![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 16, 2024, 8:38 PM IST
ಮೈಸೂರು: ಪರಿಷತ್ ಚುನಾವಣೆಯಲ್ಲಿ ಬಂಡಾಯವಾಗಿ ಸ್ಪರ್ಧಿಸುತ್ತಿರುವ ರಘುಪತಿ ಭಟ್ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಅವರ ಜತೆ ಪಕ್ಷದ ಮುಖಂಡರು ಮಾತುಕತೆ ನಡೆಸುತ್ತಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಮಪತ್ರ ಹಿಂಪಡೆಯಲು ಇನ್ನೂ ಮೂರು ದಿನ ಕಾಲಾವಕಾಶ ಇದೆ. ಅಷ್ಟರಲ್ಲಿ ಎಲ್ಲವನ್ನೂ ಸರಿ ಮಾಡುತ್ತಾರೆ. ಕಾರ್ಯಕರ್ತರೇ ನಮ್ಮ ಪಕ್ಷದ ಬಲ. ಅವರ ಬಲದಿಂದಲೇ ನಾವು ಚುನಾವಣೆ ಗೆಲ್ಲುತ್ತೇವೆ ಎಂದರು.
ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ಡ್ರೈವ್ ಪ್ರಕರಣ ವಿಧಾನ ಪರಿಷತ್ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
“ಬಿಜೆಪಿಗೆ ಈಶ್ವರಪ್ಪರನ್ನು ಕರೆತರುವ ಮಾಹಿತಿ ಇಲ್ಲ’: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಗೆ ಕರೆತರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ರಾಜ್ಯ ಹಾಗೂ ಕೇಂದ್ರದ ನಾಯಕರು ಎಲ್ಲವನ್ನೂ ಸರಿ ಮಾಡುತ್ತಾರೆ ಎಂದು ಬಿ.ವೈ.ರಾಘವೇಂದ್ರ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಈಶ್ವರಪ್ಪ ಬಂಡಾಯದಿಂದ ಯಾವುದೇ ತೊಂದರೆಯಾಗಿಲ್ಲ. ಕಳೆದ ಬಾರಿಗಿಂತ ಹೆಚ್ಚಿನ ಮತಗಳಿಂದ ಗೆಲ್ಲುತ್ತೇನೆ. ಈಶ್ವರಪ್ಪ ಚುನಾವಣ ಆಯೋಗಕ್ಕೆ ದೂರು ಕೊಟ್ಟಿರುವ ಬಗ್ಗೆ ನನಗೆ ತಿಳಿದಿಲ್ಲ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.