![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Nov 4, 2023, 5:45 PM IST
ಬೆಂಗಳೂರು: “ಕುಮಾರಸ್ವಾಮಿ ಅವರು ಎನ್ ಡಿಎ ಮೈತ್ರಿಕೂಟದವವರು. ನಮಗೂ ಎನ್ ಡಿಎಗೂ ಸಂಬಂಧವಿಲ್ಲ. ಮೊದಲು ಎನ್ ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಎಚ್,ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
‘ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ’ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ಕುಮಾರಕೃಪಾ ಅತಿಥಿ ಗೃಹದ ಬಳಿ ಶನಿವಾರ ಕೇಳಿದಾಗ ಈ ರೀತಿ ಉತ್ತರಿಸಿದರು.
“ಕುಮಾರಸ್ವಾಮಿ ಅವರ ಮಾತು ಕೇಳಿ ಬಹಳ ಸಂತೋಷವಾಗಿದೆ. ಸದ್ಯ ನಮಗೆ ರಾಜ್ಯದ ಜನತೆ 136 ಸೀಟು ಜತೆ ಅಧಿಕಾರ ಕೊಟ್ಟಿದ್ದಾರೆ. ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತಿದ್ದುವ ಕೆಲಸ ಮಾಡಲಿ. ಟೀಕೆ ಮಾಡುವುದನ್ನು ಬಿಟ್ಟು, ಸರ್ಕಾರವನ್ನು ತಿದ್ದಲಿ. ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರ ತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ. ಅವರಿಗಿರುವ ಅಪಾರ ಅನುಭವದ ಮೂಲಕ ನಮಗೆ ಮಾರ್ಗದರ್ಶನ ನೀಡಲಿ. ಈಗ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಮಸ್ಕಾರ” ಎಂದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.