ಇಮ್ರಾನ್ ಪಾಶಾ ವಿರುದ್ಧ ಸೂಕ್ತ ಕ್ರಮಕ್ಕೆ ಜಮೀರ್ ಆಗ್ರಹ
Team Udayavani, Jun 7, 2020, 8:06 PM IST
ಬೆಂಗಳೂರು: ಕೊವಿಡ್ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲುಗೊಂಡಿದ್ದ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್ ಪಾಷಾ ಇದೀಗ ಇನ್ನೊಂದು ವಿವಾದಕ್ಕೆ ಕಾರಣರಾಗಿದ್ದಾರೆ.
ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ಸಂದರ್ಭದಲ್ಲಿ ಪಾಷಾ ಅವರ ತನ್ನ ಬೆಂಬಲಿಗರೊಂದಿಗೆ ವಿಜಯೋತ್ಸವ ನಡೆಸಿರುವುದು ಇದೀಗ ರಾಜ್ಯಾದ್ಯಂತ ತೀವ್ರ ಖಂಡೆನೆಗೆ ಗುರಿಯಾಗಿದೆ.
ಇಮ್ರಾನ್ ಪಾಷಾ ಅವರ ಈ ನಡವಳಿಕೆಯನ್ನು ಶಾಸಕ ಜಮೀರ್ ಅಹಮ್ಮದ್ ಖಾನ್ ಅವರೂ ಸಹ ತೀವ್ರವಾಗಿ ಖಂಡಿಸಿದ್ದಾರೆ.
ಟ್ವೀಟ್ ಮೂಲಕ ಪಾಷಾ ಅವರ ಬೇಜವಾಬ್ದಾರಿತನ ವರ್ತನೆಯನ್ನು ಖಂಡಿಸಿರುವ ಜಮೀರ್ ಅಹಮ್ಮದ್ ಖಾನ್ ಅವರು, ಪಾಷಾ ಅವರ ಮೇಲೆ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಕೊರೊನಾ ಇಂದ ಗುಣಮುಖರಾಗಿ ಬಂದಿದ್ದು ನನಗೂ ಸಂತೋಷವಾಗಿತ್ತು, ಆದರೆ ಈ ರೀತಿ ಯುದ್ಧ ಗೆದ್ದು ಬಂದವರಂತೆ ಮೆರವಣಿಗೆ ಮೂಲಕ ಬಂದಿದ್ದನ್ನು ನಾನು ಖಂಡಿಸುತ್ತೇನೆ. ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿ. 1/2#COVID19
— B Z Zameer Ahmed Khan (@BZZameerAhmedK) June 7, 2020
ರಾಜ್ಯಕ್ಕೆ ರಾಜ್ಯವೇ ಕೊರೊನಾ ಇಂದ ಕಂಗಾಲಾಗಿದೆ, ಇಂತಹ ಸಂದಿಗ್ಧ ಸಮಯದಲ್ಲಿ ಜನರನ್ನು ಗುಂಪುಗೂಡಿಸಿ ಮೆರವಣಿಗೆ ಮಾಡುವುದು ಬೇಜವಾಬ್ದಾರಿಯ ನಡವಳಿಕೆಯಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ತಿಳಿಹೇಳಬೇಕಾದವರೆ ಈ ರೀತಿ ವರ್ತಿಸಿದರೆ ಹೇಗೆ? 2/2#COVID19
— B Z Zameer Ahmed Khan (@BZZameerAhmedK) June 7, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.