ಮಂಗಳೂರು-ಬೆಂಗಳೂರು ರೈಲು ಯಾನ ವಿಳಂಬ
Team Udayavani, Aug 17, 2019, 3:00 AM IST
ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ರೈಲು ಓಡಾಟ ಇನ್ನೂ ಹತ್ತು ದಿನ ವಿಳಂಬವಾಗಲಿದೆ. ಎಡಕುಮೇರಿಯಿಂದ ಮುಂದಕ್ಕೆ ಗುಡ್ಡ ಜರಿದು ಹಳಿಗೆ ಹಾನಿಯಾಗಿದ್ದು, ಹಳಿ ಜೋಡಿಸುವ ಕೆಲಸ ಭರದಿಂದ ನಡೆಯುತ್ತಿದೆ. ಸುಬ್ರಹ್ಮಣ್ಯ ಕ್ರಾಸ್ ರೋಡ್-ಹಾಸನ ನಡುವಿನ ಎಡಕುಮೇರಿಯಿಂದ ಮುಂದಕ್ಕೆ 50 ಮೀ.ದೂರದಲ್ಲಿ ಅ.8ರಂದು ಗುಡ್ಡ ಕುಸಿದಿದ್ದು, ಹಳಿ ಅಡಿಭಾಗದ ಸ್ಲಿಪರ್ಗಳಿಗೆ ಭಾರೀ ಹಾನಿಯಾಗಿದೆ. ಹಳಿಗಳನ್ನು ಸಂಪೂರ್ಣ ಜೋಡಿಸುವ ಕೆಲಸ ನಡೆಯುತ್ತಿದೆ.
ಹಳಿಗಳು ಆಳಕ್ಕೆ ಜಾರಿರುವುದರಿಂದ ಕೆಳಗಿನಿಂದಲೇ ತಡೆಗೋಡೆ ನಿರ್ಮಿಸುವ ಕಾರ್ಯ ನಡೆಯುತ್ತಿದೆ. ಹಳಿ ಅಳವಡಿಸಿದ ಪಕ್ಕದಲ್ಲಿ ನೀರಿನ ಒರತೆಯಿದ್ದು, ಮಣ್ಣು ಆಳಕ್ಕೆ ಸರಿದಿದೆ. ಹೀಗಾಗಿ, ತಡೆಗೋಡೆ ನಿರ್ಮಾಣ ಕಷ್ಟವಾಗುತ್ತಿದೆ. ತಡೆಗೋಡೆ ನಿರ್ಮಾಣವಾದ ಬಳಿಕ ಸ್ಲಿಪರ್ ಜೋಡಣೆ ಆರಂಭವಾಗಬೇಕಿದೆ. ಕಾಮಗಾರಿ ಪೂರ್ಣಗೊಳ್ಳಲು ಹಲವು ದಿನ ಹಿಡಿಯಬಹುದು ಎಂದು ಹುಬ್ಬಳ್ಳಿ ವಲಯದ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್.ಡಿ.ಕುಮಾರಸ್ವಾಮಿ
Bhatkal; ಯತಿ ನರಸಿಂಹಾನಂದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ
Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ
Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.