Rajasthan ದಿಂದ ಬಂದಿದ್ದು ಕುರಿ ಮಾಂಸ: ದಿನೇಶ್‌ ಗುಂಡೂರಾವ್‌

ಶಿರೋಹಿ ತಳಿಯ ಮಾಂಸ ಎಂಬುದು ಲ್ಯಾಬ್‌ ವರದಿಯಲ್ಲಿ ದೃಢ

Team Udayavani, Aug 1, 2024, 8:30 AM IST

2-bng

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಳೆದೊಂದು ವಾರದಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ರಾಜಸ್ಥಾನದಿಂದ ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿ ತಂದ ಆರೋಪ ಪ್ರಕರಣದ ಲ್ಯಾಬ್‌ ವರದಿ ಬಂದಿದ್ದು, ಅದು ಕುರಿ ಮಾಂಸ ಎಂಬುದು ವರದಿಯಲ್ಲಿ ದೃಢಪಟ್ಟಿದೆ. ಜೊತೆಗೆ, ಈ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಮಾಂಸದ ಸ್ಯಾಂಪಲ್‌ ಟೆಸ್ಟಿಂಗ್‌ ವರದಿಯನ್ನು ಆಹಾರ ಇಲಾಖೆಯು ಪ್ರಕಟಿಸಿದ್ದು, ಅದು ನಾಯಿ ಮಾಂಸ ಅಲ್ಲ, ಶಿರೋಹಿ ತಳಿಯ ಕುರಿ ಮಾಂಸ ಎಂಬುದನ್ನು ವರದಿಯಲ್ಲಿ ಬಹಿರಂಗ ಪಡಿಸಲಾಗಿದೆ. ಎಸ್‌ ಓವಿಸ್‌ ಏರಿಯಾಸ್‌ (ಶೀಪ್‌) ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. ಇದು ಕುರಿಯ ವೈಜ್ಞಾನಿಕ ಹೆಸರಾಗಿದೆ. ಹೀಗಾಗಿ ಬೆಂಗಳೂರಿಗರು ಇನ್ನು ನಿಶ್ಚಿಂತೆಯಿಂದ ಇರಬಹುದು. ಆಧಾರರಹಿತ ವದಂತಿಗಳಿಗೆ ಕಿವಿಗೊಡಬೇಡಿ. ಅಧಿಕೃತವಾಗಿ ಇದು ಕುರಿ ಮಾಂಸ ಎಂಬುದು ದೃಢಪಟ್ಟಿದೆ. ತಪ್ಪು ಮಾಹಿತಿ ಹರಡುವುದನ್ನು ತಡೆಯುವಲ್ಲಿ ನಿಮ್ಮ ಸಹಕಾರ ಅತ್ಯಗತ್ಯ ಎಂದು ದಿನೇಶ್‌ ಗುಂಡೂರಾವ್‌ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಆಹಾರ ಇಲಾಖೆ ಸ್ಪಷ್ಟನೆ: ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ಕುರಿಮರಿ ಮತ್ತು ಇತರ ಪ್ರಾಣಿಗಳ ಮಾಂಸವನ್ನು ಸಾಗಿಸಲಾಗುತ್ತಿದೆ ಎಂದು ಇತ್ತೀಚೆಗೆ ಚರ್ಚೆಗೀಡು ಮಾಡಿದ್ದ ಸಂಗತಿ ಯನ್ನು ಗಂಭೀರವಾಗಿ ಪರಿಗಣಿಸಿ ಕೂಲಂಕಷವಾಗಿ ತನಿಖೆ ಮಾಡಲಾಗಿತ್ತು. ಒಟ್ಟು 84 ಪಾರ್ಸೆಲ್‌ಗ‌ಳನ್ನು ಹೈದರಾಬಾದ್‌ನಲ್ಲಿರುವ ಐಸಿಎಆರ್‌-ರಾಷ್ಟ್ರೀಯ ಮಾಂಸ ಸಂಶೋಧನಾ ಸಂಸ್ಥೆಗೆ ಕಳುಹಿಸಿಲಾಗಿತ್ತು. ಇದೀಗ ವರದಿಯಲ್ಲಿ ಕುರಿ ಮಾಂಸ ಎಂಬುದು ದೃಢವಾಗಿದೆ ಎಂದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಸ್ಪಷ್ಟನೆ ನೀಡಿದೆ.

ಏನಿದು ಪ್ರಕರಣ?: ಜುಲೈ 26ರಂದು ರಾಜಸ್ಥಾನದ ಜೈಪುರದಿಂದ ಲೋಡ್‌ಗಟ್ಟಲೇ ಬಂದಿದ್ದ ಬಾಕ್ಸ್‌ಗಳು ಮೆಜೆಸ್ಟಿಕ್‌ನಲ್ಲಿ ಅನ್‌ಲೋಡ್‌ ಆಗಿತ್ತು. ಆ ವೇಳೆ ಹಿಂದೂ ಪರ ಹೋರಾಟಗಾರ ಪುನೀತ್‌ ಕೆರೆಹಳ್ಳಿ ತಂಡವು ದಾಳಿ ಮಾಡಿತ್ತು. ಬಾಕ್ಸ್‌ಗಳಲ್ಲಿ ಕುರಿ ಮಾಂಸದ ಜೊತೆ ನಾಯಿ ಮಾಂಸವನ್ನೂ ಮಿಕ್ಸ್‌ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇವುಗಳನ್ನು ತರಿಸುತ್ತಿದ್ದ ಅಬ್ದುಲ್‌ ರಜಾಕ್‌ ಹಾಗೂ ಪುನೀತ್‌ ಕೆರೆಹಳ್ಳಿ ನಡುವೆ ಈ ವಿಚಾರವಾಗಿ ವಾಗ್ವಾದವೂ ನಡೆದಿತ್ತು. ಬಳಿಕ ಈ ಪ್ರಕರಣ ಪೊಲೀಸ್‌ ಠಾಣೆ ಮೆಟ್ಟಿಲೇರಿತ್ತು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.