Lok Sabha Polls; ನಾಮಪತ್ರ ಹಿಂಪಡೆಯದಿದ್ದರೆ ಈಶ್ವರಪ್ಪ ಕಿಕ್ಔಟ್?
ಏ.19ರವರೆಗೆ ಕಾದು ನೋಡಲು ಬಿಜೆಪಿ ನಿರ್ಧಾರ ; ಸಂಘದ ಹಿರಿಯರಿಂದ ಸಂಧಾನ ಆರಂಭ
Team Udayavani, Apr 12, 2024, 8:15 PM IST
ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ಏಪ್ರಿಲ್ 19ರವರೆಗೆ ಕಾದು ನೋಡಲು ಬಿಜೆಪಿ ನಿರ್ಧರಿಸಿದೆ.
ಶಿವಮೊಗ್ಗದಲ್ಲಿ ಈಶ್ವರಪ್ಪ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಎಷ್ಟೇ ಸಿಟ್ಟಿದ್ದರೂ ಈಶ್ವರಪ್ಪ ಪಕ್ಷದ ವಿರುದ್ಧ ಬಂಡಾಯ ಸ್ಪರ್ಧೆ ಮಾಡಲಾರರು ಎಂಬ ಪಕ್ಷದ ನಂಬಿಕೆ ಸದ್ಯಕ್ಕೆ ಹುಸಿಯಾಗಿದೆ. ಆದರೆ ನಾಮಪತ್ರ ಸಲ್ಲಿಸಿದರೂ ಅವರು ಅಂತಿಮವಾಗಿ ಕಣದಿಂದ ಹಿಂದಕ್ಕೆ ಸರಿಯುತ್ತಾರೆಂಬುದು ಸಂಘ ಪರಿವಾರದ ಹಿರಿಯರ ಬಲವಾದ ನಂಬಿಕೆಯಾಗಿದೆ.
ಹೀಗಾಗಿ ಏ.19ರವರೆಗೆ ಕಾದು ನೋಡಿ ಆ ಬಳಿಕ ಕ್ರಮ ತೆಗೆದುಕೊಳ್ಳಲು ಬಿಜೆಪಿ ನಿರ್ಧರಿಸಿದೆ.ಬಂಡಾಯ ಶಮನದ ಬಗ್ಗೆ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲಾ ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದು ಕೊನೆಯ ಕ್ಷಣದವರೆಗೂ ಕಾದು ನೋಡುವಂತೆ ಸೂಚನೆ ನೀಡಿದ್ದಾರೆ.
ಈ ಮಧ್ಯೆ ಸಂಘದ ಹಿರಿಯರು ತೆರೆಮರೆಯಲ್ಲಿ ಸಂಧಾನ ಕಾರ್ಯ ಪ್ರಾರಂಭಿಸಿದ್ದಾರೆ. ಒಂದು ವೇಳೆ ಸಂಧಾನ ಯಶಸ್ವಿಯಾಗದಿದ್ದರೆ ಪಕ್ಷದಿಂದ ಉಚ್ಚಾಟನೆಗೊಳ್ಳುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.