ಮಹದಾಯಿ: 5ಕ್ಕೆ ಶಾಸಕ, ಸಂಸದರ ಸಭೆ
Team Udayavani, Dec 24, 2019, 3:04 AM IST
ಹುಬ್ಬಳ್ಳಿ: ಕಳಸಾ-ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಒಪ್ಪಿಗೆ ನೀಡಿ, ನಂತರ ಗೋವಾ ಒತ್ತಡಕ್ಕೆ ಮಣಿದು ಹಿಂಪಡೆದಿದ್ದನ್ನು ಖಂಡಿಸಿ ಹಾಗೂ ಮಹದಾಯಿ ಅಧಿಸೂಚನೆಗೆ ಒತ್ತಾಯಿಸಿ ಹೋರಾಟ ಗಟ್ಟಿಗೊಳಿಸಲು ಜ.5ರಂದು ಬೆಳಗಾವಿ ವಿಭಾಗದ ಶಾಸಕರು, ಸಂಸದರ ಸಭೆ ಕರೆಯಲು ತೀರ್ಮಾನಿಸಲಾಗಿದೆ.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ, ಹುಬ್ಬಳ್ಳಿ, ನವಲಗುಂದ, ನರಗುಂದ ಸೇರಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಹೋರಾಟಗಾರರು, ರೈತ ಮುಖಂಡರು ಸೋಮವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಸಂಘಟಿತ ಹೋರಾಟ ತೀವ್ರಗೊಳಿಸುವ ಕುರಿತಾಗಿ ನಿರ್ಧರಿಸಿದರು.
ಜ.20ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ ಈ ಭಾಗದಲ್ಲಿ ಬೃಹತ್ ಹೋರಾಟ ಕೈಗೊಳ್ಳುವುದು. ಇದಕ್ಕೆ ಪೂರ್ವಭಾವಿಯಾಗಿ ಬೆಳಗಾವಿ ವಿಭಾಗ ವ್ಯಾಪ್ತಿಯ ಶಾಸಕರು, ಸಂಸದರ ಸಭೆ ಕರೆಯುವುದು.
ಕಾವೇರಿ ಹೋರಾಟದ ಮಾದರಿಯಲ್ಲಿ ಮಹದಾಯಿ ಹೋರಾಟ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಡಿ.23 ಅಥವಾ 29ರಂದು ಪ್ರಮುಖರ ನೇತೃತ್ವದಲ್ಲಿ ಸಂಚಾಲನ ಸಮಿತಿ ರಚಿಸುವ ಕುರಿತು ಚರ್ಚಿಸಲಾಯಿತು. ಎಲ್ಲ ಸಂಘಟನೆಗಳನ್ನು ಒಂದೇ ವೇದಿಕೆಯಡಿ ತಂದು ಒಬ್ಬರ ನಾಯಕತ್ವದಡಿ ಸಾಗುವಂತಾಗಬೇಕು. ಇನ್ನೆರಡು ದಿನಗಳಲ್ಲಿ ಸಮಿತಿ ಹಾಗೂ ಸಮಿತಿಗೆ ನಾಮಕರಣಕ್ಕೆ ನಿರ್ಣಯಿಸಲಾಯಿತು.
ಮಹದಾಯಿ ಕುರಿತ ಎಲ್ಲ ಹೋರಾಟಗಾರರು ಒಂದೇ ವೇದಿಕೆಗೆ ಬರುವ ವಿಶ್ವಾಸವಿದ್ದು, ನ್ಯಾಯಾಧಿಕರಣ ತೀರ್ಪಿನಂತೆ ಅಧಿಸೂಚನೆ ಹೊರಡಿಸಿ ಕಾಮಗಾರಿ ಪೂರ್ಣಗೊಳ್ಳವವರೆಗೂ ಈ ಹೋರಾಟ ನಿರಂತರವಾಗಿ ನಡೆಯಲಿದೆ. ಹೋರಾಟದಲ್ಲಿ ತೊಡಗಿರುವ ಪ್ರಮುಖರೊಬ್ಬರೂ ನೇತೃತ್ವ ವಹಿಸಿಕೊಳ್ಳಬೇಕು.
-ಎನ್.ಎಚ್. ಕೋನರಡ್ಡಿ, ಮಾಜಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.