Minister ಎಸ್.ಎಸ್. ಮಲ್ಲಿಕಾರ್ಜುನ್ ಅವರು ಆಸ್ಪತ್ರೆಗೆ ದಾಖಲಾಗಿಲ್ಲ: ಡಾ. ಪ್ರಭಾ
Team Udayavani, May 31, 2024, 5:43 PM IST
ದಾವಣಗೆರೆ: ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿಯಾದ ಬೆನ್ನಲ್ಲೇ ಅವರ ಪತ್ನಿ, ಎಸ್ ಎಸ್ ಕೇರ್ ಟ್ರಸ್ಟ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಾಧ್ಯಮ ಹೇಳಿಕೆ ನೀಡಿದ್ದು ”ಇದು ಸತ್ಯಕ್ಕೆ ದೂರವಾಗಿದೆ”ಎಂದು ಹೇಳಿದ್ದಾರೆ.
ಶುಕ್ರವಾರ ಮಧ್ಯಾಹ್ನ ಕೆಲವು ಮಾಧ್ಯಮಗಳಲ್ಲಿ ಮಲ್ಲಿಕಾರ್ಜುನ್ ರವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿ ಪ್ರಸಾರ ವಾಗಿತ್ತು.
ಸಚಿವರು ಆರೋಗ್ಯವಾಗಿದ್ದು ಆ ರೀತಿಯ ಯಾವುದೇ ಘಟನೆ ನಡೆದಿಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರು, ಎಸ್.ಎಸ್.ಎಂ ಅಭಿಮಾನಿಗಳು ಹಾಗೂ ಸಾರ್ವಜನಿಕರು ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗಬಾರದು ಎಂದು ಡಾ. ಪ್ರಭಾ ಮನವಿ ಮಾಡಿದ್ದಾರೆ.
ಶಿವಶಂಕರಪ್ಪ ಬೆಂಗಳೂರಿಗೆ
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94 ವರ್ಷ) ಅವರ ಆರೋಗ್ಯದಲ್ಲಿ ಶುಕ್ರವಾರ ತೀವ್ರ ಸುಸ್ತು ಕಾಣಿಸಿಕೊಂಡಿದ್ದರಿಂದ ಸಂಜೆ ಹೆಚ್ಚಿನ ತಪಾಸಣೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಮಧ್ಯಾಹ್ನ ತೀವ್ರ ಸುಸ್ತು ಎಂದಿದ್ದರಿಂದ ಕೂಡಲೇ ನಗರದ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ಸಾಮಾನ್ಯ ತಪಾಸಣೆ ಮಾಡಲಾಯಿತು. ಯಾವುದೇ ಗಂಭೀರ ಸಮಸ್ಯೆ ಕಂಡು ಬಂದಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ತಪಾಸಣೆ ಬೆಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಕುಟುಂಬದ ಮೂಲಗಳು ಸ್ಪಷ್ಟಪಡಿಸಿವೆ.
ಶಾಮನೂರು ಶಿವಶಂಕರಪ್ಪ ಅವರಿಗೆ ವಯೋಸಹಜ ಸುಸ್ತು ಕಾಣಿಸಿಕೊಂಡಿತ್ತು. ಸ್ಥಳೀಯವಾಗಿ ಸಾಮಾನ್ಯ ತಪಾಸಣೆ ನಡೆಸಿ, ಹೆಚ್ಚಿನ ತಪಾಸಣೆಗೆ ಬೆಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿದೆ. ಅವರ ಆರೋಗ್ಯದಲ್ಲಿ ಉಸಿರಾಟ ಸಮಸ್ಯೆಯಾಗಲಿ, ಬೇರೆ ಯಾವುದೇ ಸಮಸ್ಯೆಯಾಗಲಿ ಕಂಡು ಬಂದಿಲ್ಲ. ಹಿರಿಯ ಶಾಸಕರು ಆರೋಗ್ಯವಾಗಿದ್ದಾರೆ ಎಂದು ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ್ ಉದಯವಾಣಿ ಗೆ ಸ್ಪಷ್ಟಪಡಿಸಿದ್ದಾರೆ.
ವದಂತಿ ತಂದ ಆತಂಕ
ಕೆಲವು ಮಾಧ್ಯಮಗಳಲ್ಲಿ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಭಾರಿ ಏರುಪೇರಾಗಿದೆ ಎಂದು ಪ್ರಸಾರವಾದರೆ, ಮತ್ತೆ ಕೆಲವು ಮಾಧ್ಯಮಗಳಲ್ಲಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಏರ್ ಲಿಫ್ಟ್ ಮಾಡಲಾಗಿದೆ ಎಂಬ ವರದಿ ಪ್ರಸಾರವಾಗಿ, ಅದು ಸಾಮಾಜಿಕ ಜಾಲತಾಣಗಳ ಮೂಲಕ ವೈರಲ್ ಆಗಿತ್ತು. ಇದು ಅಭಿಮಾನಿಗಳು, ಹಿತೈಷಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಭಾರಿ ಆತಂಕ ಸೃಷ್ಟಿಸಿತ್ತು. ಅನೇಕರು ಶಾಮನೂರು ಮನೆಯತ್ತ ಸಹ ಧಾವಿಸಿದ್ದರು.
ಶಾಮನೂರು ಶಿವಶಂಕರಪ್ಪ ಅವರ ಸೊಸೆ, ದಾವಣಗೆರೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಎಲ್ಲರಿಗೂ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದ ಕುರಿತು ನಿಖರ ಮಾಹಿತಿ ನೀಡಿ, ಆತಂಕ ದೂರ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.