Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ
Team Udayavani, Jul 8, 2024, 6:56 AM IST
ಬೆಂಗಳೂರು/ಹುಬ್ಬಳ್ಳಿ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ ಎದುರಾಗಿದೆ. ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ನಾಲ್ಕು ಸೇತುವೆಗಳು ಮುಳುಗಡೆಯಾಗಿವೆ. ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲಾ-ಕಾಲೇಜುಗಳಿಗೆ ಜು. 8ರಂದು ರಜೆ ಘೋಷಿಸಲಾಗಿದೆ.
ಮಹಾರಾಷ್ಟ್ರದ ಕೊಂಕಣ ಭಾಗದ ಕೋಯ್ನಾ, ನವಜಾ, ಮಹಾಬಳೇಶ್ವರ, ಕಾಳಮ್ಮವಾಡಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟದಲ್ಲಿ ಎರಡು ಅಡಿಗಳಷ್ಟು ಹೆಚ್ಚಳವಾಗಿದೆ.
ಕೃಷ್ಣಾ ನದಿಗೆ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ ಮೂಲಕ 37 ಸಾವಿರ ಕ್ಯುಸೆಕ್ ಹಾಗೂ ದೂಧಗಂಗಾ ನದಿ ಮೂಲಕ 10 ಸಾವಿರ ಕ್ಯುಸೆಕ್ ಸೇರಿ ಒಟ್ಟು 47 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನದಿಗಳ ಮಟ್ಟದಲ್ಲಿ ಹೆಚ್ಚಳವಾಗಿದೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ, ಕನ್ನೂರ-ಭೋಜವಾಡಿ, ಕಾರದಗಾ-ಭೋಜ, ಮಾಂಜರಿ-ಬಾವನ ಸವದತ್ತಿ ಸೇತುವೆಗಳು ಜಲಾವೃತಗೊಂಡಿವೆ.
ಮಲೆನಾಡಿನಲ್ಲೂ ಪುನರ್ವಸು ಮಳೆ ಅಬ್ಬರದಿಂದ ತುಂಗಾ, ಭದ್ರಾ, ಹೇಮಾವತಿ, ಅಘನಾಶಿನಿ, ಶರಾವತಿ, ಚಂಡಿಕಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತೀರ ಪ್ರದೇಶದಲ್ಲಿ ನೆರೆ ಭೀತಿ ಆವರಿಸಿದೆ. ಶೃಂಗೇರಿ ತಾಲೂಕಿನ ವಿವಿಧೆಡೆ ಭೂಕುಸಿತ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶರಾವತಿ, ಮಾಣಿ, ವಾರಾಹಿ, ಸಾವೆಹಕ್ಲು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.