ಮಾಡದ ತಪ್ಪಿಗೆ ಕೂಲಿ ಕಾರ್ಮಿಕರು ಬಂಧಿ


Team Udayavani, Apr 9, 2020, 1:30 PM IST

state-news-tdy-1

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ 19 ನಿಯಂತ್ರಿಸಲು ದೇಶಾದ್ಯಂತ ಲಾಕ್‌ ಡೌನ್‌ ಘೋಷಣೆ ಮಾಡಿರುವುದರಿಂದ ಅತ್ಯಂತ ಸಂಕಷ್ಟಕ್ಕೆ ಸಿಲುಕಿರುವವರು ಕೂಲಿ ಹಾಗೂ ವಲಸೆ ಕಾರ್ಮಿಕರು.

ಮಾ.23 ರಂದು ಕೇಂದ್ರ ಸರ್ಕಾರ ಲಾಕ್‌ ಡೌನ್‌ ಘೋಷಣೆ ಮಾಡಿರುವುದರಿಂದ. ಬೆಂಗಳೂರು, ಮುಂಬೈ, ಪುಣೆ, ಚೆನ್ನೈ, ಹೈದರಾಬಾದ್‌ ಸೇರಿದಂತೆ ರಾಜ್ಯ ಹಾಗೂ ಹೊರ ರಾಜ್ಯಗಳ ಮಹಾನಗರಗಳಿಗೆ ಕೂಲಿ ಕೆಲಸಕ್ಕೆ ಹೋಗಿದ್ದ ಕಟ್ಟಡ ಹಾಗೂ ಇತರೆ ಕಾರ್ಮಿಕರು ಮಕ್ಕಳು, ವಯಸ್ಸಾದವರು, ಮಹಿಳೆಯರು ಸೇರಿದಂತೆ ಎಲ್ಲರೂ ತಮ್ಮ ಊರಿಗೆ ತೆರಳಲು ರಾತ್ರೋ ರಾತ್ರಿ ಗಂಟು ಮೂಟೆ ಕಟ್ಟಿಕೊಂಡು ಹೊರಟವರನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಆಯಾ ಜಿಲ್ಲಾ ಗಡಿ ಭಾಗದಲ್ಲಿಯೇ ಅವರನ್ನು ತಡೆದು ಕಲ್ಯಾಣ ಮಂಟಪ, ಸಮುದಾಯ ಭವನ ಸೇರಿದಂತೆ ಸಾರ್ವಜನಿಕ ವಸತಿ ಗೃಹಗಳಲ್ಲಿ ಇರಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ 19  ವೈರಸ್‌ ಹರಡುತ್ತಿರುವ ಪ್ರಮಾಣ ಗಮನಿಸಿದರೆ, ಏ.14 ರ ನಂತರವೂ ಲಾಕ್‌ಡೌನ್‌ ಸಡಿಲಗೊಳಿಸುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ.

ಆತಂಕದಲ್ಲಿ ಕಾರ್ಮಿಕರು: ತಮ್ಮದಲ್ಲದ ತಪ್ಪಿಗೆ ತೊಂದರೆಗೆ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರು ಹೊರ ರಾಜ್ಯಗಳ ಗಡಿ ಭಾಗದ ಜಿಲ್ಲೆಗಳಲ್ಲೂ ಸಾಕಷ್ಟು ಜನರಿದ್ದಾರೆ. ಕೇರಳದ ಕಾಸರಗೋಡು, ಗೋವಾ ಗಡಿ ಭಾಗ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯ ಗಳ ಗಡಿ ಭಾಗದಲ್ಲಿ ರಾಜ್ಯದ ಲಕ್ಷಾಂತರ ಕಾರ್ಮಿ ಕರು ಅಸಹಾಯಕರಾಗಿ ಅನ್ಯ ರಾಜ್ಯಗಳ ಆಡಳಿತ ವ್ಯಾಪ್ತಿಯಲ್ಲಿ ಸಿಲುಕಿಕೊಂಡಿದ್ದು ರಾಜ್ಯ ಗಡಿ ಪ್ರವೇಶಕ್ಕೆ ಅವರಿಗೆ ನಿರ್ಬಂಧ ಹೇರಲಾಗಿದೆ. ಅಲ್ಲದೆ ಬೇರೆ ಬೇರೆ ಜಿಲ್ಲೆಗಳ ಗಡಿ ಭಾಗದಲ್ಲಿಯೂ ತಡೆ ಹಿಡಿಯಲಾಗಿದೆ.

ಈಗಾಗಲೇ ಲಕ್ಷಾಂತರ ಕಾರ್ಮಿಕರು ಸರಿಯಾಗಿ ಊಟ, ವಸತಿ, ನಿದ್ರೆಯಿಲ್ಲದೆ 15 ದಿನಗಳನ್ನು ಸರ್ಕಾರದ ಅನಧಿಕೃತ ಬಂಧನದಲ್ಲಿ ದಿನ ಕಳೆದಿದ್ದಾರೆ. ಈಗ ಏ.14ರ ನಂತರವಾದರೂ ಸರ್ಕಾರ ತಮ್ಮನ್ನು ತಮ್ಮ ಊರುಗಳಿಗೆ ಕಳುಹಿಸುತ್ತದೆಯೋ ಇಲ್ಲವೋ ಎನ್ನುವ ಆತಂಕದಲ್ಲಿದ್ದಾರೆ. ಊರಿಗೆ ಕಳುಹಿಸಲು ಸಲಹೆ: ಕೂಲಿ ಕಾರ್ಮಿಕರು ಯಾವುದೇ ಸೋಂಕು ಇಲ್ಲದಿದ್ದರೂ ಗಡಿ ಭಾಗಗಳಲ್ಲಿ ಅಸಹಾಯಕತೆಯಿಂದ ಸರ್ಕಾರ ನೀಡುವ ಆಹಾರಕ್ಕಾಗಿ ಕೈಚಾಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಕಲ್ಯಾಣ ಮಂಟಪ ಹಾಗೂ ಸಮುದಾಯ ಭವನ ಗಳಲ್ಲಿ ಕೂಡಿ ಹಾಕಿರುವ ಕಾರ್ಮಿಕರನ್ನು ತಪಾಸಣೆ ಮಾಡಿ ಅವರ ಊರುಗಳಿಗೆ ಸರ್ಕಾರವೇ ಸಾರಿಗೆ ವ್ಯವಸ್ಥೆ ಮಾಡಿ ತಲುಪಿಸುವ ಕೆಲಸ ಮಾಡಬೇಕೆಂಬ ಸಲಹೆ ವ್ಯಕ್ತವಾಗಿದೆ.

ಪ್ರತಿಪಕ್ಷಗಳು ಮುಖ್ಯಮಂತ್ರಿಗಳು ಕರೆದಿದ್ದ ಸರ್ವ ಪಕ್ಷಗಳ ಸಭೆಯಲ್ಲಿ ಈ ಸಲಹೆ ನೀಡಿದ್ದವು ಎಂದು ತಿಳಿದು ಬಂದಿದೆ. ಇದರಿಂದ ಅತಂತ್ರದ ಭಯದಿಂದ ಜೀವನ ನಡೆಸುತ್ತಿರುವ ಕಾರ್ಮಿಕರಿಗೆ ತಮ್ಮ ಊರು ಹಾಗೂ ಮನೆಗಳಲ್ಲೇ ಇದ್ದೇವೆ ಎಂಬ ಧೈರ್ಯ ಬರುತ್ತದೆ. ಅಲ್ಲದೇ ಸರ್ಕಾರಕ್ಕೂ ಇದರಿಂದ ಆರ್ಥಿಕ ನಷ್ಟ ತಪ್ಪಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಪಡಿತರವೂ ಇಲ್ಲ: ಉತ್ತರ ಕರ್ನಾಟಕ ಭಾಗದ ಲಕ್ಷಾಂತರ ಕಾರ್ಮಿಕರು ಬೆಂಗಳೂರು ಹಾಗೂ ಹೊರ ರಾಜ್ಯಗಳಿಗೆ ಕೂಲಿಗೆ ತೆರಳಿದ್ದವರು ಈಗ ಸರ್ಕಾರದ ನಿಯಂತ್ರಣಾ ಕೇಂದ್ರಗಳಲ್ಲಿ ಬಂಧಿಯಾಗಿದ್ದಾರೆ.

ಹೀಗಾಗಿ ಅವರಿಗೆ ಸರ್ಕಾರದಿಂದ ಸಿಗುವ ಪಡಿತರವೂ ಸಿಗದಂತಾಗಿದೆ. ಸರ್ಕಾರ ಅವರನ್ನು ಸ್ವಂತ ಊರುಗಳಿಗೆ ಸ್ಥಳಾಂತರಿಸಿ, ಅವರ ಮನೆಗಳಿಗೆ ಪಡಿತರ ವಿತರಿಸಿ, ಸರ್ಕಾರ ಅನುಮತಿ ನೀಡುವವರೆಗೂ ಹೊರಗಡೆ ತಿರುಗಾಡದಂತೆ ಹೋಮ್‌ ಕ್ವಾರಂಟೈನ್‌ ಮಾಡಬಹುದು ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.

ಇನ್ನೂ ನಿರ್ಧರಿಸದ ಸರ್ಕಾರ :  ಸರ್ಕಾರದ ನಿಯಂತ್ರಣದಲ್ಲಿಟ್ಟುಕೊಂಡಿರುವ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸುವ ಬಗ್ಗೆ ಸರ್ಕಾರ ಯಾವುದೇ ರೀತಿಯ ಆಲೋಚನೆ ಮಾಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಸರ್ಕಾರ ಲಾಕ್‌ ಡೌನ್‌ ಸಡಿಲಗೊಳಿಸುವ ಬಗ್ಗೆ ನಿರ್ದೇಶನ ನೀಡುವವರೆಗೂ ರಾಜ್ಯ ಸರ್ಕಾರ ಯಥಾಸ್ಥಿತಿ ಕಾಯ್ದುಕೊಂಡು ಹೋಗುವ ಆಲೋಚನೆ ಯಲ್ಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಏ.14 ರ ನಂತರವೂ ಕೂಲಿ ಕಾರ್ಮಿಕರು ತವರು ಸೇರುವುದು ಅನುಮಾನ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬೇರೆ ರಾಜ್ಯ ಹಾಗೂ ಜಿಲ್ಲೆಗಳ ಗಡಿಗಳಲ್ಲಿ ಸಿಲುಕಿಕೊಂಡಿರುವ ಕೂಲಿ ಕಾರ್ಮಿಕರನ್ನು ತಪಾಸಣೆ ಮಾಡಿ, ಅವರಿಗೆ ಯಾವುದೇ ಸೋಂಕು ಇಲ್ಲದಿರುವುದನ್ನು ಖಚಿತಪಡಿಸಿ ಕೊಂಡು, ಅವರ ಊರುಗಳಿಗೆ ಕಳುಹಿಸಿಕೊಡಲು ಸರ್ಕಾರ ವ್ಯವಸ್ಥೆ ಮಾಡಬೇಕು. ಈ ಕುರಿತು ಮುಖ್ಯಕಾರ್ಯದರ್ಶಿಯೊಂದಿಗೂ ಮಾತನಾಡಿದ್ದೇನೆ. ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕ

ಸರ್ಕಾರ ಗುರುತಿಸಿರುವ ನಿಯಂತ್ರಣ ಕೇಂದ್ರಗಳಲ್ಲಿ ವಾಸವಿರುವ ಕೂಲಿ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ನಿರ್ಧಾರವಾಗಿಲ್ಲ. ಮೌನೀಶ್‌ ಮುದ್ಗಿಲ್‌, ಕೋವಿಡ್ 19  ನಿಯಂತ್ರಣ ನೋಡಲ್‌ ಅಧಿಕಾರಿ

 

ಶಂಕರ ಪಾಗೋಜಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.