ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ: ಜಾರಕಿಹೊಳಿಗೆ ಆತಂಕ


Team Udayavani, Apr 1, 2021, 6:00 AM IST

ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ: ಜಾರಕಿಹೊಳಿಗೆ ಆತಂಕ

ಬೆಂಗಳೂರು:  ಸಿ.ಡಿ. ಪ್ರಕರಣದ ಸಂತ್ರಸ್ತೆಯನ್ನು ಬುಧವಾರ  ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯಲ್ಲಿ  ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು.  ಈ ಬೆಳವಣಿಗೆಯಿಂದ  ರಮೇಶ್‌ ಜಾರಕಿಹೊಳಿಗೆ ಆತಂಕ ಶುರುವಾಗಿದ್ದು, ಸದ್ಯದಲ್ಲೇ ಅವರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸುವ  ಸಾಧ್ಯತೆಗಳಿದೆ.

ಯುವತಿಯು  ಬಿಗಿ ಪೊಲೀಸ್‌ ಭದ್ರತೆಯಲ್ಲಿ ವಕೀಲರ ತಂಡದ ಜತೆ ಬೆಳಗ್ಗೆ 9.30ರ ಸುಮಾರಿಗೆ ಆಡುಗೋಡಿ ಯ ಎಸ್‌ಐಟಿ ಟೆಕ್ನಿಕಲ್‌ ಸೆಲ್‌ಗೆ ಆಗಮಿಸಿದ್ದು, ಬಳಿಕ ಆಕೆಯನ್ನು ತನಿಖಾಧಿಕಾರಿ ಕವಿತಾ ನೇತೃತ್ವದಲ್ಲಿ  ಶಿವಾಜಿ ನಗರದಲ್ಲಿರುವ ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಬೆಳಗ್ಗೆ 11ರಿಂದ ಸಂಜೆ  4ರವರೆಗೆ  ಪರೀಕ್ಷೆ ನಡೆಸಲಾಯಿತು.  ಆಕೆಯ ಕೂದಲು, ಉಗುರು, ರಕ್ತದ ಮಾದರಿಗಳನ್ನೂ ಸಂಗ್ರಹಿಸಲಾಯಿತು.

ಕೌನ್ಸೆಲಿಂಗ್‌ :

ಸಂತ್ರಸ್ತೆಯು ವೈದ್ಯಕೀಯ ಪರೀಕ್ಷೆ ಸಂದರ್ಭದಲ್ಲಿ ಮುಜುಗರಗೊಂಡು ಆತಂಕ ವ್ಯಕ್ತಪಡಿಸಿದಳು.  ಬಳಿಕ ಆಕೆಗೆ ಆಸ್ಪತ್ರೆಯ “ವಯೊಲೆನ್ಸ್‌  ಎಗೈನ್ಸ್‌$r  ವುಮೆನ್‌ ಸೆಂಟರ್‌’ನಲ್ಲಿ  ಆಪ್ತಸಮಾಲೋಚಕರಿಂದ ಕೌನ್ಸೆಲಿಂಗ್‌ ಕೊಡಿಸಿ  ವೈದ್ಯಕೀಯ ಪರೀಕ್ಷೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ. ಆಸ್ಪತ್ರೆಯಲ್ಲಿ ಆಕೆಯ ವಕೀಲರ ತಂಡದವರೂ ಉಪಸ್ಥಿತರಿದ್ದರು.

ಸದ್ಯದಲ್ಲೇ ಜಾರಕಿಹೊಳಿ  ತಪಾಸಣೆ? :

ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಮಾತ್ರವಲ್ಲದೆ, ಆರೋಪಿಯನ್ನೂ  ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಈಗಾಗಲೇ ಯುವತಿ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಿ, ವೈದ್ಯಕೀಯ ಪರೀಕ್ಷೆಗೊಳಪಟ್ಟಿದ್ದಾರೆ. ಹೀಗಾಗಿ ಸದ್ಯದಲ್ಲೇ ಪ್ರಕರಣದ ಆರೋಪಿ ರಮೇಶ್‌ ಜಾರಕಿಹೊಳಿ ಅವರನ್ನು ಎಸ್‌ಐಟಿ  ವೈದ್ಯಕೀಯ ಪರೀಕ್ಷೆಗೊಳಪಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಹೈಕೋರ್ಟ್‌ನಲ್ಲಿ ಪಿಐಎಲ್‌ :

ಸಿ.ಡಿ. ಪ್ರಕರಣವನ್ನು ಸಿಬಿಐಗೆ ವಹಿಸಲು ಆಥವಾ ಕೇಂದ್ರ ಸರಕಾರದ ಅಧೀನದ ವಿಶೇಷ ತನಿಖಾ ತಂಡಕ್ಕೆ ನೀಡುವಂತೆ   ಕೋರಿ ವಕೀಲ ಎಸ್‌. ಉಮೇಶ್‌ ಅವರು ಹೈಕೊರ್ಟ್‌ಗೆ ಸಾರ್ವಜನಿ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಎಸ್‌ಐಟಿ ವಿರುದ್ಧ ದೂರು: ಜಗದೀಶ್‌ :

 ಬೆಂಗಳೂರು: ಎಸ್‌ಐಟಿ ಅಧಿಕಾರಿಗಳು ಪ್ರಕರಣದ ಆರೋಪಿಗಳಿಗೆ ನೆರವಾಗುತ್ತಿದ್ದು, ಈ ಸಂಬಂಧ  ತನಿಖಾಧಿಕಾರಿಗಳ ವಿರುದ್ಧ ಕೋರ್ಚಿಗೆ ದೂರು ನೀಡುವುದಾಗಿ ಸಂತ್ರಸ್ತೆ ಪರ ವಕೀಲ ಜಗದೀಶ್‌ ಹೇಳಿದ್ದಾರೆ.

ಈ ಕುರಿತು ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಉದ್ದೇಶಪೂರ್ವಕವಾಗಿ ಎಸ್‌ಐಟಿ ಅಧಿಕಾರಿಗಳು ಹಾಗೂ ಪೊಲೀಸರು ಸಂತ್ರಸ್ತೆ ವಿಚಾರಣೆಗೆ ಹಾಜರಾದ ವೀಡಿಯೋವನ್ನು ಮಾಧ್ಯಮಗಳಿಗೆ ಕೊಟ್ಟಿದ್ದಾರೆ. ತನಿಖಾ ಸಂಸ್ಥೆ ಆರೋಪಿ ಪರವಾಗಿ ಕೆಲಸ ಮಾಡುತ್ತಿದೆ.  ಮಂಗಳವಾರ ಸಂತ್ರಸ್ತೆ ವಿಶೇಷ ಕೋರ್ಟ್‌ ನಿಂದ ಹೊರಬರುವಾಗ ಮತ್ತು ಆಡುಗೋಡಿಯ ಎಸ್‌ಐಟಿ ಕೊಠಡಿಗೆ ಹೋಗುವ ಮೊದಲು ಹಿಂಬದಿಯಿಂದ ಆಕೆಯನ್ನು ಚಿತ್ರೀಕರಿಸಿ ಮಾಧ್ಯಮಗಳಿಗೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ತನ್ನ ವಿರುದ್ಧ  ಕೇಳಿ ಬಂದ ಆರೋಪ ಗಳಿಗೆ ಉತ್ತರಿಸಿರುವ ಜಗದೀಶ್‌, ಈ ಹಿಂದೆ ತಾನು ಭೂಗಳ್ಳರು, ಭ್ರಷ್ಟರ ವಿರುದ್ಧ ಹೋರಾಡಿದ್ದಕ್ಕೆ    ಸುಳ್ಳು ಕೇಸು ದಾಖಲಿಸಲಾಗಿತ್ತು. ತಾನು ಯಾವುದಕ್ಕೂ ಹೆದರುವುದಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.