State Govt;ಕಾರಾಗೃಹ ಇಲಾಖೆಗೆ ಮೇಜರ್ ಸರ್ಜರಿ: 43 ಮಂದಿ ಜೈಲು ಅಧಿಕಾರಿ, ಸಿಬಂದಿ ವರ್ಗಾವಣೆ
Team Udayavani, Sep 14, 2024, 12:05 AM IST
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ರೌಡಿಶೀಟರ್ ವಿಲ್ಸನ್ಗಾರ್ಡನ್ ನಾಗನಿಗೆ ವಿಶೇಷ ಆತಿಥ್ಯ ಕಲ್ಪಿಸಿದ ಘಟನೆ ಬೆಳಕಿಗೆ ಬಂದ ಬಳಿಕ ಕಾರಾಗೃಹ ಇಲಾಖೆ ಬಗ್ಗೆ ಭಾರೀ ಟೀಕೆಗಳು ಕೇಳಿ ಬಂದಿತ್ತು. ಈ ಬೆನ್ನಲ್ಲೇ ಕಾರಾಗೃಹ ಮತ್ತು ಸುಧಾರಣ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ.
ಆಡಳಿತಾತ್ಮಕ ದೃಷ್ಟಿಯಿಂದ ಕಾರಾಗೃಹ ಮತ್ತು ಸುಧಾರಣ ಇಲಾಖೆಯ ರಾಜ್ಯದ ವಿವಿಧ ಕಾರಾಗೃಹಗಳ ಜೈಲರ್ಗಳು, ಮುಖ್ಯ ವೀಕ್ಷಕರು, ವೀಕ್ಷಕರು, ವಾರ್ಡರ್ ಸೇರಿ 43 ಮಂದಿಯನ್ನು ಏಕಕಾಲಕ್ಕೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.
ಜೈಲರ್ ಶಂಭು ಷಣ್ಮುಖಪ್ಪ ವೆನ್ನಾಲ- ಕೇಂದ್ರ ಕಾರಾಗೃಹ ಬೆಂಗಳೂರು, ಮುಖ್ಯ ವೀಕ್ಷಕಿ ಸುಮಿತ್ರಾ ಎಂ. ರಾಠೊಡ- ಕೇಂದ್ರ ಕಾರಾಗೃಹ ವಿಜಯಪುರ, ಹೆಡ್ ವಾರ್ಡರ್ ಗಣಪತಿ- ಸಾಗರ ಉಪ ಕಾರಾಗೃಹ, ಹೆಡ್ ವಾರ್ಡರ್ ಬಸವರಾಜ ಜಾಧವ- ಕೇಂದ್ರ ಕಾರಾಗೃಹ ಧಾರವಾಡ, ಹೆಡ್ ವಾಡರì ಪ್ರಭು- ಕೇಂದ್ರ ಕಾರಾಗೃಹ ಕಲಬುರಗಿ, ಮುಖ್ಯ ವೀಕ್ಷಕಿ ಶೈಲ ಸಿ.ಕೆ.- ಜಿಲ್ಲಾ ಕಾರಾಗೃಹ ದಾವಣಗೆರೆ, ವೀಕ್ಷಕ- ಜಿ.ಜಿ.ಮಂಜುನಾಥ- ತಾಲೂಕು ಉಪ ಕಾರಾಗೃಹ ಹುಬ್ಬಳ್ಳಿ, ವೀಕ್ಷಕ ಸಂತೋಷ್ ಕರಿಯಣ್ಣನವರ- ಜಿಲ್ಲಾ ಕಾರಾಗೃಹ ದಾವಣಗೆರೆ, ವೀಕ್ಷಕ ಶಿವಾನಂದ ಧನಪಾಲ್ ಕಾಂಬಳೆ-ಕೇಂದ್ರ ಕಾರಾಗೃಹ ವಿಜಯಪುರ, ವೀಕ್ಷಕ ಶಿವ ಲಮಾಣಿ- ಜಿಲ್ಲಾ ಕಾರಾಗೃಹ ಗದಗ, ವೀಕ್ಷಕ ನೂರಲಿ ಹುಸೇನಸಾಬ ಮುಜಾವರ-ಕೇಂದ್ರ ಕಾರಾಗೃಹ ವಿಜಯಪುರ, ವೀಕ್ಷಕ ಶಿವಕುಮಾರ್- ಕೇಂದ್ರ ಕಾರಾಗೃಹ ಕಲಬುರಗಿ, ವೀಕ್ಷಕ ಮಂಜುನಾಥ ಕಟಗಿ- ಹಾವೇರಿ ಜಿಲ್ಲಾಕಾರಾಗೃಹಕ್ಕೆ ವರ್ಗಾವಣೆ ಸೇರಿ ಒಟ್ಟು 43 ಮಂದಿ ಜೈಲು ಅಧಿಕಾರಿ-ಸಿಬಂದಿಯನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ವರ್ಗಾವಣೆಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.