Narendra Modi: ಟೆಂಟ್ ವಾಸಿಗಳಿಗೆ ಕರೆ ಮಾಡುತ್ತಾರಂತೆ ಮೋದಿ!
ಕಳಸದ ಕುಂಬಳಡಿಕೆ ಗ್ರಾಮಸ್ಥರಿಗೆ ಪ್ರಧಾನಿ ಕಚೇರಿ ಪತ್ರ 45ಕ್ಕೂ ಹೆಚ್ಚು ಕುಟುಂಬಗಳಿಗೆ ಇಲ್ಲ ಮೂಲ ಸೌಕರ್ಯ
Team Udayavani, Aug 20, 2023, 12:37 AM IST
ಚಿಕ್ಕಮಗಳೂರು: ಕಳಸ ತಾಲೂಕಿನ ಕುಂಬಳಡಿಕೆ ಗ್ರಾಮದ ಜನರಿಗೆ ಶೀಘ್ರದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಲಿದ್ದಾರಂತೆ. ಅದಕ್ಕೆ ಕಾರಣ ಇಲ್ಲಿದೆ.
ತಮಗೆ ಮೂಲ ಸೌಲಭ್ಯವಿಲ್ಲ, ಹಕ್ಕುಪತ್ರ ಸಿಕ್ಕಿಲ್ಲ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಬೇಸತ್ತು ಇವರು ಪ್ರಧಾನಮಂತ್ರಿ ಕಚೇರಿಗೆ ಪತ್ರ ಬರೆದಿದ್ದರು. ಅದನ್ನು ಸ್ವೀಕರಿಸಿದ ಪ್ರಧಾನ ಮಂತ್ರಿಗಳ ಕಾರ್ಯಾಲಯದಿಂದ ಗ್ರಾಮಸ್ಥರಿಗೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸ್ವತಃ ನರೇಂದ್ರ ಮೋದಿಯವರೇ ಶೀಘ್ರದಲ್ಲಿ ಕರೆ ಮಾಡಲಿದ್ದಾರೆ ಎಂಬ ಉತ್ತರ ಲಭ್ಯವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ಕುಂಬಳಡಿಕೆ ಗ್ರಾಮದಲ್ಲಿ ಟೆಂಟ್ನಲ್ಲಿ ವಾಸಿಸುತ್ತಿರುವ 45ಕ್ಕೂ ಹೆಚ್ಚು ಕುಟುಂಬಗಳು ಈಗ ಪ್ರಧಾನಿಯವರ ಕರೆಗಾಗಿ ಕಾಯುತ್ತಿದ್ದು, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿರೀಕ್ಷೆಯಲ್ಲಿವೆ.
ಈ ಗ್ರಾಮದ ನಿವೇಶನ ರಹಿತರಿಗೆ ನಾಲ್ಕು ಎಕ್ರೆ ಜಮೀನು ಮಂಜೂರಾಗಿತ್ತು. ಈ ಜಮೀನಿನಲ್ಲಿ ಟೆಂಟ್ ನಿರ್ಮಿಸಿಕೊಂಡು ವಾಸಿಸುತ್ತಿದ್ದು, ಹಕ್ಕುಪತ್ರ ಇಲ್ಲದೆ ಮನೆಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಗ್ರಾಮಕ್ಕೆ ಕುಡಿಯುವ ನೀರು, ವಿದ್ಯುತ್ ಸಹಿತ ಯಾವುದೇ ಮೂಲ ಸೌಲಭ್ಯಗಳನ್ನು ಕಲ್ಪಿಸಿಲ್ಲ. ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪರದಾಡುತ್ತಿದ್ದಾರೆ.
ಮೂಲ ಸೌಲಭ್ಯ ಹಾಗೂ ಹಕ್ಕುಪತ್ರಕ್ಕಾಗಿ ಸಾಕಷ್ಟು ಬಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಉಪಯೋಗವಾಗಿಲ್ಲ. ಹೀಗಾಗಿ ಗ್ರಾಮಸ್ಥರು ರಾಷ್ಟ್ರಪತಿ ಮತ್ತು ಪ್ರಧಾನಿ ಕಚೇರಿಗೆ ಪತ್ರ ಬರೆದು ಅಳಲು ತೋಡಿಕೊಂಡಿದ್ದರು.
ಈಗಾಗಲೇ ರಾಷ್ಟ್ರಪತಿ ಕಚೇರಿಯಿಂದ ಗ್ರಾಮಸ್ಥರಿಗೆ ಪ್ರತ್ಯುತ್ತರ ಪತ್ರ ಬಂದಿದೆ. ಪ್ರಧಾನಮಂತ್ರಿ ಕಚೇರಿಯಿಂದ ದೂರವಾಣಿ ಕರೆಯೂ ಬಂದಿದ್ದು, ಖುದ್ದಾಗಿ ಪ್ರಧಾನಿ ಮೋದಿ ಅವರೇ ಗ್ರಾಮಸ್ಥರ ಅಳಲು ಆಲಿಸಲಿದ್ದಾರೆ ಎಂದು ತಿಳಿಸಲಾಗಿದೆ. ಮೋದಿ ಅವರ ದೂರವಾಣಿ ಕರೆ ಬರುವ ಎರಡು ದಿನಗಳ ಮುಂಚೆ ತಿಳಿಸಲಾಗುವುದು ಎಂದು ಪ್ರಧಾನಿ ಕಚೇರಿಯ ಅಧಿಕಾರಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.