿಎ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭಿಸಿದಾಗಿನಿಂದಲೂ ವಿವಾದ ಹುಟ್ಟಿಕೊಂಡಿತ್ತು. ಸಿದ್ದರಾಮಯ್ಯ ಸರ್ಕಾರ ಬಿಡಿಎ ಶಿಫಾರಸಿನ ಅನ್ವಯ ಅರ್ಕಾವತಿ ಬಡಾವಣೆ ಯೋಜನೆಯನನು ಪುನರ್ ರೂಪಿಸಿ 541 ಎಕರೆ ಭೂಮಿಯನ್ನು ಅಧಿಸೂಚನೆ ವ್ಯಾಪ್ತಿಯಿಂದ ಕೈಬಿಟ್ಟಿತ್ತು.
ಕೋರ್ಟ್ ಆದೇಶದಂತೆ ಈ ಕ್ರಮ ಕೈಗೊಂಡಿರುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಆದರೆ ನಿಯಮಗಳನ್ನು ಗಾಳಿಗೆ ತೂರಿ ಅಧಿಸೂಚನೆ ವ್ಯಾಪ್ತಿಯಿಂದ ಕೈಬಿಟ್ಟಿರುವುದಾಗಿ ವಿರೋಧ ಪಕ್ಷಗಳು ಆರೋಪಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.