Congress ನಿಗಮ-ಮಂಡಳಿ ಅಧ್ಯಕ್ಷರ ಕೆಲಸದಲ್ಲಿ ಸಚಿವರ ಹಸ್ತಕ್ಷೇಪ: ಹೈಕಮಾಂಡ್‌ಗೆ ದೂರು

ಸಚಿವ ಬೈರತಿ ಸುರೇಶ್‌ ವಿರುದ್ಧ ಪರೋಕ್ಷ ಆರೋಪ; ಹೈಕಮಾಂಡ್‌ ದೂರಿಗೆ ವಿನಯ ಕುಲಕರ್ಣಿ ಸಾರಥ್ಯ?

Team Udayavani, Jun 26, 2024, 6:27 AM IST

Congress ನಿಗಮ-ಮಂಡಳಿ ಅಧ್ಯಕ್ಷರ ಕೆಲಸದಲ್ಲಿ ಸಚಿವರ ಹಸ್ತಕ್ಷೇಪ: ಹೈಕಮಾಂಡ್‌ಗೆ ದೂರು

ಬೆಂಗಳೂರು: ಸಮುದಾಯವಾರು ಡಿಸಿಎಂ ಹುದ್ದೆಯ ಬೇಡಿಕೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿರುವ ಸಂದರ್ಭದಲ್ಲೇ ನಿಗಮ-ಮಂಡಳಿಗಳ ಅಧ್ಯಕ್ಷರ ಕಾರ್ಯವ್ಯಾಪ್ತಿಯಲ್ಲಿ ಸಚಿವರ ಹಸ್ತಕ್ಷೇಪದ ಬಗ್ಗೆ ಅಸಮಾಧಾನ ಸ್ಫೋಟಗೊಂಡಿದೆ.

ಈ ಸಂಬಂಧ ಹೈಕಮಾಂಡ್‌ಗೆ ದೂರು ಕೂಡ ಸಲ್ಲಿಕೆಯಾಗಿದೆ. ಇದರಿಂದ “ಕೈ’ ಪಾಳಯದಲ್ಲಿ ಈಗ ಒಂದರ ಹಿಂದೊಂದು ವಿವಾದದ ಭುಗಿಲೇಳುತ್ತಿವೆ.

ನೂತನ ಸಂಸದರ ಪ್ರಮಾಣ ವಚನ ನೆಪದಲ್ಲಿ ದೆಹಲಿಗೆ ತೆರಳಿದ ಕೆಲ ನಾಯಕರು ಅದರಲ್ಲೂ ವಿಶೇಷವಾಗಿ ವೀರಶೈವ-ಲಿಂಗಾಯತ ಸಮುದಾಯದ ಶಾಸಕರು ಹಾಗೂ ನಿಗಮ-ಮಂಡಳಿಗಳ ಅಧ್ಯಕ್ಷರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ತಮ್ಮ ಕಾರ್ಯವ್ಯಾಪ್ತಿಯಲ್ಲಿ ವಿನಾಕಾರಣ ಹಸ್ತಕ್ಷೇಪ ಮಾಡುತ್ತಿರುವ ಸಚಿವರ ವಿರುದ್ಧ ದೂರು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ವಿರುದ್ಧ ಅದೇ ಇಲಾಖೆಗೆ ಸಂಬಂಧಿಸಿದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆಯುಡಬ್ಲ್ಯೂ ಎಸ್‌ಡಿ) ಅಧ್ಯಕ್ಷ ಹಾಗೂ ಧಾರವಾಡ ಶಾಸಕ ವಿನಯ ಕುಲಕರ್ಣಿ ವರಿಷ್ಠರಿಗೆ ದೂರು ಸಲ್ಲಿಸಿದ್ದಾರೆ. ಈ ಭೇಟಿಯಲ್ಲಿ ಸಚಿವ ಸತೀಶ ಜಾರಕಿಹೊಳಿ, ಕಿತ್ತೂರು ಶಾಸಕ ಬಾಬಾಸಾಹೇಬ್‌ ಪಾಟೇಲ್‌ ಕೂಡ ಇದ್ದರು ಎನ್ನಲಾಗಿದೆ. ಕೆಲವು ನಿಗಮ-ಮಂಡಳಿಗಳ ಅಧ್ಯಕ್ಷರ ಕಾರ್ಯವ್ಯಾಪ್ತಿಯಲ್ಲಿ ಹಲವು ಸಚಿವರು ಅನಗತ್ಯವಾಗಿ ಮೂಗುತೂರಿಸುತ್ತಿದ್ದಾರೆ. ಇದರಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿಕ್ಕೂ ಆಗುತ್ತಿಲ್ಲ ಅಂತಾ ವರಿಷ್ಠರ ಗಮನಸೆಳೆದಿರುವುದಾಗಿ ಭೇಟಿಯಾದ ನಿಯೋಗದಲ್ಲಿನ ನಾಯಕರೊಬ್ಬರು ತಿಳಿಸಿದ್ದಾರೆ.

ಮುಖ್ಯವಾಗಿ ಹುಬ್ಬಳ್ಳಿ-ಧಾರವಾಡ ಕಾರ್ಪೋರೇಷನ್‌ಗೆ ನಗರೋತ್ಥಾನ ಯೋಜನೆ ಅಡಿ ಬರುವ ಅನುದಾನ ಹಂಚಿಕೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಅಭಿವೃದ್ಧಿ ಅಡಿ ಕೈಗೊಳ್ಳಬೇಕಾದ ಕೆರೆ ಮತ್ತಿತರ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವ ವಿಚಾರ, ಕೆಯುಡಬ್ಲ್ಯೂಎಸ್‌ಡಿ ಅಡಿ ಹಲವು ಯೋಜನೆಗಳು ಅಥವಾ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳುವುದರಿಂದ ಹಿಡಿದು ಪ್ರತಿ ಹಂತದಲ್ಲಿ ಸಚಿವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದು ಬೇರೆ ರೀತಿಯ ಪರಿಣಾಮ ಬೀರುತ್ತಿದೆ. ಅಧಿಕಾರಿಗಳಲ್ಲೂ ಗೊಂದಲಕ್ಕೆ ಎಡೆಮಾಡಿಕೊಡುತ್ತಿದೆ ಎಂದು ದೂರು ಸಲ್ಲಿಸಲಾಗಿದೆ.

ಈಗಾಗಲೇ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಲವು ಬಾರಿ ದೂರು ನೀಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಅನಿವಾರ್ಯವಾಗಿ ವರಿಷ್ಠರ ಗಮನಕ್ಕೆ ತರಲಾಗಿದೆ. ದೂರು ಆಲಿಸಿದ ಅಧ್ಯಕ್ಷರು, ಈ ಬಗ್ಗೆ ಪರಿಶೀಲಿಸಿ ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಚಿವರ ಹಿಟ್ಲರ್‌ ಧೋರಣೆಗೆ ಆಕ್ರೋಶ:
ಈ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದ ವಿನಯ ಕುಲಕರ್ಣಿ, ಪ್ರತಿ ಹಂತದಲ್ಲೂ ಸಚಿವರ ಹಸ್ತಕ್ಷೇಪ ಇದೆ. ಕಾರ್ಪೋರೇಷನ್‌ ಅನುದಾನ ಹಂಚಿಕೆ ಆಗಿರಬಹುದು, ನಾನೇ ಅಧ್ಯಕ್ಷನಾಗಿರುವ ಮಂಡಳಿ ವಿಚಾರದಲ್ಲಿ ಆಗಿರಬಹುದು. ಹೀಗೆ ಪ್ರತಿಯೊಂದರಲ್ಲಿ ಮೂಗುತೂರಿಸುವುದಾದರೆ ನಮಗ್ಯಾಕೆ ಈ ಅಧ್ಯಕ್ಷಗಿರಿ ಕೊಡಬೇಕು? ಸಚಿವರ ಈ ಹಿಟ್ಲರ್‌ ನಡೆಯಿಂದ ಬೇಸತ್ತು ದೂರು ನೀಡಲಾಗಿದೆ. ಈ ಧೋರಣೆ ವಿರುದ್ಧ ಹೋರಾಟ ನಿರಂತರವಾಗಿರಲಿದೆ ಎಂದು ಹೇಳಿದರು.

ಇದೇ ವೇಳೆ ಮುಂಬರುವ ದಿನಗಳಲ್ಲಿ ಡಿ.ಕೆ. ಶಿವಕುಮಾರ್‌ ರಾಜೀನಾಮೆಯಿಂದ ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ವೀರಶೈವ-ಲಿಂಗಾಯತ ಸಮುದಾಯದ ನಾಯಕರನ್ನು ನೇಮಿಸಬೇಕು. ಹಿಂದಿನ ಚುನಾವಣೆಯಲ್ಲಿ ಸಮುದಾಯವು ಪಕ್ಷವನ್ನು ಬೆಂಬಲಿಸಿದೆ. ಇದರಿಂದಲೇ ಇಷ್ಟೊಂದು ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ. ಪಕ್ಷ ಸಂಘಟನೆ ಮತ್ತು ಬೆಳವಣಿಗೆ ದೃಷ್ಟಿಯಿಂದ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಟಾಪ್ ನ್ಯೂಸ್

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.