![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 7, 2019, 3:04 AM IST
ಬಾಗಲಕೋಟೆ: “ಸರ್ಕಾರದ ಆದೇಶ ಏನಿದೆಯೋ ಅದನ್ನು ಪಾಲಿಸಿ. ಸಿದ್ದರಾಮಯ್ಯನವರ ಮಾತನ್ನು ಕೇಳಿ, ಟಿಪ್ಪು ಜಯಂತಿ ಆಚರಿಸಬೇಡಿ. ಅವರ ಮಾತು ಕೇಳುವುದಾದರೆ ನೀವು ರಜೆ ಹಾಕಿ ಮನೆಗೆ ಹೋಗಿ’ ಎಂದು ಮೈಸೂರು ಜಿಲ್ಲಾಡಳಿತದ ಅಧಿಕಾರಿಗೆ ವಸತಿ ಸಚಿವ ವಿ.ಸೋಮಣ್ಣ ಖಡಕ್ ಆಗಿ ಆದೇಶ ನೀಡಿದ್ದಾರೆ.
ಇಲ್ಲಿನ ತೋಟಗಾರಿಕೆ ವಿವಿಯಲ್ಲಿ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸುತ್ತಿದ್ದರು. ಈ ವೇಳೆ, ಮೈಸೂರು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಸಚಿವರಿಗೆ ದೂರವಾಣಿ ಕರೆ ಮಾಡಿ, ಟಿಪ್ಪು ಜಯಂತಿ ಆಚರಣೆ ಕುರಿತು ಕೇಳಿದರು. ಈ ವೇಳೆ, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಚಿವರು, “ಸರ್ಕಾರದ ಆದೇಶ ಏನಿದೆಯೋ ಅದನ್ನು ಪಾಲಿಸಿ. ಯಾರ ಮಾತೂ ಕೇಳಬೇಡಿ.
ಸಿದ್ದರಾಮಯ್ಯ ವಿಪಕ್ಷ ನಾಯಕರೆಂದು ಅವರ ಮಾತನ್ನು ಕೇಳಿ, ಟಿಪ್ಪು ಜಯಂತಿ ಆಚರಿಸಬೇಡಿ. ಅವರ ಮಾತು ಕೇಳುವುದಾದರೆ ನೀವು ರಜೆ ಹಾಕಿ ಮನೆಗೆ ಹೋಗಿ’ ಎಂದು ಗರಂ ಆದರು. “ನಾನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ಮೊದಲಿದ್ದ ಯಾವ ಅಧಿಕಾರಿಯನ್ನೂ ಬದಲಾಯಿಸಿಲ್ಲ. ಅವರಿಂದಲೇ ಮೈಸೂರು ದಸರಾ ಸಹಿತ ಎಲ್ಲ ಕೆಲಸ-ಕಾರ್ಯ ಮಾಡಿಸಲಾಗಿದೆ. ಆದರೆ, ಸರ್ಕಾರದ ಆದೇಶವನ್ನೂ ಉಲ್ಲಂಘಿಸಿದರೆ ಸುಮ್ಮನಿರಬೇಕೇ’ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.