![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 29, 2020, 12:38 PM IST
ಬೆಂಗಳೂರು: ಮಾಜಿ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಬಿಜೆಪಿ ಶಾಸಕರು ನಡೆಸಿದ ಸಭೆ ಪಕ್ಷದಲ್ಲಿ ಸಂಚಲನ ಮೂಡಿಸಿದೆ. ಆ ಹಿನ್ನೆಲೆಯಲ್ಲಿ ಸಭೆ ನಡೆಸಿದ್ದ ಶಾಸಕರು ಯಾವುದೇ ಬಂಡಾಯ, ಭಿನ್ನಮತದ ಚಟುವಟಿಕೆ ನಡೆಸಿಲ್ಲ ಎಂದು ಸಮರ್ಥನೆ ನೀಡಲಾರಂಭಿಸಿದ್ದಾರೆ.
ಉತ್ತರ ಕರ್ನಾಟಕದ ಶಾಸಕರೊಂದಿಗೆ ಗುರುವಾರ ರಾತ್ರಿ ಊಟ ಮಾಡಿದ್ದೇವೆ. ಆದರೆ ರಾಜಕೀಯದ ಬಗ್ಗೆ ಚರ್ಚಿಸಿಲ್ಲ.ಮೊನ್ನೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದಾಗ ಕಳೆದ ವಾರದ ಭೋಜನ ಕೂಟದ ಬಗ್ಗೆ ತಿಳಿಸಲಾಗಿತ್ತು. ಹಾಗೆಯೇ ಸಹೋದರ ರಮೇಶ್ ಕತ್ತಿಯನ್ನು ಹಿಂದೆ ಕೊಟ್ಟ ಮಾತಿನಂತೆ ರಾಜ್ಯಸಭೆಗೆ ನೇಮಕ ಮಾಡುವಂತೆ ಕೋರಲಾಗಿದೆ. ಉಳಿದಂತೆ ಯಾವುದೇ ಬಂಡಾಯ ಚಟುವಟಿಕೆ ನಡೆಸಿಲ್ಲ ಎಂದು ಉಮೇಶ್ ಕತ್ತಿ ತಿಳಿಸಿದ್ದಾರೆ.
ಮತ್ತೊಬ್ಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಮ್ಮ ನಾಯಕರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ. ನಾನು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿರುವವರೆಗೆ ನಾನು ಸಚಿವನಾಗುವುದಿಲ್ಲ. ಅಧಿಕಾರಕ್ಕಾಗಿ ಯಡಿಯೂರಪ್ಪ ಅವರ ಮುಂದೆ ಕೈಚಾಚಿ ನಿಲ್ಲುವ ಅಯೋಗ್ಯ ರಾಜಕಾರಣಿ ನಾನಲ್ಲ. ಹಾಗೆಂದು ಯಡಿಯೂರಪ್ಪ ಅವರ ವಿರುದ್ಧ ಬಂಡಾಯ ಏಳುವುದಿಲ್ಲ ಎಂದು ಹೇಳಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.