Iron ಅದಿರಿಗೆ ಕಡಿಮೆ ಮೌಲ್ಯ: ಪ್ರಕರಣಕ್ಕೆ ಮರುಜೀವ

ರಾಯಧನ ನಿಗದಿಯಲ್ಲಿ ಕಳ್ಳಾಟ; ಪಿಎಸಿ ಮುಂದೆ ಕಡತಗಳ ರಾಶಿ

Team Udayavani, Nov 14, 2023, 7:15 AM IST

Iron ಅದಿರಿಗೆ ಕಡಿಮೆ ಮೌಲ್ಯ: ಪ್ರಕರಣಕ್ಕೆ ಮರುಜೀವIron ಅದಿರಿಗೆ ಕಡಿಮೆ ಮೌಲ್ಯ: ಪ್ರಕರಣಕ್ಕೆ ಮರುಜೀವ

ಬೆಂಗಳೂರು: ಬಳ್ಳಾರಿ ಗಣಿಧಣಿಗಳ ವಿರುದ್ಧ ಪಾದಯಾತ್ರೆ ನಡೆಸಿ 2013ರಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದ ಸಿದ್ದರಾಮಯ್ಯ ನವರ ಆಡಳಿತ ಕಾಲದಲ್ಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸರಕಾರದ ಕಣ್ಣಿಗೆ ಮಣ್ಣೆರಚಿ ರಾಯಧನ ನಿಗದಿಯಲ್ಲಿ ಕಳ್ಳಾಟವಾಡಿದ ಪ್ರಕರಣಕ್ಕೆ ಈಗ ಮರುಜೀವ ಸಿಗುವ ಸಾಧ್ಯತೆ ಇದೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯ ಮುಂದೆ ಇದಕ್ಕೆ ಸಂಬಂಧಿಸಿದ ಕಡತಗಳ ರಾಶಿ ಈಗ ಮಂಡನೆಯಾಗಿದೆ.

ಮಾಜಿ ಸಚಿವ ಆರ್‌. ಅಶೋಕ್‌ ಅಧ್ಯಕ್ಷತೆಯ ಪಿಎಸಿಯ ಮುಂದೆ 2009-10, 2014-15ರಲ್ಲಿ ನಡೆದ ರಾಯಧನ ವಂಚನೆ ಪ್ರಕರಣದ ವಿಚಾರಣೆ ಮತ್ತೆ ಪ್ರಾರಂಭವಾಗಿದ್ದು, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸಮಿತಿ ಮುಂದಾದರೆ ಅಧಿಕಾರಿಗಳು ಹಾಗೂ ಗಣಿ ಗುತ್ತಿಗೆದಾರರಿಗೆ ಕಂಟಕ ಸೃಷ್ಟಿಯಾಗುವ ಸಾಧ್ಯತೆ ಇದೆ. ವಾಣಿಜ್ಯ ಮತ್ತು ಕೈಗಾರಿಕೆ, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಪಾತ್ರ ಈ ಹಗರಣದಲ್ಲಿ ಅದಿರು ನಿಕ್ಷೇಪದಂತೆ ಬಗೆದಷ್ಟು ಲಭಿಸುತ್ತಿದೆ. ಒಂದು ಮೂಲದ ಪ್ರಕಾರ ಸಮಿತಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ರಾಯಧನ ನಿರ್ಧಾರಣೆಯ ಸಂದರ್ಭದಲ್ಲಿ ಅಧಿಕಾರಿಗಳು ಗುತ್ತಿಗೆ ದಾರರ ಜತೆಗೆ ಶಾಮೀಲಾಗಿ ಕಡಿಮೆ ಹಣ ನಿಗದಿ ಮಾಡಿದ್ದಾರೆ.

ಇದರಿಂದ ನೇರವಾಗಿ ಬೊಕ್ಕಸಕ್ಕೆ ನಷ್ಟವಾದರೆ, ಕೆಲವು ಪ್ರಕರಣಗಳಲ್ಲಿ ನಿಗದಿ ಮಾಡಿದ್ದಕ್ಕಿಂತಲೂ ಕಡಿಮೆ ವಸೂಲಿ ಮಾಡಲಾಗಿದೆ. ಕರ್ನಾಟಕ ಉಗ್ರಾಣ ನಿಗಮವೂ ಈ ಹಗರಣದಲ್ಲಿ ಭಾಗಿಯಾಗಿದ್ದು, ರಾಯಧನ ಸಂದಾಯ ಸಂದರ್ಭದಲ್ಲಿ ತಪ್ಪೆಸಗಿದೆ. “ಬಳ್ಳಾರಿ ರಿಪಬ್ಲಿಕ್‌’ ಗಣಿಗಾರಿಕೆ ಸಂದರ್ಭದಲ್ಲಿ ನಡೆಸಿದ ಲೂಟಿಗಿಂತಲೂ ವಾಣಿಜ್ಯ ಮತ್ತು ಕೈಗಾರಿಕೆ, ಅರಣ್ಯ, ಗಣಿ ಭೂ ವಿಜ್ಞಾನ, ಉಗ್ರಾಣ ನಿಗಮದ ಅಧಿಕಾರಿಗಳ ಪರೋಕ್ಷ ಪಾತ್ರದಿಂದ ಸರಕಾರದ ಬೊಕ್ಕಸಕ್ಕೆ ಆದ ನಷ್ಟವೇ ಅಧಿಕವಾಗಿರಬಹುದು ಎಂದು ಪಿಎಸಿ ಅಚ್ಚರಿ ವ್ಯಕ್ತಪಡಿಸಿದೆ.

ಸ್ವಾಧೀನಪಡಿಸಿಕೊಂಡ ಕಬ್ಬಿಣದ ಅದಿರಿನ ಮೌಲ್ಯವನ್ನೇ ಕಡಿಮೆ ತೋರಿಸಿದ ಅಧಿಕಾರಿಗಳು ವಸೂಲಿ ಮಾಡುವಾಗಲೂ ಕಡಿಮೆಗೊಳಿಸುವ ಮೂಲಕ ತಪ್ಪೆಸಗಿದ್ದಾರೆ. ಈ ಪ್ರಕ್ರಿಯೆಯಲ್ಲಿ ಮೂರು ಉಪನಿರ್ದೇಶಕರ ಕಚೇರಿ ಭಾಗಿಯಾಗಿದ್ದು, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಕ್ರಿಯಾ ಯೋಜನೆ ಪಡೆಯದೆಯೇ ಗುತ್ತಿಗೆದಾರರಿಗೆ ಗಣಿಗಾರಿಕೆ ನಡೆಸಲು ಅವಕಾಶ ಕೊಡಲಾಗಿದೆ.

ಈ ಎಲ್ಲ ಸಂಗತಿಗಳು ಸಿಎಜಿ ವರದಿಯಲ್ಲೂ ಉಲ್ಲೇಖವಾಗಿವೆ. ಈ ಮಧ್ಯೆ ಸರಕಾರಗಳು ಬದಲಾಗಿವೆ. ಕುಮಾರಸ್ವಾಮಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದು, ಮರಳಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದಾರೆ. ಆದಾಗಿಯೂ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದವರ ವಿರುದ್ಧ ಯಾವ ಕ್ರಮವೂ ಆಗಿಲ್ಲ. ಲೆಕ್ಕಪತ್ರ ಸಮಿತಿಯಾದರೂ ಈ ವಿಚಾರಕ್ಕೆ ತಾರ್ಕಿಕ ಅಂತ್ಯ ನೀಡುವಂತೆ ಸರಕಾರಕ್ಕೆ ಶಿಫಾರಸು ನೀಡಬಲ್ಲುದೇ ಎಂಬ ಕುತೂಹಲ ಸೃಷ್ಟಿಯಾಗಿದೆ.

ಪ್ರಮುಖ ಆರೋಪಗಳೇನು ?
-ಅದಿರಿನ ಮೌಲ್ಯವನ್ನು ಕಡಿಮೆಯಾಗಿ ನಿರ್ಧರಿಸಿರುವುದು.
-ಕಡಿಮೆ ರಾಜಧನ ಸಂಗ್ರಹ
-ಮೂರು ಉಪನಿರ್ದೇಶಕರ ರಕ್ಷಣೆ
-ಐಬಿಎಂಗೆ ನೀಡಿದ ಲೆಕ್ಕದಲ್ಲಿ ವ್ಯತ್ಯಾಸ

ಐಬಿಎಂ ದಾಖಲೆಯಲ್ಲೂ ವ್ಯತ್ಯಯ
ಸಮಿತಿಗೆ ಸಲ್ಲಿಕೆಯಾಗಿರುವ ದಾಖಲೆಯ ಪೈಕಿ ಗಣಿಗಾರಿಕೆ ಕ್ರಿಯಾ ಯೋಜನೆಯಲ್ಲಿ ಮಂಜೂರಾತಿ ಹೊಂದಿ ಪರಿಮಾಣಕ್ಕಿಂತ ಅಧಿಕ ಪ್ರಮಾಣದಲ್ಲಿ ಖನಿಜಗಳನ್ನು ನಿಕ್ಷೇಪದಿಂದ ತೆಗೆಯಲಾಗಿದೆ. ಭಾರತೀಯ ಗಣಿ ಸಂಸ್ಥೆ (ಐಬಿಎಂ)ಗೆ ಗುತ್ತಿಗೆದಾರರು ವರದಿ ಮಾಡಿದ ಉತ್ಪಾದನ ಅಂಕಿಸಂಖ್ಯೆಗೂ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ರಾಯಧನ ನಿಗದಿ ಮಾಡುವ ಸಂದರ್ಭದಲ್ಲಿ ಪ್ರಸ್ತುತಪಡಿಸಿದ ಅಂಕಿಸಂಖ್ಯೆಗೂ ವ್ಯತ್ಯಾಸ ಕಂಡುಬಂದಿದ್ದು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಡಿಮೆ ಪ್ರಮಾಣದಲ್ಲಿ ಉತ್ಪಾದನೆಯನ್ನು ತೋರಿಸಿದೆ. ಹೀಗಾಗಿ ಸರಕಾರದ ಬೊಕ್ಕಸಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ದಾಖಲೆಗಳು ಹೇಳುತ್ತಿವೆ.

-ರಾಘವೇಂದ್ರ ಭಟ್‌

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.