Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ
Team Udayavani, May 20, 2024, 11:59 PM IST
ಮಂಗಳೂರು: ಮೊಬೈಲ್ ಮತ್ತು ಹಣ ಕದ್ದಿರುವ ಶಂಕೆಯಲ್ಲಿ ಯುವಕನೋರ್ವ ಇನ್ನೋರ್ವ ಯುವಕನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದೆ.
ಬಂಟ್ವಾಳ ಪುಣಚದ ಸಚಿನ್ (31) ಗಾಯಗೊಂಡವರು. ಕೇರಳ ಕೊಲ್ಲಂನ ನೌಫಾಲ್ ಆರೋಪಿ. ನೌಫಾಲ್ ಮತ್ತು ಆತನ ಗೆಳಯ ಅನಾಸ್ ಕೇರಳದಿಂದ ಮಂಗಳೂರಿಗೆ ಬಂದಿದ್ದರು.
ಅಲ್ಲಿ ಸಚಿನ್ ಜತೆ ಸೇರಿ ಊಟ ಮಾಡಿ ರೈಲು ನಿಲ್ದಾಣದ ಬಳಿ ಮಲಗಿದ್ದರು. ಸೋಮವಾರ ಬೆಳಗ್ಗೆ ನೌಫಾಲ್ ಆತನ ಮೊಬೈಲ್ ಮತ್ತು ಒಂದು ಸಾವಿರ ನಗದನ್ನು ಸಚಿನ್ ಕದ್ದಿದ್ದಾನೆ ಎಂದು ಆರೋಪಿಸಿದ್ದ. ಇದರಿಂದಾಗಿ ಇಬ್ಬರ ನಡುವೆ ವಾಗ್ವಾದ ಉಂಟಾಯಿತು.
ಈ ವೇಳೆ ನೌಫಾಲ್ ಚೂರಿಯಿಂದ ಸಚಿನ್ಗೆ ಹೊಟ್ಟೆಗೆ ಇರಿದಿದ್ದಾನೆ. ಸಚಿನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾ ಪಾಯದಿಂದ ಪಾರಾಗಿದ್ದಾರೆ. ನೌಫಾಲ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.