ಸಾರಿಗೆ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದರೆ ಕಾನೂನು ಕ್ರಮ : ಸವದಿ


Team Udayavani, Apr 12, 2021, 6:59 PM IST

ಹದ್ಗ್ಸ

ಬೆಂಗಳೂರು : ಹಲವಾರು ಅಡೆತಡೆಗಳನ್ನು ಎದುರಿಸಿಯೂ ನಮ್ಮ ನಿರೀಕ್ಷೆಯಂತೆ ಇಂದು ಮಧ್ಯಾಹ್ನದ ವೇಳೆಗೆ ಸಾರಿಗೆ ನಿಗಮಗಳ 3200ಕ್ಕೂ ಹೆಚ್ಚು ಬಸ್ಸುಗಳು ಸಂಚರಿಸಿ ಸಾರ್ವಜನಿಕರಿಗೆ ಅನುಕೂಲವಾಯಿತು. ನಮ್ಮ ಮನವಿಗೆ ಓಗುಟ್ಟು ಕರ್ತವ್ಯಕ್ಕೆ ಹಾಜರಾಗಿರುವ ನಮ್ಮ ಸಾರಿಗೆ ಸಿಬ್ಬಂದಿಗಳಿಗೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಡಿಸಿಎಂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಹಲವು ಕಡೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ನಮ್ಮ ನೌಕರರನ್ನು ತಡೆಗಟ್ಟುವ ಪ್ರಯತ್ನಕ್ಕೆ ಮತ್ತು ಅವರ ಮೇಲೆ ಹಲ್ಲೆ ನಡೆಸುವುದಕ್ಕೆ ಕೆಲವರು ಮುಂದಾಗಿದ್ದು, ಅಂಥವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಪೊಲೀಸ್ ಠಾಣೆಗಳಲ್ಲೂ ಪ್ರಕರಣ ದಾಖಲಾಗಿವೆ. ಮುಂದೆಯೂ ಇದೇ ರೀತಿ ಪ್ರಕರಣಗಳು ವರದಿಯಾದರೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಮತ್ತು ನಮ್ಮ ನಿಗಮಗಳ ಅಧಿಕಾರಿಗಳ ಗಮನಕ್ಕೆ ತರಲು ಕೋರುತ್ತೇನೆ ಹಾಗೂ ಕರ್ತವ್ಯಕ್ಕೆ ಹಾಜರಾದ ನಮ್ಮ ಸಿಬ್ಬಂದಿಗಳಿಗೆ ಜೀವಬೆದರಿಕೆ ಎದುರಾದಾಗಲೂ ಎದೆಗುಂದದೆ ಸಾರ್ವಜನಿಕರಿಗೆ ಸಾರಿಗೆ ಸೇವೆ ಕಲ್ಪಿಸುವಲ್ಲಿ ಬದ್ಧತೆ ತೋರಿದ ನೌಕರರ ಮತ್ತು ಅಧಿಕಾರಿಗಳ ಕರ್ತವ್ಯ ಪ್ರಜ್ಞೆಯನ್ನು ನಮ್ಮ ಸರ್ಕಾರ ಮುಕ್ತಕಂಠದಿಂದ ಪ್ರಶಂಸಿಸುತ್ತದೆ.

ಪ್ರಯಾಣಿಕ ವಾಹನಗಳ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ  

ಸಾರಿಗೆ ನೌಕರರ ಮುಷ್ಕರ ನಿರತರಾಗಿರುವುದರಿಂದ ಖಾಸಗಿ ವಾಹನ ಮಾಲೀಕರು ಸರಕಾರದ ಕೋರಿಕೆಗೆ ಸ್ಪಂದಿಸಿ ಜನಸಾಮಾನ್ಯರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ.

ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯಿದೆ 1957ರ ಕಲಂ4(1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ದಿನಾಂಕ: 15.04.2021ರೊಳಗಾಗಿ ಪಾವತಿಸಬೇಕಾಗಿದ್ದ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಸಲು ದಿನಾಂಕ: 30.04.2021 ರವರೆಗೆ ಅವಧಿಯನ್ನು ವಿಸ್ತರಿಸಿ ಇಂದು ಆದೇಶಿಸಲಾಗಿದೆ. ಇದರ ಸೂಕ್ತ ಪ್ರಯೋಜನವನ್ನು ಪಡೆದುಕೊಂಡು ಸಾರ್ವಜನಿಕ ಸೇವೆಗೆ ಮತ್ತಷ್ಟು ಸ್ಪಂದಿಸಬೇಕೆಂದು ವಾಹನ ಮಾಲೀಕರಲ್ಲಿ ನಾನು ವಿನಂತಿಸುತ್ತೇನೆ.

ಪ್ರಸ್ತುತ ಕೋವಿಡ್ 2ನೇ ಅಲೆಯ ಅಪಾಯದ ಸಂದರ್ಭ ಎದುರಾಗಿದೆ. ಅಷ್ಟೇಅಲ್ಲ ಯುಗಾದಿ ಪ್ರಯುಕ್ತ ನೌಕರ ವರ್ಗದವರು ಮತ್ತು ವಿದ್ಯಾರ್ಥಿಗಳು, ಮತ್ತಿತರರು ತಮ್ಮ ಊರುಗಳಿಗೆ ತೆರಳಬೇಕಾದ ಅನಿವಾರ್ಯತೆ ಇರುವ ಪ್ರಯುಕ್ತ ಅವರಿಗೆ ಅನುಕೂಲವಾಗಲು ನೌಕರರು ಕೂಡಲೇ ಕರ್ತವ್ಯಕ್ಕೆ ಮರಳಬೇಕು.  ಚುನಾವಣಾ ನೀತಿ ಸಂಹಿತೆಯ ಅವಧಿ ಮುಕ್ತಾಯಗೊಂಡ ನಂತರ ನಮ್ಮ ನೌಕರ ಬಾಂಧವರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ನಾವು ಹಲವಾರು ಬಾರಿ ಮುಷ್ಕರ ನಿರತ ನೌಕರರಲ್ಲಿ ಈಗಾಗಲೇ ಮನವಿ ಮಾಡಿಕೊಂಡಿದ್ದೇವೆ. ಆದರೆ ಇದಕ್ಕೆ ಕೆಲವು ಹೊರಗಿನ ಪಟ್ಟಭದ್ರ ಹಿತಾಸಕ್ತಿಗಳು ಹುಳಿಹಿಂಡುತ್ತಾ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸುತ್ತಿದ್ದಾರೆ. ಇದರಿಂದಾಗಿ ದಿನದಿಂದ ದಿನಕ್ಕೆ ಈ ಮುಷ್ಕರವು ಸಾರ್ವಜನಿಕರ ಸಹಾನುಭೂತಿಯನ್ನೂ ಕಳೆದುಕೊಳ್ಳುತ್ತಿದೆ.

ಇದರಿಂದ ಹತಾಶೆಗೊಂಡಿರುವ ಕೆಲವರು ದಿನದಿಂದ ದಿನಕ್ಕೆ ವಾಮಮಾರ್ಗದ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಾ ಸಾರ್ವಜನಿಕರ ದೃಷ್ಟಿಯಲ್ಲಿ ನಗೆಪಾಟಲಿಗೆ ಈಡಾಗುತ್ತಿದ್ದಾರೆ. ಇದು ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ಖುಷಿಪಡುವ ಯತ್ನ ಎಂಬ ಕಟುಸತ್ಯವನ್ನು ಮುಷ್ಕರನಿರತ ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳುವುದು ಅಗತ್ಯ. ಆದಷ್ಟೂ ಸಹನೆಯಿಂದ ಈ ಸಮಸ್ಯೆಯನ್ನು ಬಗೆಹರಿಸಲು ಅತ್ಯಂತ ವಿವೇಚನೆಯಿಂದ ಸರ್ಕಾರವು ಹೆಜ್ಜೆ ಇಡುತ್ತಿದೆ. ಆದರೆ ಇದನ್ನು ನಮ್ಮ ದೌರ್ಬಲ್ಯ ಎಂದು ಯಾರೂ ಪರಿಗಣಿಸಬಾರದು ಮತ್ತು ನಮ್ಮ ತಾಳ್ಮೆಯನ್ನು ಮತ್ತಷ್ಟು ಪರೀಕ್ಷಿಸಲು ಯಾರಾದರೂ ಮುಂದಾದರೆ ಅಂಥವರ ವಿರುದ್ಧ ಮುಂದಿನ ಕ್ರಮಗಳು ಮತ್ತಷ್ಟು ಗಂಭೀರವಾಗಿರುತ್ತದೆ ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಲು ಬಯಸುತ್ತೇನೆ.

ಇದು ಬೇವು ಬೆಲ್ಲದ ಹಬ್ಬವಾದ ಯುಗಾದಿಯ ಪುಣ್ಯ ಸಂದರ್ಭ.  ಈ ಸಂದರ್ಭದಲ್ಲಿ ನಮ್ಮ ಸಾರಿಗೆ ನೌಕರರ ಬದುಕಿನಲ್ಲಿ ಬೇವಿಗಿಂತ ಬೆಲ್ಲದ ಸಿಹಿಯೇ ಹೆಚ್ಚು ಸಿಗುವಂತಾಗಲಿ ಎಂದು ಶುಭ ಹಾರೈಸುತ್ತೇನೆ. ಆದ್ದರಿಂದ ಅವರ ಬದುಕಿನಲ್ಲಿ ಬೆಲ್ಲದ ಸವಿ ಹೆಚ್ಚಾಗಲು ಸಾರಿಗೆ ನೌಕರರು ಕೂಡಲೇ ತಮ್ಮ ಕರ್ತವ್ಯಕ್ಕೆ ಹಾಜರಾಗಿ ಜನರ ಪ್ರೀತಿ ವಿಶ್ವಾಸಕ್ಕೆ ಭಾಜನರಾಗಬೇಕೆಂದು ನಾನು ಪುನರುಚ್ಛರಿಸುತ್ತೇನೆ ಎಂದು ಲಕ್ಷ್ಮಣ ಸವದಿ ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.