ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ದೂರುದಾರ ಚಲುವರಾಜು ಧ್ವನಿ ಮಾದರಿ ಸಹ ಎಫ್ಎಸ್‌ಎಲ್‌ಗೆ ರವಾನೆ ಮತ್ತೆರಡು ಆಡಿಯೋ ಇದೆ: ದೂರುದಾರನಿಂದ ಬಾಂಬ್‌

Team Udayavani, Sep 17, 2024, 6:35 AM IST

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಎಂ. ಮುನಿರತ್ನ ಅವರನ್ನು ರವಿವಾರವೂ ತೀವ್ರ ವಿಚಾರಣೆಗೊಳಪಡಿಸಲಾಗಿದ್ದು ಆಗಲೂ ನಾನು ಯಾರನ್ನೂ ನಿಂದಿಸಿಲ್ಲ. ಹಲ್ಲೆಯೂ ನಡೆಸಿಲ್ಲ. ಉದ್ದೇಶಪೂರ್ವಕ ರಾಜಕೀಯ ಷಡ್ಯಂತ್ರದಿಂದ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಪುನರುಚ್ಚರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸೋಮವಾರ ದೂರುದಾರ ಚಲುವರಾಜು ಅವರ ಧ್ವನಿ ಮಾದರಿಯನ್ನು ಪಡೆದಿರುವ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು 2ನೇ ಬಾರಿಗೆ ಮುನಿರತ್ನ ಅವರ ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದಾರೆ.

ಅಶೋಕನಗರ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಶಾಸಕರು ಎರಡು ದಿನಗಳಿಂದ ಒಂದೇ ರೀತಿಯ ಉತ್ತರ ನೀಡುತ್ತಿದ್ದಾರೆ. ನನ್ನ ಕ್ಷೇತ್ರದಲ್ಲಿ ಎಲ್ಲ ಜಾತಿಯವರು ಇದ್ದು ಎಲ್ಲರೂ ಮತದಾರರೇ. ನಾನೇಕೆ ಅವರ ಜಾತಿ ಬಗ್ಗೆ ನಿಂದಿಸಲಿ. ಇದೊಂದು ದೊಡ್ಡ ಷಡ್ಯಂತ್ರ ಎಂದು ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಬ್ಬರ ಧ್ವನಿ ಸಂಗ್ರಹ
ಶಾಸಕರು ಮಾತ್ರವಲ್ಲದೆ, ದೂರುದಾರ ಚಲುವರಾಜು ಅವರ ಧ್ವನಿ ಮಾದರಿಯನ್ನು ಎಫ್ಎಸ್‌ಎಲ್‌ ತಜ್ಞರು ಪಡೆದುಕೊಂಡಿದ್ದು ವೈರಲ್‌ ಆಗಿರುವ ಆಡಿಯೋದಲ್ಲಿರುವ ಧ್ವನಿಗಳಿಗೂ ಈ ಇಬ್ಬರ ಧ್ವನಿಗಳಿಗೂ ಹೋಲಿಕೆ ಆಗುತ್ತದೆಯೇ? ಎಂಬುದನ್ನು ಪರಿಶೀಲಿಸಲಾಗುತ್ತದೆ. ಆಡಿಯೋ ಮೂಲ ತುಣುಕನ್ನು ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರ ಎದುರು ಚಲುವರಾಜು ಅಳಲು
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಎದುರು ಇಡೀ ಪ್ರಕರಣದ ಕುರಿತು ಮಾಹಿತಿ ನೀಡಿದ ಗುತ್ತಿಗೆದಾರ ಚಲುವರಾಜು, ಶಾಸಕ ಮುನಿರತ್ನ ಹಣಕ್ಕಾಗಿ ಹಿಂಸೆ ಕೊಟ್ಟಿದ್ದಾರೆ. ಕೊಠಡಿಯಲ್ಲಿ ಕೂಡಿಹಾಕಿ ಹಿಂಸೆ ಕೊಟ್ಟಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಹೊಡೆದು ಹಾಕಿದ್ದು ಯಾರು ಗೊತ್ತಾ?. ರೇಣುಕಾಸ್ವಾಮಿಯ ಕೊಂದಿದ್ದು ನನ್ನ ತಂಗಿ ಮಗ ಅಂದಿದ್ದರು. ಅಂದೇ ಲೋಕಾಯುಕ್ತಕ್ಕೆ ದೂರು ನೀಡಿದ್ದೆ ಎಂಬುದು ಸೇರಿ ಘಟನೆಯ ಪೂರ್ಣ ವಿವರವನ್ನು ಸಚಿವರಿಗೆ ಗುತ್ತಿಗೆದಾರ ಚಲುರಾಜು ತಿಳಿಸಿದ್ದಾರೆ. ಸಚಿವರ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಚಲುವರಾಜು, ಆಡಿಯೋ ವಿಚಾರದಲ್ಲಿ ನಿಜ ಗೊತ್ತಾಬೇಕು ಅಂದರೆ, ತಿರುಪತಿಗೆ ಬಂದು ಆಣೆ ಪ್ರಮಾಣ ಮಾಡಲಿ. ಆಡಿಯೋದಲ್ಲಿ ಯಾರ ದನಿ ಅನ್ನೊದು ಅವರು ತಿರುಪತಿಯಲ್ಲಿ ಹೇಳಲಿ ಎಂದು ಸವಾಲು ಹಾಕಿದರು. ನಾನು ಮತ್ತು ನನ್ನ ಕುಟುಂಬ ಭಯಭೀತರಾಗಿದ್ದು ನಮಗೆ ರಕ್ಷಣೆ ಬೇಕು ಎಂದು ಇದೇ ವೇಳೆ ಸಚಿವರಿಗೆ ಮನವಿ ಮಾಡಿದರು.

ಇಂದು ಕೋರ್ಟ್‌ಗೆ ಹಾಜರು
ಮುನಿರತ್ನ ಪೊಲೀಸ್‌ ಕಸ್ಟಡಿ ಅವಧಿ ಮಂಗಳವಾರ ಮುಕ್ತಾಯವಾಗಲಿದ್ದು ಮಧ್ಯಾಹ್ನದ ವೇಳೆಗೆ ಕೋರ್ಟ್‌ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೊಮ್ಮೆ ವಶಕ್ಕೆ ಪಡೆಯಲಾಗುತ್ತದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆರಡು ಆಡಿಯೋಗಳು ವೈರಲ್‌ ಆಗಿವೆ. ಜತೆಗೆ ದೂರುದಾರ ಚಲುವರಾಜು, ತನ್ನ ಬಳಿ ಮತ್ತೆರಡು ಆಡಿಯೋಗಳಿದ್ದು ಅವುಗ ಳನ್ನು ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದು ಅವುಗಳ ನೈಜತೆ ಯನ್ನು ಪರಿಶೀಲಿಸಲಾಗುತ್ತದೆ ಎಂದು ಪೊಲೀಸರು ಹೇಳಿದರು.

ಮುನಿರತ್ನ ಬೆಂಬಲಿಗರಿಂದ ಹನುಮಂತರಾಯಪ್ಪ ಆಡಿಯೋ
ಕಾಂಗ್ರೆಸ್‌ ಮುಖಂಡ ಹನುಮಂತರಾಯಪ್ಪ ಹಾಗೂ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಮಧ್ಯೆ ಮಾತುಕತೆ ನಡೆದಿದೆ ಎನ್ನಲಾದ ಆಡಿಯೋವನ್ನು ಮುನಿರತ್ನ ಬೆಂಬಲಿಗರು ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್‌ ಮುಖಂಡರೊಬ್ಬರ ಒತ್ತಡಕ್ಕೆ ಮಣಿದು ನಮ್ಮ ಶಾಸಕ ಮುನಿರತ್ನ ವಿರುದ್ಧ ದೂರು ನೀಡಲಾಗಿದೆ ಎಂದೂ ಆರೋಪಿಸಿದ್ದಾರೆ.

ಆಡಿಯೋದಲ್ಲಿ, ಹೇ ಚಲುವರಾಜು ನಿನ್ನೆ ಕರೆ ಮಾಡಿದ್ದರೂ ತೆಗೆದುಕೊಂಡಿಲ್ಲ. ಯಾವುದೋ ಸಣ್ಣ ವಿಷಯಕ್ಕೆ ಹೋಗಿ ದೂರು ನೀಡಿದ್ದೀಯಾ? ವೇಲು ಹುಡುಗರಿಗೆ ಹೇಳಿ ಸರಿ ಪಡಿಸುತ್ತೀನಿ. ಬಾ… ಇಲ್ಲಿ. ಡಿಸಿಪಿ ಹಾಗೂ ಪೊಲೀಸ್‌ ಕಮಿಷನರ್‌ ಬಳಿಗೆ ಹೋಗುವುದು ಬೇಡ. ಸರಕಾರ ನಮ್ಮದೇ ಇದೆ. ನೀನು ನಮ್ಮ ಹುಡುಗ, ನಮ್ಮ ತಾಲೂಕಿನವನು’ ಎಂದು ಹನುಮಂತರಾಯಪ್ಪ ಹೇಳಿರುವುದು ಒಂದು ಆಡಿಯೋದಲ್ಲಿದೆ.

ಇನ್ನೊಂದರಲ್ಲಿ, ಚಲುವರಾಜು ಕಥೆ ಹೇಳಿಕೊಂಡು ಓಡಾಡುತ್ತೀಯಾ. ನಾನೇ ಬಿಬಿಎಂಪಿಗೆ ಹೋಗಿದ್ದೆ. ನಿನಗೆ ತೊಂದರೆ ಕೊಡದಂತೆ ಹೇಳಿದ್ದೀನಿ. ಸೋಮವಾರದೊಳಗೆ ಬಂದು ಸರಿ ಪಡಿಸಿಕೋ, ಇಲ್ಲದಿದ್ದರೆ ಗುತ್ತಿಗೆಯನ್ನು ರದ್ದುಪಡಿಸಲು ಹೇಳ್ತೀನಿ. ಕೊಬ್ಬು ಮಾಡಿಕೊಂಡು ಓಡಾಟ ನಡೆಸಬೇಡ ಎಂದು ಹನುಮಂತರಾಯಪ್ಪ ಮತ್ತೂಂದು ಆಡಿಯೋದಲ್ಲಿ ಹೇಳುತ್ತಾರೆ.

ಮುನಿರತ್ನಗೆ ಎದೆ ನೋವು
ಶಾಸಕ ಮುನಿರತ್ನ ಅವರನ್ನು ಅಶೋಕನಗರ ಠಾಣೆಯಿಂದ ಸಂಜೆ 4 ಗಂಟೆ ಸುಮಾರಿಗೆ ಆರೋಗ್ಯ ತಪಾಸಣೆಗಾಗಿ ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಸಂಜೆ 7ಕ್ಕೆ ಮತ್ತೆ ಅಶೋಕನಗರ ಠಾಣೆಗೆ ಕರೆದೊಯ್ಯಲಾಗಿತ್ತು. ಆದರೆ ರಾತ್ರಿ 8ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಆಡಿಯೋದಲ್ಲಿರುವುದು ನನ್ನ
ಧ್ವನಿ: ಹನುಮಂತರಾಯಪ್ಪ
ಮತ್ತೊಂದೆಡೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಮುಖಂಡ ಹನುಮಂತರಾಯಪ್ಪ, ಆಡಿಯೋದಲ್ಲಿ ಇರುವುದು ನನ್ನದೇ ಧ್ವನಿ. ನನ್ನ ಧ್ವನಿ ಅಲ್ಲ ಎಂದು ಈಗ ಹೇಳುವುದಿಲ್ಲ. ಚಲುವರಾಜು ನಮ್ಮ ಸಮಾಜಕ್ಕೆ ಸೇರಿದ ವ್ಯಕ್ತಿ. ನನ್ನ ತಾಲೂಕಿನವರು. ಹೀಗಾಗಿ ಸಹಾಯ ಮಾಡುತ್ತೇನೆ ಬಾ ಎಂದು ಕರೆದಿದ್ದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.