25 ವರ್ಷಗಳ ನಂತರ ಜೆಡಿಎಸ್ಗೆ ಒಲಿದ ಕೇಂದ್ರ ಮಂತ್ರಿ ಭಾಗ್ಯ
Team Udayavani, Jun 10, 2024, 6:40 AM IST
ನವದೆಹಲಿ: ನರೇಂದ್ರ ಮೋದಿ ಅವರ 3ನೇ ಅಧಿಕಾ ರಾವಧಿಯಲ್ಲಿ ಕರ್ನಾಟಕದ ಮಾಜಿ ಸಿಎಂ ಹಾಗೂ ಮಂಡ್ಯ ಸಂಸದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಪುಟ ಸಚಿವ ಸ್ಥಾನ ದೊರೆತಿದೆ. ಈ ಮೂಲಕ 25 ವರ್ಷಗಳ ಬಳಿಕ ಜೆಡಿಎಸ್ ನಾಯಕರೊಬ್ಬರಿಗೆ ಕೇಂದ್ರ ಸಚಿವ ಸ್ಥಾನ ಒಲಿದಂತಾಗಿದೆ.
ಜೆಡಿಎಸ್ ರಾಷ್ಟ್ರಾಧ್ಯಕ್ಷ, ಸಂಸದ ಎಚ್.ಡಿ. ದೇವೆಗೌಡ ಅವರು 1996-97ರ ಅವಧಿಯಲ್ಲಿ ಪ್ರಧಾನಮಂತ್ರಿಗಳಾಗಿದ್ದರು. ಈ ಸಂದರ್ಭದಲ್ಲಿ ಕೆಲ ಕಾಲ ಗೃಹ ಖಾತೆಯನ್ನೂ ತಮ್ಮ ಬಳಿ ಇರಿಸಿಕೊಂಡು, ಕಾರ್ಯನಿರ್ವಹಿಸಿದ್ದರು. ಅದೇ ರೀತಿ ಕರ್ನಾಟಕದ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಎಸ್.ಆರ್. ಬೊಮ್ಮಾಯಿ, ಸಿ.ಎಂ.ಇಬ್ರಾಹಿಂ ದೇವೇಗೌಡ ಪ್ರಧಾನಿಯಾದ ಸಂದರ್ಭದಲ್ಲಿ ಕೇಂದ್ರದಲ್ಲಿ ಸಚಿವರಾಗಿದ್ದರು. ನಂತರದ ವರ್ಷಗಳಲ್ಲಿ ಜೆಡಿಎಸ್ನಿಂದ ಲೋಕಸಭೆಗೆ ಆಯ್ಕೆಯಾಗಿದ್ದರೂ ಯಾರಿಗೂ ಸಚಿವ ಸ್ಥಾನ ಲಭಿಸಿರಲಿಲ್ಲ.
ಪ್ರಸಕ್ತ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. 3 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ 2ರಲ್ಲಿ ಜಯಸಾಧಿಸಿದೆ. ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಲಭಿಸಿದೆ. ಜೆಡಿಎಸ್ ಎನ್ಡಿಎ ಒಕ್ಕೂಟದ ಪ್ರಮುಖ ಮಿತ್ರಪಕ್ಷವಾಗಿದ್ದು, ಸಚಿವ ಸ್ಥಾನ ದೊರೆಯುವ ಮೂಲಕ ಬರೊಬ್ಬರಿ 25 ವರ್ಷಗಳ ನಂತರ ಜೆಡಿಎಸ್ಗೆ ಈ ಭಾಗ್ಯ ಒಲಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.