Lingayat ಮಹಾಸಭಾ; ಡಿ.23 ಮತ್ತು 24 ರಂದು 24ನೇ ಮಹಾ ಅಧಿವೇಶನ


Team Udayavani, Oct 6, 2023, 5:56 PM IST

lingayat

ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನ ಡಿ.23 ಮತ್ತು 24 ರಂದು ದಾವಣಗೆರೆಯ ಎಂ.ಬಿ.ಎ. ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ 24 ನೇ ಮಹಾ ಅಧಿವೇಶನವನ್ನು ಡಿ. 23 ಮತ್ತು 24 ರಂದು ದಾವಣಗೆರೆಯ ಎಂ.ಬಿ.ಎ. ಕಾಲೇಜು ಮೈದಾನ ದಲ್ಲಿ ನಡೆಸಲು ತೀರ್ಮಾನಿಸಲಾಯಿತು ಎಂದರು.

ಕರ್ನಾಟಕ ಮಾತ್ರವಲ್ಲ ಇಡೀ ಜಗತ್ತಿನ ವಿವಿಧೆಡೆ ಇರುವಂತಹ ಲಿಂಗಾಯತ ಸಮುದಾಯದವರನ್ನು ಒಂದು ಕಡೆ ಸೇರಿಸಿ ಈವರೆಗೆ ಸಮುದಾಯ ನಡೆದು ಬಂದಿರುವ ಹಾದಿ, ಸಮುದಾಯದ ಮುಂದಿರುವ ಸವಾಲು, ಅವುಗಳಿಗೆ ಪರಿಹಾರೋಪಾಯ ಮಾರ್ಗ ಇತರೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಸಮುದಾಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ನಿರ್ಣಯ, ಗೊತ್ತುವಳಿಗಳ ಮಂಡಿಸಿ, ಅಂಗೀಕರಿಸಿ ಸರ್ಕಾರದ ಮುಂದಿಡಲಾಗುವುದು ಎಂದು ತಿಳಿಸಿದರು.

ಎರಡು ದಿನಗಳ ಕಾಲ ನಡೆಯುವ ಮಹಾ ಅಧಿವೇಶನದಲ್ಲಿ ಸುತ್ತೂರು, ತುಮಕೂರು ಶ್ರೀಗಳು ಒಳಗೊಂಡಂತೆ ಗುರು- ವಿರಕ್ತರು, ಸ್ವಾಮೀಜಿಯವರು, ಜನಪ್ರತಿನಿಧಿಗಳು, ಸಮಾಜದ ಮುಖಂಡರು, ಗಣ್ಯರು, ವಿವಿಧ ಕ್ಷೇತ್ರ ದಲ್ಲಿನ ಸಾಧಕರು ಎಲ್ಲರನ್ನೂ ಆಹ್ವಾನಿಸಲಾಗುವುದು. ಅಧಿವೇಶನದಲ್ಲಿ ವಿಶೇಷವಾಗಿ ಮಹಿಳಾ. ರೈತ, ಯುವ ಜನಾಂಗದ ವಿಷಯಗಳ ಕುರಿತಾಗಿ ಗೋಷ್ಠಿ ನಡೆಸಲಾಗುವುದು ಎಂದು ತಿಳಿಸಿದರು.

ಪ್ರತಿ ಐದು ವರ್ಷಕ್ಕೊಮ್ಮೆ ಮಹಾ ಅಧಿವೇಶನ ನಡೆಸಿಕೊಂಡು ಬರಲಾಗುತ್ತದೆ. ಕಳೆದ ವರ್ಷವೇ ದಾವಣಗೆರೆ ಯಲ್ಲಿ ಅಧಿವೇಶನಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಕೊರೊನಾ, ವಿಧಾನ ಸಭಾ ಚುನಾವಣೆಯ ನೀತಿ ಸಂಹಿತೆ ಮುಂತಾದ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿತ್ತು. ಈಗ ಅದೇ ಮಹಾ ಅಧಿವೇಶನ ವನ್ನು ಡಿ.23 ಮತ್ತು 24 ರಂದು ದಾವಣಗೆರೆಯ ಎಂ.ಬಿ.ಎ. ಕಾಲೇಜು ಮೈದಾನದಲ್ಲಿ ನಡೆಸಲಾಗುವುದು. ಸಾಮಾನ್ಯವಾಗಿ ಮಹಾ ಅಧಿವೇಶನವನ್ನು ಮೂರು ದಿನಗಳ ಕಾಲ ನಡೆಸಲಾಗುತ್ತಿತ್ತು. ಬರದ ಹಿನ್ನೆಲೆಯಲ್ಲಿ ಎರಡು ದಿನಕ್ಕೆ ಸೀಮಿತಗೊಳಿಸಲಾಗಿದೆ. ಆದರೂ, ಅರ್ಥಪೂರ್ಣ, ಯಶಸ್ವಿಯಾಗಿ ನಡೆಸಲಾಗುವುದು ಎಂದು ತಿಳಿಸಿದರು.

ಡಿ.23 ಮತ್ತು 24 ರಂದು ದಾವಣಗೆರೆಯ ಎಂ.ಬಿ.ಎ. ಕಾಲೇಜು ಮೈದಾನದಲ್ಲಿ ನಡೆಯುವ ಮಹಾ ಅಧಿ ವೇಶನದಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಇತರೆ ರಾಜ್ಯಗಳ ಪ್ರತಿನಿಧಿಗಳೊಂದಿಗೆ ದೇಶ ಮತ್ತು ವಿದೇಶದಲ್ಲಿರುವ ಸಮುದಾಯ ಬಾಂಧವರು ಸಹ ಭಾಗವಹಿಸುವರು. ಮಹಾ ಅಧಿವೇಶನದ ಸವಿ ನೆನಪಿಗಾಗಿ ಸ್ಮರಣ ಸಂಚಿಕೆಯನ್ನ ಹೊರ ತರಲಾಗುವುದು ಎಂದು ತಿಳಿಸಿದರು.

ದಾವಣಗೆರೆಯಲ್ಲಿ ಡಿ.23 ಮತ್ತು 24 ರಂದು ನಡೆಯುವ 24ನೇ ಮಹಾ ಅಧಿವೇಶನವು ಯಶಸ್ವಿಯಾಗಿ ನಡೆ ಸುವ ನಿಟ್ಟಿನಲ್ಲಿ ವೇದಿಕೆ, ಮೆರವಣಿಗೆ, ಊಟ, ಸಾರಿಗೆ, ವಸತಿ, ಸ್ಮರಣ ಸಂಚಿಕೆ ಒಳಗೊಂಡಂತೆ ಹಲವಾರು ಸಮಿತಿಗಳ ರಚನೆ ಮಾಡಿ, ಜವಾಬ್ದಾರಿ ವಹಿಸಲಾಗುವುದು. ಇನ್ನೂ ಹಲವಾರು ಸಭೆ ನಡೆಸುವ ಮೂಲಕ ಹಲವಾರು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆ ಹಲವಾರು ವಿಷಯಗಳ ಬಗ್ಗೆ ಮಹಾಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು. ಕಳೆದ ಅಧಿವೇಶನಗಳಲ್ಲಿ ಕೈಗೊಂಡಿರುವ ನಿರ್ಣಯ ಗಳಂತೆ ವಿವಿಧ ಭಾಗದಲ್ಲಿ ಹಾಸ್ಟೆಲ್ ನಿರ್ಮಾಣ, ಐಎಎಸ್, ಐಪಿಎಸ್, ಕೌಶಲ್ಯ ತರಬೇತಿ ಕೇಂದ್ರಗಳ ಪ್ರಾರಂಭ ಒಳಗೊಂಡಂತೆ ಅನೇಕ ನಿರ್ಣಯಗಳು ಕಾರ್ಯರೂಪಕ್ಕೆ ಬಂದಿವೆ ಎಂದು ತಿಳಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಉಪಾ ಧ್ಯಕ್ಷರಾದ ಎಸ್.ಎಸ್. ಗಣೇಶ್, ಅಥಣಿ ಎಸ್. ವೀರಣ್ಣ, ಅಣಬೇರು ರಾಜಣ್ಣ, ರಾಜ್ಯ ಅಧ್ಯಕ್ಷ ಎನ್. ತಿಪ್ಪಣ್ಣ, ವಿಧಾನ ಪರಿಷತ್ತು ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಬಿ.ಸಿ. ಉಮಾಪತಿ, ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ್ ಬಿದರಿ, ಆಂಧ್ರಪ್ರದೇಶದ ಶಿವರಾಜ್, ಸರ್ವಮಂಗಳಮ್ಮ, ಜಿಲ್ಲಾ ಅಧ್ಯಕ್ಷ ದೇವರಮನೆ ಶಿವಕುಮಾರ್ ಇತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.