![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 4, 2021, 12:00 PM IST
ಬೆಂಗಳೂರು: ಇತ್ತೀಚೆಗಷ್ಟೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ ಅವರು ವಿಧಾನ ಸೌಧದ ಕಚೇರಿಯಲ್ಲಿ ಹೋಮ ಹವನ, ಪೂಜಾ ಕಾರ್ಯ ನೆರವೇರಿಸಿದರು.
ಬಂದರು ಹಾಗೂ ಮೀನುಗಾರಿಕಾ ಸಚಿವರಾಗಿರುವ ಎಸ್. ಅಂಗಾರ ಅವರು ತಡರಾತ್ರಿ ನೂತನ ಕಚೇರಿಯಲ್ಲಿ ಹೋಮ ನಡೆಸಿದ್ದರು. ನಾಲ್ವರು ಅರ್ಚಕರಿಂದ ಹೋಮ, ಹವನ ನಡೆದಿತ್ತು. ವಾಸ್ತು ಹೋಮ ಹಾಗೂ ಗಣ ಹೋಮ ನಡೆಸಿದ್ದರು.
ಇದನ್ನೂ ಓದಿ:ಮಂಗಳೂರು ಸಹಿತ 3 ಘಟಕ ನಷ್ಟದಲ್ಲಿ: ಅಂಗಾರ
ಇಂದು ಬೆಳಿಗ್ಗೆ ಕಚೇರಿಯಲ್ಲಿ ಪೂಜಾಕಾರ್ಯ ನೆರವೇರಿಸಿದರು. ವಿಧಾನಸೌಧ ಕಚೇರಿಯಲ್ಲಿ (252 ಹಾಗೂ 253A) ಪೂಜಾ ವಿಧಿ-ವಿಧಾನಗಳನ್ನು ನಡೆಸಿ ಆಶೀರ್ವಾದ ಕೋರಲಾಯಿತು. ನಾಡಿನ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ನಿಮ್ಮೆಲ್ಲರ ಶುಭಶೀರ್ವಾದ, ಭಗವಂತನ ಕೃಪೆ ಇರಲಿ ಎಂದು ಪ್ರಾರ್ಥಿಸಲಾಗಿದೆ ಎಂದು ಎಸ್. ಅಂಗಾರ ಹೇಳಿಕೊಂಡಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಎಸ್.ಅಂಗಾರ ಅವರ ಕಚೇರಿ ಪೂಜೆಗೆ ಆಗಮಿಸಿದ್ದರು. ಕಚೇರಿ ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಎಸ್ ಅಂಗಾರ ಭಾವುಕರಾದರು. ನನಗೆ ದೇವರ ಮೇಲೆ ನಂಬಿಕೆಯಿದೆ. ದೇವರ ಅನುಗ್ರಹ ಬೇಕು. ಹಾಗಾಗಿಯೇ ಹೋಮ ಮಾಡಿಸಿದೆ ಎಂದು ಅವರು ಹೇಳಿದರು.
ಆತ್ಮೀಯರು, ಸಜ್ಜನರು, ಕರಾವಳಿಯ ಬಂಗಾರ ಮೀನುಗಾರಿಕೆ ಬಂದರು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ @AngaraSBJP ಅವರ ವಿಧಾನ ಸೌಧದ ಆಡಳಿತ ಕಚೇರಿಯ ಪೂಜೆಯಲ್ಲಿ ಪಾಲ್ಗೊಂಡು ಶುಭ ಹಾರೈಸಲಾಯಿತು. pic.twitter.com/rG7bef7O9n
— Kota Shrinivas Poojari (@KotasBJP) February 4, 2021
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.