Lok Sabha Election 2024 ಕಾಂಗ್ರೆಸ್‌ ಪಟ್ಟಿ: ಇನ್ನೂ 21 ಕ್ಷೇತ್ರಗಳು ಬಾಕಿ

ಅಳೆದು-ತೂಗಿ ಆಯ್ಕೆ ಅಂತಿಮಗೊಳಿಸುವ ಉದ್ದೇಶದಲ್ಲಿ ಹೈಕಮಾಂಡ್‌

Team Udayavani, Mar 9, 2024, 7:20 AM IST

Lok Sabha Election 2024 ಕಾಂಗ್ರೆಸ್‌ ಪಟ್ಟಿ: ಇನ್ನೂ 21 ಕ್ಷೇತ್ರಗಳು ಬಾಕಿ

ಬೆಂಗಳೂರು: ರಾಜಧಾನಿ ಬೆಂಗಳೂರು ಸಹಿತ ಒಟ್ಟು 21 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಾಕಿ ಉಳಿಸಿಕೊಂಡಿರುವ ಕಾಂಗ್ರೆಸ್‌ ಹೈಕಮಾಂಡ್‌ ನಡೆ ಈಗ ಕುತೂಹಲ ಮೂಡಿಸಿದೆ.

ಯಾವುದೇ ಗೊಂದಲಗಳಿಲ್ಲದ ಒಂದೇ ಹೆಸರಿರುವ ಕ್ಷೇತ್ರಗಳನ್ನು ಮಾತ್ರ ಅಂತಿಮಗೊಳಿಸಿರುವ ಕಾಂಗ್ರೆಸ್‌, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆಯಂತೂ ನೀಡಿದೆ. ಆದರೆ ಅಂತಿಮಗೊಳ್ಳದೆ ಉಳಿದಿರುವ 21 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ. ಇದರಲ್ಲಿ ಪ್ರತಿಷ್ಠಿತ ಕಣಗಳಿವೆ. ಕೆಲವೆಡೆ ಸಚಿವರನ್ನು ಅಗ್ನಿಪರೀಕ್ಷೆಗೆ ಗುರಿಪಡಿಸಲಿರುವ ಅಖಾಡಗಳೂ ಇವೆ. ಎದುರಾಳಿಗಳ ನಡೆಯನ್ನು ಕಾದುನೋಡುವ ತಂತ್ರವೂ ಹೈಕಮಾಂಡ್‌ ನಡೆಯ ಹಿಂದಿದೆ ಎನ್ನಲಾಗಿದೆ.

ಇದೆಲ್ಲಕ್ಕಿಂತ ಮುಖ್ಯವಾಗಿ ದಿಲ್ಲಿಯಲ್ಲಿ ನಡೆದ ಅಭ್ಯರ್ಥಿಗಳ ಈ ಆಯ್ಕೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ಆಯ್ಕೆ ಅಂತಿಮಗೊಂಡರೆ ರಾಜಕೀಯವಾಗಿ ಬೇರೆ ರೀತಿಯ ಸಂದೇಶ ರವಾನೆ ಆಗಬಹುದು ಎಂಬ ಲೆಕ್ಕಾಚಾರವೂ ಇದೆ. ಜತೆಗೆ ಹಲವೆಡೆ ಪೈಪೋಟಿ ಇದ್ದು, ಎರಡಕ್ಕಿಂತ ಹೆಚ್ಚು ಹೆಸರು ರೇಸ್‌ನಲ್ಲಿವೆ. ಒಬ್ಬರ ಆಯ್ಕೆ ಮತ್ತೊಬ್ಬರ ಮನಸ್ತಾಪ ಅಥವಾ ಭಿನ್ನಮತಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಇದಲ್ಲದೆ, ಕೆಲವೆಡೆ ತಮ್ಮ ನಾಯಕರ ಸಂಬಂಧಿಕರನ್ನೂ ಕಣಕ್ಕಿಳಿಸುವ ಒತ್ತಡವೂ ನಡೆದಿದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಅಳೆದು-ತೂಗಿ ಆಯ್ಕೆ ಅಂತಿಮಗೊಳಿಸುವ ಉದ್ದೇಶ ಇದೆ ಎಂದು ಮೂಲಗಳು ತಿಳಿಸಿವೆ.

ಮಾ. 11ರ ಬಳಿಕ ಮತ್ತೊಂದು ಪಟ್ಟಿ
ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮೊದಲ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. ಮಾ. 11ರಂದು ಸ್ಕ್ರೀನಿಂಗ್‌ ಕಮಿಟಿ ಸಭೆ ಬಳಿಕ ಆ ಹೆಸರುಗಳು ಅಂತಿಮವಾಗಲಿವೆ ಎಂದು ಶುಕ್ರವಾರ ಡಿ.ಕೆ. ಶಿವಕುಮಾರ್‌ ಹೇಳಿದರು.

ಸ್ಥಳೀಯ ಶಾಸಕರು, ಮುಖಂಡರ ಜತೆ ಚರ್ಚಿಸಿದಾಗ ಅವರು ಯಾರ ಹೆಸರನ್ನು ಪ್ರಸ್ತಾವ ಮಾಡಿರುತ್ತಾರೋ ಹಾಗೂ ನಮ್ಮ ಸಮೀಕ್ಷೆಗಳ ಆಧಾರದಲ್ಲಿ ನಾವು ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ ಎಂದರು.

17 ಕ್ಷೇತ್ರಗಳಿಗೆ ನೀವು ಪಟ್ಟಿ ತೆಗೆದುಕೊಂಡು ಹೋಗಿದ್ದಿರಿ ಎಂದು ಕೇಳಿದಾಗ, ನಾನು ಎಷ್ಟು ಪಟ್ಟಿ ತೆಗೆದುಕೊಂಡು ಹೋಗಿದ್ದೆ ಎಂಬುದು ಮುಖ್ಯವಲ್ಲ. ಇದು ನನ್ನ ಪಕ್ಷ ಅಲ್ಲ. ನಮ್ಮ ಹೈಕಮಾಂಡ್‌ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ. ವೇಣುಗೋಪಾಲ್, ರಾಹುಲ್‌ ಗಾಂಧಿ ಸಹಿತ ಅನೇಕ ನಾಯಕರು ಚರ್ಚೆ ಮಾಡುತ್ತಾರೆ. ನಾವು ಕೇವಲ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾವ ಮಾಡುತ್ತೇವೆ ಅಷ್ಟೇ. ನಮ್ಮ ಪಕ್ಷದ ಸಿಇಸಿ ಸಮಿತಿ ಸದಸ್ಯರು ಅವರದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುತ್ತಾರೆ. ಇವರೆಲ್ಲ ಸೇರಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಈಗ ಪ್ರಕಟವಾಗಿರುವ 7 ಕ್ಷೇತ್ರಗಳ ಪೈಕಿ ಎಷ್ಟರಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಕೇಳಿದಾಗ, ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದರು.

ಟಾಪ್ ನ್ಯೂಸ್

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Raichur; ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Transfer of 23 IAS officers including five District Collectors

IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

12-uv-fusion

UV Fusion: ಕಾಲೆಳೆಯುವ ಕೈಗಳು ನಮ್ಮದಾಗದಿರಲಿ…

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

11-bng

Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್‌

10-bng

Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.