ಮಳಲಿ ಮಸೀದಿ: ಮಂಗಳೂರು ಸಿವಿಲ್‌ ಕೋರ್ಟ್‌ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಅಸಲು ದಾವೆ ವಿಚಾರಣೆ

Team Udayavani, Jul 16, 2022, 7:00 AM IST

ಮಳಲಿ ಮಸೀದಿ: ಮಂಗಳೂರು ಸಿವಿಲ್‌ ಕೋರ್ಟ್‌ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವ ಮಂಗಳೂರಿನ ಸಿವಿಲ್‌ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದ್ದು, ಅಸಲು ದಾವೆಯ ಭವಿಷ್ಯ ವಿಚಾರಣಾ ನ್ಯಾಯಾಲಯದಲ್ಲೇ ನಿರ್ಧಾರವಾಗಲಿದೆ.

ಈ ವಿಚಾರವಾಗಿ ಮಂಗಳೂರಿನ ತೆಂಕಳೈಪಾಡಿ ಗ್ರಾಮದ ಧನಂಜಯ್‌ ಹಾಗೂ ಬಡುಗಳೈಪಾಡಿ ಗ್ರಾಮದ ಮನೋಜ್‌ ಕುಮಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಶುಕ್ರವಾರ ಪ್ರಕಟಿಸಿದ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಂ ಅವರಿದ್ದ ಏಕಸದಸ್ಯ ನ್ಯಾಯಪೀಠ, ತಕರಾರು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ವಿವೇಕ್‌ ಸುಬ್ಟಾರೆಡ್ಡಿ ಹಾಗೂ ಮಸೀದಿ ಆಡಳಿತ ಮಂಡಳಿ ಪರ ಹಿರಿಯ ವಕೀಲ ಜಯಕುಮಾರ್‌ ಎಸ್‌. ಪಾಟೀಲ್‌ ವಾದ ಮಂಡಿಸಿದ್ದರು.

ಅರ್ಜಿದಾರರ ವಾದ ಏನಿತ್ತು:
ಮಳಲಿ ಮಸೀದಿಯಲ್ಲಿ ಪತ್ತೆಯಾಗಿರುವ ದೇವಾಲಯದ ರಚನೆ ಬಗ್ಗೆ ಮೊದಲು ಪರಿಶೀಲನೆಯಾಗಬೇಕು. ಅದರ ವಸ್ತುಸ್ಥಿತಿ ಪರಿಶೀಲಿಸಲು ನ್ಯಾಯಾಲಯದ ವತಿಯಿಂದ ಕಮಿಷನರ್‌ ಒಬ್ಬರನ್ನು ನೇಮಕ ಮಾಡಬೇಕು. ಜ್ಞಾನವಾಪಿ ಮಸೀದಿಯ ಮಾದರಿಯಲ್ಲಿ ಕಮಿಷನರ್‌ ನೇಮಕ ಮಾಡುವ ಕುರಿತು ಪರಿಗಣಿಸಬೇಕಿದೆ. ಆದ್ದರಿಂದ, ಕಮಿಷನರ್‌ ನೇಮಕ ಮಾಡುವ ಕುರಿತ ಮನವಿ ಬಗ್ಗೆ ಸಿವಿಲ್‌ ಕೋರ್ಟ್‌ ಮೊದಲು ವಿಚಾರಣೆ ನಡೆಸಬೇಕಿದೆ.

ನೂರು ವರ್ಷಕ್ಕೂ ಹಳೆಯ ಕಟ್ಟಡ ಪ್ರಾಚೀನ ಸ್ಮಾರಕ ಎನಿಸಿಕೊಳ್ಳುತ್ತದೆ. ಮಳಲಿ ಮಸೀದಿ 700 ವರ್ಷಕ್ಕೂ ಹಳೆಯದಾಗಿದೆ ಎಂದು ಮಸೀದಿಯವರೇ ಹೇಳುತ್ತಿದ್ದಾರೆ.

ಹೀಗಿರುವಾಗ ಒಳಗೆ ಪತ್ತೆಯಾಗಿರುವ ದೇವಾಲಯ ಅದಕ್ಕಿಂತ ಹಳೆಯದಾಗಿರುವ ಸಾಧ್ಯತೆ ಇರುತ್ತದೆ.

ಮಸೀದಿಯವರ ಮಾತನ್ನೇ ಒಪ್ಪಕೊಂಡರೂ ಪ್ರಾಚೀನ ಸ್ಮಾರಕಗಳಿಗೆ ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆ ಅನ್ವಯಿಸುವುದಿಲ್ಲ.ಆದ್ದರಿಂದ, ಆ ಕಾಯ್ದೆಯಡಿ ದಾವೆ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂಬ ಅವರ ವಾದ ಒಪ್ಪಲು ಸಾಧ್ಯವಿಲ್ಲ .

ಮೊದಲು ಕಮಿಷನರ್‌ ನೇಮಕ ಮಾಡಬೇಕು. ಅವರು ಸ್ಥಳದ ಸರ್ವೇ ನಡೆಸಿ ವಸ್ತುನಿಷ್ಠ ವರದಿ ನೀಡಬೇಕು. ಅದಕ್ಕೂ ಮೊದಲು ದಾವೆಯ ಸಿಂಧುತ್ವದ ಬಗ್ಗೆ ವಿಚಾರಣೆ ನಡೆಸಿ, ಒಂದೊಮ್ಮೆ ಅದು ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ಆದೇಶ ನೀಡಿದರೆ, ತಕ್ಷಣವೇ ಒಳಗಿರುವ ದೇವಾಲಯ ರಚನೆಯನ್ನು ನೆಲಸಮಗೊಳಿಸುವ ಸಾಧ್ಯತೆ ಇದೆ. ಆದ್ದರಿಂದ, ಕಮಿಷನರ್‌ ನೇಮಕಗೊಂಡು, ಪರಿಶೀಲನೆ ನಡೆಸುವವರೆಗೆ ದಾವೆಯ ಸಿಂಧುತ್ವದ ಕುರಿತು ಯಾವುದೇ ಆದೇಶ ನೀಡದಂತೆ ಸಿವಿಲ್‌ ಕೋರ್ಟ್‌ಗೆ ನಿರ್ದೇಶಿಸಬೇಕು.

ಮಸೀದಿ ಆಡಳಿತ ಮಂಡಳಿ ವಾದ:
ಅಸಲು ದಾವೆಯನ್ನು ಆಲಿಸಲು ವಿಚಾರಣಾ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ನಿರ್ಧಾರವಾಗುವ ಮೊದಲು ಕಮಿಷನರ್‌ ವರದಿ ಅಗತ್ಯವಿಲ್ಲ. ಒಂದು ವೇಳೆ, ಮೊದಲು ಕಮಿಷನರ್‌ ನೇಮಿಸಿ, ವರದಿ ಬಂದ ನಂತರ ದಾವೆಯ ಸಿಂಧುತ್ವದ ಬಗ್ಗೆ ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಬಂದರೆ, ಕಮಿಷನರ್‌ ನೇಮಕ ಮತ್ತದರ ವರದಿ ಎರಡಕ್ಕೂ ಮಾನ್ಯತೆ ಇರುವುದಿಲ್ಲ. ಆದ್ದರಿಂದ, ಮೊದಲು ಅಸಲು ದಾವೆಯ ಸಿಂಧುತ್ವದ ಬಗ್ಗೆ ನಿರ್ಧಾರವಾಗಬೇಕಿದೆ.

ಪ್ರಕರಣವೇನು?
ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್‌ ಹಾಗೂ ಮನೋಜ್‌ ಕುರ್ಮಾ ಸಿವಿಲ್‌ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್‌, ರಚನೆ ತೆರವುಗೊಳಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಈ ಮಧ್ಯೆ ಮಸೀದಿಯ ಆಡಳಿತ ಮಂಡಳಿ ಮಧ್ಯಂತರ ಅರ್ಜಿ ಸಲ್ಲಿಸಿ, ವಿವಾದಿತ ಸ್ಥಳ ವಕ್ಫ್ ಆಸ್ತಿಯಾಗಿದೆ. ಜತೆಗೆ, ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆಯ ಅಡಿಯಲ್ಲಿ ಅಸಲು ದಾವೆ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ವಾದಿಸಿದ್ದರು. ಮತ್ತೊಂದೆಡೆ, ಮೂಲ ದಾವೆದಾರರೂ ಮಧ್ಯಂತರ ಅರ್ಜಿ ಸಲ್ಲಿಸಿ, ಮೊದಲು ಕಮಿಷನರ್‌ ಒಬ್ಬರನ್ನು ನೇಮಕ ಮಾಡಿ ಸ್ಥಳ ಪರಿಶೀಲನೆ ನಡೆಸುವಂತೆ ಕೋರಿದ್ದರು. ಆದರೆ, ಸಿವಿಲ್‌ ನ್ಯಾಯಾಲಯ ಮೊದಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ಕೈಗೆತ್ತಿಕೊಂಡಿತ್ತು. ಇದನ್ನು ಆಕ್ಷೇಪಿಸಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಟಾಪ್ ನ್ಯೂಸ್

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ.. ಬೌ.. ಬೌ.. ಎಂದಾಗಲೇ ಗೊತ್ತು

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ.. ಬೌ.. ಬೌ.. ಎಂದಾಗಲೇ ಗೊತ್ತು

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.