ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ ಬಿ.ಸಿ.ಪಾಟೀಲ್ ಮನವಿ


Team Udayavani, Aug 10, 2021, 4:50 PM IST

ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ ಬಿ.ಸಿ.ಪಾಟೀಲ್ ಮನವಿ

ನವದೆಹಲಿ/ಬೆಂಗಳೂರು: ಕೃಷಿ ಸಚಿವಬಿ.ಸಿ.ಪಾಟೀಲ್ ನವದೆಹಲಿಯಲ್ಲಿ  ಮಂಗಳವಾರ ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರದ ರಾಜ್ಯ ರಾಸಾಯನಿಕ ಸಚಿವ ಭಗವಂತ್ ಖೂಬಾ ಅವರನ್ನು ಭೇಟಿ ಮಾಡಿ, ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆ ಮೀರಿ ಸುಮಾರು 77 ಲಕ್ಷ ಹೆಕ್ಟೇರ್ ದಾಖಲೆಯ ಪ್ರಮಾಣದಷ್ಟು ಬಿತ್ತನೆ ಆಗಿತ್ತು. ಈ ಬಾರಿಯೂ ಕೂಡ ಬೇಗನೇ ಬಿತ್ತನೆಯಾಗಿದ್ದು,ಕೃಷಿ ಚಟುವಟಿಕೆ ಚುರುಕು ಪಡೆದಿದೆ. ಆದ್ದರಿಂದ ಫಸಲು ಬರಲು ಯಾವುದೇ ರೀತಿಯ ಕೊರತೆಯಾಗದಂತೆ ಯೂರಿಯಾ ಸೇರಿದಂತೆ ಇತರೆ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ಮೇರೆಗೆ ಪೂರೈಸುವಂತೆ ಕೇಂದ್ರ ರಾಸಾಯನಿಕ ಸಚಿವರಿಗೆ ಮನವಿ ಮಾಡಿದರು.

ಇದನ್ನೂ ಓದಿ:ಪಿಂಚಣಿ ದಾಖಲೆ ಸರಿಪಡಿಸಿಲು 10 ಸಾವಿರ ರೂ ಲಂಚ ಕೇಳಿದ್ದ ಪ್ರಥಮ ದರ್ಜೆ ಸಹಾಯಕ ಎಸಿಬಿ ಬಲೆಗೆ

ಪ್ರಸಕ್ತ ವರ್ಷದಲ್ಲಿ, ಬಿತ್ತನೆಯ ಪ್ರದೇಶದಲ್ಲಿ ದಾಖಲೆಯ ಹೆಚ್ಚಳ ಮತ್ತು ಸಾಮಾನ್ಯ ಮಳೆಗಿಂತ ಅಧಿಕ ಮಳೆಯಿಂದಾಗಿ, ರಾಜ್ಯಗಳ ಯೂರಿಯಾದ ಅವಶ್ಯಕತೆಯೂ ಅನುಗುಣವಾಗಿ ಹೆಚ್ಚಾಗಿದೆ. ರಾಜ್ಯದಲ್ಲಿ ಸದ್ಯ 0.32 ಲಕ್ಷ ಟನ್ ಯೂರಿಯ ಬಫರ್ ಸ್ಟಾಕ್ ಇದೆ. ಈ ವರ್ಷದಲ್ಲಿ  ಆಗಸ್ಟ್ 7ರವರೆಗೆ ಯೂರಿಯಾ ಪೂರೈಕೆಯು 6.18 ಲಕ್ಷ ಮೆಟ್ರಿಕ್ ಟನ್ ಆಗಿದೆ. ಈ ಬಾರಿಯೂ ಸಹ ಯಾವುದೇ ರೀತಿಯ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಅಲ್ಲದೇ ಕರ್ನಾಟಕ ರಾಜ್ಯದಲ್ಲಿ ಎಣ್ಣೆಕಾಳು ಬೆಳೆಗಳಿಗೆ ಉತ್ತೇಜನ ಮಾಡಲು ಹೆಚ್ಚಿನ ಕಾರ್ಯಕ್ರಮಗಳನ್ನು ನೀಡಬೇಕು. ಹಾಗೂ ಕೃಷಿ ಉತ್ಪನ್ನಗಳ ಹೆಚ್ಚಳಕ್ಕೆ ಹೆಚ್ಚು ಉತ್ತೇಜನ ನೀಡಬೇಕೆಂದು  ಬಿ.ಸಿ.ಪಾಟೀಲ್ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ ಕತ್ರಿ, ಅಪರ ಕೃಷಿ ನಿರ್ದೇಶಕರು (ಸಾವಯವ ಕೃಷಿ )ವೆಂಟಕರಮಣರೆಡ್ಡಿ ಜೊತೆಗಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.