![CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ](https://www.udayavani.com/wp-content/uploads/2024/12/cm-6-415x247.jpg)
Parliament: ಗಲ್ಲು ಶಿಕ್ಷೆ ಬೇಕಾದರೂ ವಿಧಿಸಲಿ- ಆಗಂತುಕ ಮನೋರಂಜನ್ ತಂದೆ ನೋವಿನ ಮಾತು
Team Udayavani, Dec 14, 2023, 12:25 AM IST
![manoranjan father](https://www.udayavani.com/wp-content/uploads/2023/12/manoranjan-father-620x349.jpg)
ಮೈಸೂರು: ಸಂಸತ್ ಭವನ ನಮ್ಮೆಲ್ಲರ ದೇಗುಲವಾಗಿದ್ದು, ಅಂತಹ ದೇಗುಲಕ್ಕೆ ನುಗ್ಗಿದ್ದು ತಪ್ಪು. ನನ್ನ ಮಗ ಮಾಡಿರುವುದು ದೊಡ್ಡ ತಪ್ಪು. ಆತ ಮಾಡಿರುವ ತಪ್ಪಿಗೆ ಗಲ್ಲುಶಿಕ್ಷೆ ಬೇಕಾದರೂ ವಿಧಿಸಲಿ- ಇದು ಸಂಸತ್ ಭವನದಲ್ಲಿ ಕೋಲಾಹಲ ಎಬ್ಬಿಸಿದ ಮೈಸೂರಿನ ಮನೋರಂಜನ್ ತಂದೆ ದೇವರಾಜ್ ನೋವಿನ ನುಡಿ.
ಸಂಸದ ಪ್ರತಾಪ್ ಸಿಂಹ ಹಾಗೂ ನಮಗೂ ಒಡನಾಟವಿದೆ. ನಾವು ಮೂಲತಃ ಹಾಸನ ಜಿಲ್ಲೆಯವರಾಗಿದ್ದು, ಪ್ರತಾಪ್ ಸಿಂಹ ಕೂಡ ಹಾಸನ ಜಿಲ್ಲೆಯವರು. ಕಳೆದ ಹದಿನೈದು ವರ್ಷಗಳಿಂದ ನಾವು ಮೈಸೂರಿನಲ್ಲಿ ನೆಲೆಸಿದ್ದೇವೆ. ನನ್ನ ಮಗ ಮನೋರಂಜನ್ ತುಂಬಾ ಒಳ್ಳೆಯವನಾಗಿದ್ದ. ಆದರೆ ಏಕೆ ಈ ರೀತಿ ಮಾಡಿದ್ದಾನೆಂದು ತಿಳಿಯುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಮನೋರಂಜನ್ ಬೆಂಗಳೂರನಲ್ಲಿಯೇ ಬಿಇ ಓದಿದ್ದ. ದಿಲ್ಲಿ, ಬೆಂಗಳೂರು ಅಂತ ಓಡಾಡುತ್ತಿದ್ದ. ಆದರೆ, ಆತ ಎಲ್ಲಿಗೆ ಹೋಗಿದ್ದಾನೆ ಅಂತ ಗೊತ್ತಿಲ್ಲ. ನಾನು ರೈತ, ಆತ ತುಂಬಾ ಚೆನ್ನಾಗಿ ಓದುತ್ತಿದ್ದ. 2014ರಲ್ಲೇ ಬಿಇ ಮುಗಿಸಿದ್ದ ಆತ, ಜಮೀನಿಗೆ ಬಂದು ಆಳುಗಳ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ. ಮಗ ಎಲ್ಲಿಗೆ ಹೋಗುತ್ತಾನೆ, ಯಾಕೆ ಹೋಗುತ್ತಾನೆ ಅಂತ ಹೇಳುತ್ತಿರಲಿಲ್ಲ. ನನ್ನ ಮಗ ಈ ರೀತಿ ಮಾಡಿದ್ದರೆ ಅದು ಅಕ್ಷಮ್ಯ. ಆತ ಯಾಕೆ ಹೀಗೆ ಮಾಡಿದ ಅಂತ ಗೊತ್ತಿಲ್ಲ. ಈ ಪ್ರಕರಣದಲ್ಲಿರುವ ಇತರರ ಬಗ್ಗೆಯೂ ನನಗೆ ಮಾಹಿತಿ ಇಲ್ಲ. ಆದರೆ, ಮಗ ಮಾತ್ರ ಆಗಾಗ್ಗೆ ಮನೆಗೆ ಬಂದು ಹೋಗುತ್ತಿದ್ದ. ಅಷ್ಟುಬಿಟ್ಟು ನನಗೆ ಏನೂ ಗೊತ್ತಿಲ್ಲ ಎಂದು ಹೇಳಿದರು.
ಪೊಲೀಸರಿಂದ ಶೋಧ: ಪಾಸ್ ಮೂಲಕ ಸಂಸತ್ ಭವನ ಪ್ರವೇಶಿಸಿದ್ದ ಮೂಲತಃ ಮೈಸೂರಿನ ಮನೋರಂಜನ್ ಅವರ ವಿಜಯನಗರದ ನಿವಾಸಕ್ಕೆ ಬುಧವಾರ ಮಧ್ಯಾಹ್ನ ಪೊಲೀಸರು ತೆರಳಿ ಮನೋರಂಜನ್ ಕುರಿತು ಮಾಹಿತಿ ಸಂಗ್ರಹಿಸಿದರು.
ವಿಜಯಗರ ಉಪವಿಭಾಗದ ಎಸಿಪಿ ಗಜೇಂದ್ರ ಪ್ರಸಾದ್, ವಿಜಯನಗರ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಅವರು ಮನೋರಂಜನ್ ಪೋಷಕರ ಬಳಿ ಮಾಹಿತಿ ಪಡೆದುಕೊಂಡು, ಆತನ ಕೊಠಡಿ, ಆತ ಓದುತ್ತಿದ್ದ ಪುಸ್ತಕಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದರು. ಜತೆಗೆ ಆತ ಓದಿದ ಶಾಲೆ, ಆತನ ಸ್ನೇಹಿತರ ಬಗ್ಗೆಯೂ ಮಾಹಿತಿ ಸಂಗ್ರಹಿಸಿದರು ಎನ್ನಲಾಗಿದೆ. ಮನೋರಂಜನ್ ತನ್ನ ಕೊಠಡಿಯಲ್ಲಿ ಇರಿಸಿಕೊಂಡಿದ್ದ ಕಾದಂಬರಿ, ಹೋರಾಟ, ಅಪರಾಧ ಸಂಬಂಧ ಹತ್ತಾರು ಪುಸ್ತಕ ಪರಿಶೀಲಿಸಿದ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡು ತೆರಳಿದರು.
ಟಾಪ್ ನ್ಯೂಸ್
![CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ](https://www.udayavani.com/wp-content/uploads/2024/12/cm-6-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Yathanal](https://www.udayavani.com/wp-content/uploads/2024/12/Yathanal-150x90.jpg)
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
![BY-Vijayendra](https://www.udayavani.com/wp-content/uploads/2024/12/BY-Vijayendra-1-150x90.jpg)
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
![Baduta-Mandya](https://www.udayavani.com/wp-content/uploads/2024/12/Baduta-Mandya-150x90.jpg)
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
![Minister Priyank Kharge stays away from Jayadeva Hospital inauguration ceremony](https://www.udayavani.com/wp-content/uploads/2024/12/kharge-4-150x86.jpg)
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
![Dinesh-Gundurao](https://www.udayavani.com/wp-content/uploads/2024/12/Dinesh-Gundurao-150x90.jpg)
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.