ಪೌರಾಡಳಿತ ಸಚಿವ ಶಿವಳ್ಳಿ ವಿಧಿವಶ


Team Udayavani, Mar 23, 2019, 12:30 AM IST

99.jpg

ಹುಬ್ಬಳ್ಳಿ: ಪೌರಾಡಳಿತ ಸಚಿವ ಮತ್ತು ಧಾರವಾಡ ಜಿಲ್ಲೆ ಕುಂದಗೋಳ ಕಾಂಗ್ರೆಸ್‌ ಶಾಸಕ ಚೆನ್ನಬಸಪ್ಪ ಸತ್ಯಪ್ಪ ಶಿವಳ್ಳಿ (ಸಿ.ಎಸ್‌. ಶಿವಳ್ಳಿ) ಶುಕ್ರವಾರ ಅಪರಾಹ್ನ 1.45ರ ಸುಮಾರಿಗೆ ತೀವ್ರ ಹೃದ ಯಾಘಾತದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ  ಕೊನೆಯುಸಿರೆಳೆದರು.

ಬೆಳಗ್ಗೆ ಹುಬ್ಬಳ್ಳಿಯಲ್ಲಿನ ತನ್ನ ನಿವಾಸದಲ್ಲಿ ಕುಂದಗೋಳ ಕ್ಷೇತ್ರದಿಂದ ಬಂದ ಜನರೊಂದಿಗೆ ಚರ್ಚೆ ಯಲ್ಲಿದ್ದಾಗ, ಯಾಕೋ ಚಳಿಯಾಗುತ್ತಿದೆ ಎಂದು ಹೇಳಿಕೊಂಡಿದ್ದರು. ಕುಟುಂಬದವರು ಕಿಮ್ಸ್‌ ವೈದ್ಯರಿಗೆ ಮಾಹಿತಿ ನೀಡಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ವಾಂತಿ ಮಾಡಿ ಕೊಂಡು ಕುಸಿದು ಬಿದ್ದರು. ಇದೇ ವೇಳೆ ತೀವ್ರ ಹೃದಯಾ ಘಾತ ವಾಗಿದೆ ಎನ್ನಲಾಗುತ್ತಿದೆ. ಕಿಮ್ಸ್‌ ವೈದ್ಯರು ಸಚಿವರ ನಿವಾಸಕ್ಕೆ ಧಾವಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದರಲ್ಲದೆ, ತತ್‌ಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಗೋಕುಲ ರಸ್ತೆಯ ಲೈಫ್ಲೈನ್‌ ಆಸ್ಪತ್ರೆಯಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫ‌ಲಕಾರಿಯಾಗದೆ ಅಪರಾಹ್ನ 1.45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಹೃದಯ ಸಮಸ್ಯೆ ಹೊಂದಿದ್ದರು.

ಸಿ.ಎಸ್‌.ಶಿವಳ್ಳಿ ಅವರಿಗೆ ಹೃದಯ ಸಮಸ್ಯೆ ಇತ್ತು. 2017ರಲ್ಲಿ ತೀವ್ರ ಅಸ್ವಸ್ಥರಾಗಿ ಕಿಮ್ಸ್‌ಗೆ ದಾಖ ಲಾಗಿದ್ದರು. ಅನಂತರ ಏರ್‌ ಆ್ಯಂಬುಲೆನ್ಸ್‌ನಲ್ಲಿ ಅವರನ್ನು ಬೆಂಗಳೂರಿಗೆ ಕರೆದೊಯ್ದು, ಕೊಲಂಬಿಯಾ ಆಸ್ಪತ್ರೆಯಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅನಂತರ ಚೇತರಿಸಿದ ಶಿವಳ್ಳಿ ಅವರು 2018ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇತ್ತೀಚೆಗಷ್ಟೇ ಸಚಿವರಾಗಿ ನೇಮಕಗೊಂಡ ಅನಂತರ ಕುಂದಗೋಳ ಮತಕ್ಷೇತ್ರದ ಕುರಡಿಕೇರಿಯಲ್ಲಿ ಆಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.

ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ಹೊತ್ತಿದ್ದ ಶಿವಳ್ಳಿ
ಧಾರವಾಡದಲ್ಲಿ ಬಹುಮಹಡಿ ವಾಣಿಜ್ಯ ಸಂಕೀರ್ಣ ಕುಸಿದು ಬಿದ್ದ ಬಳಿಕ ಸ್ಥಳದಲ್ಲೇ ಖುದ್ದಾಗಿ ಹಾಜರಿದ್ದು, ರಕ್ಷಣಾ ಕಾರ್ಯದ ಪರಿಶೀಲನೆ ಕೈಗೊಂಡಿದ್ದರು. ಸ್ಥಳಕ್ಕೆ ಬಂದಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ಗುರುವಾರ ರಾತ್ರಿ 9 ಗಂಟೆಯವರೆಗೂ ಇದ್ದರು. 
ಧಾರವಾಡ ಜಿಲ್ಲೆ ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಒಟ್ಟು 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಿ.ಎಸ್‌. ಶಿವಳ್ಳಿ ಅವರು ಕೆಲವೇ ತಿಂಗಳ ಹಿಂದೆಯಷ್ಟೇ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿ ನೇಮಕಗೊಂಡಿದ್ದರು. 

ಸ್ವಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ
ಸಚಿವ ಸಿ.ಎಸ್‌. ಶಿವಳ್ಳಿ ಅವರ ಅಂತ್ಯಕ್ರಿಯೆ ಸ್ವಗ್ರಾಮ ಕುಂದಗೋಳ ತಾಲೂಕು ಯರಗುಪ್ಪಿಯಲ್ಲಿ ಶನಿವಾರ ನಡೆಯಲಿದೆ. ಯರಗುಪ್ಪಿನಲ್ಲಿನ ಸಚಿವರ ಹೊಲದಲ್ಲಿಯೇ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಮಾ.22ರಿಂದ 24ರವರೆಗೆ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.