Railway: ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಸಚಿವರ ಸಲಹೆ

ಬೆಂಗಳೂರು- ಉತ್ತರ ಕರ್ನಾಟಕ ಪಯಣದ ಅವಧಿ ಇಳಿಸಲು ಒತ್ತು

Team Udayavani, Aug 27, 2024, 9:02 PM IST

15-railway

ಬೆಂಗಳೂರು: ರೈಲ್ವೆ ಜತೆ ವೆಚ್ಚ ಹಂಚಿಕೆ ಆಧಾರದಲ್ಲಿ ಕೈಗೊಂಡಿರುವ ರಾಜ್ಯದ ಗದಗ- ವಾಡಿ, ಧಾರವಾಡ-ಬೆಳಗಾವಿ, ತುಮಕೂರು- ದಾವಣಗೆರೆ, ತುಮಕೂರು-ರಾಯದುರ್ಗ ಸೇರಿದಂತೆ ಹಲವಾರು ರೈಲ್ವೆ ಯೋಜನೆಗಳಿಗೆ ಎದುರಾಗಿರುವ ಭೂಸ್ವಾಧೀನ ಅಡೆತಡೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಮತ್ತು ಯೋಜನೆಗಳ ತ್ವರಿತ ಕಾಮಗಾರಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಮಂಗಳವಾರ ಇಲ್ಲಿ ನೈರುತ್ಯ ರೈಲ್ವೆ ಅಧಿಕಾರಿಗಳ ಜತೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಈ ಸಭೆಯಲ್ಲಿ ಅವರು ಸಚಿವರಾದ ಪ್ರಿಯಾಂಕ್ ಖರ್ಗೆ, ದಾವಣಗೆರೆ, ಕಲ್ಬುರ್ಗಿ ಮತ್ತು ಹಾವೇರಿ ಜಿಲ್ಲಾಧಿಕಾರಿಗಳು, ಕೃಷ್ಣಾ ಭಾಗ್ಯ ಜಲನಿಗಮದ ಉನ್ನತಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ತಂತಮ್ಮ ಜಿಲ್ಲೆಯಲ್ಲಿ ಹಾದು ಹೋಗುವ ರೈಲ್ವೆ ಯೋಜನೆಗಳಿಗೆ ತೊಡಕಾಗಿರುವ ಸಮಸ್ಯೆಗಳನ್ನು ಕ್ಷಿಪ್ರವಾಗಿ ಬಗೆಹರಿಸಿ, ಸಹಕರಿಸುವಂತೆ ಮನವಿ ಮಾಡಿದರು. ಜತೆಗೆ, ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ಅವರೊಂದಿಗೆ ಸದ್ಯದಲ್ಲೇ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು- ವಿಜಯಪುರ ನಡುವೆ 10 ಗಂಟೆ ಪಯಣ

ಗದಗ- ಹುಟಗಿ ನಡುವೆ 242 ಕಿ.ಮೀ. ನಡುವಿನ ಜೋಡಿ ಹಳಿ ಅಭಿವೃದ್ಧಿ ಕಾರ್ಯ ಬಹುತೇಕ ಮುಗಿದಿದೆ. ಆದರೆ, ಬಾಗಲಕೋಟೆ- ವಂಡಾಲ್ ನಡುವೆ 45 ಕಿ.ಮೀ ಜೋಡಿ ರೈಲು ಕಾಮಗಾರಿ ಬಾಕಿ‌ ಇದೆ. ಈ ಕಾಮಗಾರಿ ಡಿಸೆಂಬರ್ ವೇಳೆಗೆ ಮುಗಿಯಬೇಕು. ವಿಳಂಬ ಅಂದರೂ ಮಾರ್ಚ್ ಹೊತ್ತಿಗೆ ಮುಗಿಯಲಿದೆ. ಜತೆಗೆ ಆಲಮಟ್ಟಿ ಪ್ರದೇಶದಲ್ಲಿ ಕೂಡ ಕೆಲವು ಕಿರು ಸೇತುವೆಗಳ ನಿರ್ಮಾಣ ಬಾಕಿ‌ ಇದೆ. ಇದರಿಂದಾಗಿ ಬೆಂಗಳೂರು- ವಿಜಯಪುರ ರೈಲು ಪಯಣಕ್ಕೆ ಈಗ 14-15 ಗಂಟೆ ಹಿಡಿಯುತ್ತಿದೆ. ಈ ಸಮಸ್ಯೆಯಿಂದಾಗಿ ವಂದೇ ಭಾರತ್ ಎಕ್ಸ್ ಪ್ರೆಸ್ ಸೇವೆ ಆರಂಭಕ್ಕೂ ವಿಘ್ನ ಎದುರಾಗಿದೆ. ಇದನ್ನು ಸರಿಪಡಿಸಿದರೆ ಬೆಂಗಳೂರು- ವಿಜಯಪುರ ಪಯಣ 10-11 ಗಂಟೆಗಳಿಗೆ ಇಳಿಯಲಿದೆ. ಈ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿ ಮುಗಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೈಪಾಸ್ ಮೂಲಕ ಸಂಚರಿಸಲಿ:

ಈಗ ಬೆಂಗಳೂರಿನಿಂದ ಉತ್ತರ ಕರ್ನಾಟಕಕ್ಕೆ ಬರುತ್ತಿರುವ ಗೂಡ್ಸ್ ರೈಲುಗಳು ಹುಬ್ಬಳ್ಳಿ ದಕ್ಷಿಣ ನಿಲ್ದಾಣದ ಸಮೀಪದ ಬೈಪಾಸ್ ಮೂಲಕ ಗದಗದ ಕಡೆಗೆ ತಿರುಗುತ್ತಿವೆ. ಅಲ್ಲೂ ಸಹ ಗದಗ ಮುಖ್ಯ ನಿಲ್ದಾಣಕ್ಕೆ ಹೋಗದೆ ಬೈಪಾಸ್ ನಲ್ಲೇ ವಿಜಯಪುರ, ಸೊಲ್ಲಾಪುರದ ಕಡೆಗೆ ಹೋಗುತ್ತಿವೆ. ಹುಬ್ಬಳ್ಳಿ ದಕ್ಷಿಣ ರೈಲು ನಿಲ್ದಾಣದಲ್ಲಿ ಮೂಲಸೌಕರ್ಯಗಳ ಕೊರತೆ ಇರುವುದರಿಂದ ಪ್ರಯಾಣಿಕ ರೈಲುಗಳು ಈಗ ಹುಬ್ಬಳ್ಳಿ ಮುಖ್ಯ ನಿಲ್ದಾಣಕ್ಕೆ ಹೋಗಿ, ಎಂಜಿನ್ ಬದಲಿಸಿಕೊಂಡು ಬರುತ್ತಿವೆ. ಇದರಿಂದಾಗಿ ಗಂಟೆಗಟ್ಟಲೆ ಸಮಯ ವ್ಯರ್ಥವಾಗುತ್ತಿವೆ. ಆದ್ದರಿಂದ ನೈರುತ್ಯ ರೈಲ್ವೆಯು ಹುಬ್ಬಳ್ಳಿ ದಕ್ಷಿಣ ನಿಲ್ದಾಣವನ್ನು ಪ್ರಯಾಣಿಕ ಸ್ನೇಹಿಯಾಗಿ ಆದಷ್ಟು ಬೇಗ ಅಭಿವೃದ್ಧಿಪಡಿಸಿ, ವಿಜಯಪುರ ಕಡೆ‌ ಹೋಗುವ ರೈಲುಗಳನ್ನು ಅಲ್ಲಿಂದಲೇ ಗದಗದ ಕಡೆ ತಿರುಗಿಸುವ ಕೆಲಸ ಆಗಬೇಕು. ಅದೇ ರೀತಿ ಗದಗದಲ್ಲಿಯೂ ಬೈಪಾಸ್ ಮೂಲಕ ವಿಜಯಪುರದ ಕಡೆಗೆ ಹೋಗುವ ಹಾಗೆ ಆಗಬೇಕು.‌ ಇದರಿಂದ ಸಾಕಷ್ಟು ಸಮಯವನ್ನು ಉಳಿಸಬಹುದು ಎಂದು ಸಚಿವರು ರೈಲ್ವೆ ಅಧಿಕಾರಿಗಳ ಗಮನ ಸೆಳೆದರು. ಇದಕ್ಕೆ ಸಕಾರಾತ್ಮಕ ಸ್ಪಂದಿಸಿದ ಸಚಿವರು ತಮ್ಮ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ, ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಗದಗ-ವಾಡಿ ಯೋಜನೆಯಲ್ಲಿ ಶಹಾಪುರ-ಬಿರಾಲ್ ಬುಜೂರು ಬಳಿ ಇರುವ ಹಳಕಟ್ಟಾ ಬಳಿ 11 ಎಕರೆ ಭೂಸ್ವಾಧೀನದ ಸಮಸ್ಯೆ ಎದುರಾಗಿದೆ. ಇದರಿಂದಾಗಿ 26 ಕಿ.ಮೀ. ಕಾಮಗಾರಿ ನಿಂತಿದೆ. ಹಿಂದೆಯೇ ಕಲಬುರಗಿ ಜಿಲ್ಲಾಧಿಕಾರಿಗೆ ಇದನ್ನು ಗಮನಕ್ಕೆ ತರಲಾಗಿತ್ತು. ಆದರೂ ಸಮಸ್ಯೆ ಹಾಗೆಯೇ ಇದೆ. ಈ ಕಾಮಗಾರಿಯನ್ನು 2025ರ ಜೂನ್ ಒಳಗೆ ಮುಗಿಸಬೇಕು ಎಂದು ಸಚಿವರು ಹೇಳಿದರು. ಜತೆಗೆ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಭೂಸ್ವಾಧೀನಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಮನದಟ್ಟು ಮಾಡಿಕೊಟ್ಟರು.

ಗದಗ-ವಾಡಿ ಯೋಜನೆ 2028ರೊಳಗೆ, ಬಾಗಲಕೋಟೆ-ಕುಡಚಿ ಯೋಜನೆ 2026ರ ಡಿಸೆಂಬರ್ ಹೊತ್ತಿಗೆ ಪೂರ್ಣವಾಗಬೇಕು. ತುಮಕೂರು- ದಾವಣಗೆರೆ ಯೋಜನೆಯಲ್ಲಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 300 ಎಕರೆ ಕೊಡಬೇಕಾಗಿದೆ. ಜತೆಗೆ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೈಪ್ ಲೈನ್, ವಿದ್ಯುತ್ ಕಂಬಗಳು ಎಲ್ಲವನ್ನೂ ಬದಲಿಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದರು. ಜೊತೆಗೆ ಕೃಷ್ಣಾ ಭಾಗ್ಯ ಜಲ ನಿಗಮದ ಉನ್ನತಾಧಿಕಾರಿ ಮೋಹನರಾಜ್ ಮತ್ತು ದಾವಣಗೆರೆ ಜಿಲ್ಲಾಧಿಕಾರಿಗೆ ಅವರು ಅಗತ್ಯ ಸೂಚನೆ ನೀಡಿದರು.

ತುಮಕೂರು- ರಾಯದುರ್ಗ ಯೋಜನೆ

ಗಿಣಿಗೇರಾ-ರಾಯಚೂರು ಯೋಜನೆ 2027ರ ಫೆಬ್ರವರಿ ಹೊತ್ತಿಗೆ ಸಂಪೂರ್ಣವಾಗಬೇಕು. ತುಮಕೂರು- ರಾಯದುರ್ಗ ಯೋಜನೆಗೆ ಈಗ ವೇಗ ಬಂದಿದೆ. ಕೊರಟಗರೆ- ಮಧುಗಿರಿ ನಡುವಿನ ಕಾಮಗಾರಿಗೆ ಈ ತಿಂಗಳಲ್ಲಿ ಟೆಂಡರ್ ಕರೆಯಲಾಗಿದೆ. ಮಧುಗಿರಿ-ಮಡಕಶಿರಾ ನಡುವಿನ ಕಾಮಗಾರಿಗೆ ಸೆಪ್ಟೆಂಬರಿನಲ್ಲಿ ಟೆಂಡರ್ ಕರೆಯಲಾಗುವುದು. ತುಮಕೂರು- ಕೊರಟಗೆರೆ ನಡುವಿನ 29 ಕಿ.ಮೀ. ಕಾಮಗಾರಿಗೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ. ಇದು ಅಂತರರಾಜ್ಯ ಯೋಜನೆಯಾಗಿದ್ದು, 2027ರ ಜನವರಿಗೆ ಮುಕ್ತಾಯವಾಗಬೇಕು. ಮಧುಗಿರಿ-ಮಡಕಶಿರಾ ನಡುವೆ 63 ಎಕರೆ, ಕೊರಟಗೆರೆ-ಮಧುಗಿರಿ ಮಧ್ಯೆ 43 ಎಕರೆ ಮಾತ್ರ ಭೂಸ್ವಾಧೀನ ಬಾಕಿ ಇದೆ. ಆದ್ದರಿಂದ ಕಾಮಗಾರಿ ಚುರುಕಾಗಿ ನಡೆಯಬೇಕು ಎಂದು ಪಾಟೀಲ ನಿರ್ದೇಶಿಸಿದರು.

ಚಿಕ್ಕಮಗಳೂರು-ಹಾಡಿಹಳ್ಳಿ, ಹಾಡಿಹಳ್ಳಿ-ಬೇಲೂರು ಯೋಜನೆಗೆ ನೂರಕ್ಕೆ ನೂರರಷ್ಟು ಭೂಸ್ವಾಧೀನವಾಗಿದೆ. ಈ ಪೈಕಿ ಚಿಕ್ಕಮಗಳೂರು-ಹಾಡಿಹಳ್ಳಿ ನಡುವೆ ಕಾಮಗಾರಿ ಮುಗಿದಿದೆ. ಹಾಡಿಹಳ್ಳಿ-ಬೇಲೂರು ನಡುವಿನ 12 ಕಿ.ಮೀ. ಯೋಜನೆ ಒಂದು ವರ್ಷದಲ್ಲಿ ಮುಗಿಯಬೇಕು. ಹಾಗೆಯೇ ಹಾಸನ-ಬೇಲೂರು ಯೋಜನೆಗೆ 509 ಎಕರೆ ಬೇಕಾಗಿದೆ. ಭೂಸ್ವಾಧೀನ ಮುಗಿಸಿ, ತ್ವರಿತವಾಗಿ ಟೆಂಡರ್ ಕರೆಯಬೇಕು. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಮುಗಿಸಲಾಗಿದೆ. ಆದರೆ, ರೈಲ್ವೆ ಇಲಾಖೆಗೆ ದಾಖಲಾತಿ ಹಸ್ತಾಂತರವಾಗದೆ ಸಮಸ್ಯೆಯಾಗಿದೆ. ಇದನ್ನು ಕೂಡಲೇ ಬಗೆಹರಿಸಬೇಕು ಎಂದು ಹಾವೇರಿ ಜಿಲ್ಲಾಧಿಕಾರಿಗೆ ಸೂಚಿಸಿದರು.

ಧಾರವಾಡ-ಬೆಳಗಾವಿ ಯೋಜನೆ

ಈಗ ಧಾರವಾಡ-ಬೆಳಗಾವಿ ನಡುವೆ ಈಗಿನ ರೈಲು ಪಯಣ ಈಗ ಪ್ರಯಾಸಕರವಾಗಿದೆ. ಇದನ್ನು ನಾವು ಸುಗಮಗೊಳಿಸಬೇಕಿದೆ. ಇದಕ್ಕಾಗಿ 888 ಎಕರೆ ಭೂಮಿ ಬೇಕಾಗಿದೆ. ಇದು ಮುಗಿಯದೆ ಕಾಮಗಾರಿ ಆರಂಭ ಸಾಧ್ಯವಿಲ್ಲ. ಭೂಮಿ ಹಸ್ತಾಂತರವಾದರೆ 2027ರ ಕೊನೆಯ ವೇಳೆಗೆ ಕಾಮಗಾರಿ ಮುಗಿಸಬಹುದು ಎಂದು ಪಾಟೀಲ ನುಡಿದರು. ಈ ಸಂಬಂಧ ಅವರು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ ಮತ್ತು ಸಂತೋಷ್ ಲಾಡ್ ಇಬ್ಬರನ್ನೂ ಸೇರಿಸಿಕೊಂಡು ಸಭೆ ನಡೆಸಲು ಸಚಿವರು ಸಲಹೆ ನೀಡಿದರು.

ಸಭೆಯಲ್ಲಿ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಮೂಲಸೌಕರ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಶ್ರೀಧರ ಮೂರ್ತಿ, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ನೈರುತ್ಯ ರೈಲ್ವೆಯ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಅಜಯ ಶರ್ಮಾ, ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಮೂರ್ತಿರಾಜು ಸೇರಿದಂತೆ ನೈರುತ್ಯ ರೈಲ್ವೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

3-thirthahalli

Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

1-dde

Edneer ಶ್ರೀ ಚಾತುರ್ಮಾಸ್ಯ; ಪದಯಾನ ತಂಡದ ಭರತನಾಟ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.