Drinking water problem: ನೀರಿನ ಬರ ತಪ್ಪಿಸಲು 7,100 ಖಾಸಗಿ ಕೊಳವೆ ಬಾವಿ ಗುರುತು
Team Udayavani, Feb 29, 2024, 9:06 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ 7,412 ಗ್ರಾಮಗಳು ಹಾಗೂ 1,115 ವಾರ್ಡ್ಗಳಲ್ಲಿ ಮುಂದಿನ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದೆಂದು ಗುರುತಿಸಲಾಗಿದ್ದು, ಈ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಒಟ್ಟು 7,108 ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದೆ.
ಕಂದಾಯ ಸಚಿವ ಕೃಷ್ಣಬೈರೇ ಗೌಡರ ಅಧ್ಯಕ್ಷತೆಯಲ್ಲಿ ಜರಗಿದ ಬರ ನಿರ್ವಹಣೆಯ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಬರ ಸ್ಥಿತಿಗತಿ ಪರಾಮರ್ಶೆ ನಡೆಸಿ ಕೆಲವು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.
ಟ್ಯಾಂಕರ್ ಹಾಗೂ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು ನೀರು ಪೂರೈಸಲು ಹಾಗೂ 15 ದಿನಗಳಲ್ಲಿ ಬಿಲ್ ಪಾವತಿಗೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸದ್ಯ 117 ಗ್ರಾಮಗಳಿಗೆ 181 ಟ್ಯಾಂಕರ್ ಮೂಲಕ ಹಾಗೂ 354 ಗ್ರಾಮಗಳಿಗೆ 419 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು ನೀರು ಪೂರೈಸಲಾಗುತ್ತಿದೆ. ಜತೆಗೆ 9 ನಗರ ಸ್ಥಳೀಯ ಸಂಸ್ಥೆಗಳ 57 ವಾರ್ಡ್ಗಳಿಗೆ 17 ಟ್ಯಾಂಕರ್ಗಳಿಂದ ಹಾಗೂ 29 ವಾರ್ಡ್ಗಳಿಗೆ 17 ಖಾಸಗಿ ಕೊಳವೆಬಾವಿಗಳ ಮೂಲಕ ತುರ್ತು ಕುಡಿಯುವ ನೀರು ಪೂರೈಸಲಾಗುತ್ತಿದೆ.
ಪ್ರಸಕ್ತ ಸಾಲಿನ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ 930.14 ಕೋ. ರೂ. ಹಂಚಿಕೆಯಾಗಿದ್ದು, ಇದರಲ್ಲಿ ಕೇಂದ್ರದ ಪಾಲು 697.60 ಕೋ. ರೂ. ಹಾಗೂ ರಾಜ್ಯದ ಪಾಲು 232.54 ಕೋ. ರೂ.ಇದೆ. ಈ ಅನುದಾನದ ಜತೆಗೆ ರಾಜ್ಯ ಸರಕಾರದಿಂದ ಹೆಚ್ಚುವರಿ ಅನುದಾನ 885.67 ಕೋ.ರೂ. ಸಹಿತ ಒಟ್ಟು 1,810.81 ಕೋ. ರೂ. ಸಂಪೂರ್ಣ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಒಪ್ಪಿದ್ದು, ಈವರೆಗೆ 1,602.45 ಕೋ. ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.
ಜಿÇÉಾಧಿಕಾರಿಗಳ ಖಾತೆಯಲ್ಲಿ 725.92 ಕೋ. ರೂ. ಹಾಗೂ ತಹಶೀಲ್ದಾರ್ ಖಾತೆಯಲ್ಲಿ 135.40 ಕೋ. ರೂ. ಸಹಿತ ಒಟ್ಟು 861.32 ಕೋ. ರೂ. ಅನುದಾನವು ಬರ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಲಭ್ಯವಿದೆ ಎಂದು ಕಂದಾಯ ಇಲಾಖೆ ಮಾಹಿತಿ ಹಂಚಿಕೊಂಡಿದೆ.
ಅಂತಾರಾಜ್ಯ ಮೇವು ಸಾಗಣೆ ಸ್ಥಗಿತ:
ಅಂತಾರಾಜ್ಯ ಮೇವು ಸಾಗಣೆಯನ್ನು ನಿರ್ಬಂಧಿಸಿ ನವೆಂಬರ್ನಲ್ಲಿ ಆದೇಶ ಹೊರಡಿಸಲಾಗಿದೆ. ಮೇವಿನ ಕಿಟ್ ಖರೀದಿಗೆ ಪಶುಸಂಗೋಪನೆ ಇಲಾಖೆಗೆ 20 ಕೋ. ರೂ. ನೀಡಲಾಗಿದ್ದು, 7.62 ಲಕ್ಷ ಮಿನಿ ಕಿಟ್ಗಳನ್ನು ಖರೀದಿಸಲಾಗಿದೆ. ಈ ಕಿಟ್ಗಳನ್ನು 4.19 ಲಕ್ಷ ರೈತರಿಗೆ ಉಚಿತವಾಗಿ ನೀಡಿದೆ. ಸದ್ಯ ರಾಜ್ಯದಲ್ಲಿ 144 ಲಕ್ಷ ಟನ್ ಮೇವು ಲಭ್ಯವಿದ್ದು, ಮುಂದಿನ 27 ವಾರಗಳ ಬಳಕೆಗೆ ಸಾಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ’ ತೆರೆಗೆ
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.