Monkeypox: ಶಂಕಿತ ಪ್ರಕರಣಕ್ಕೆ ಪ್ರತ್ಯೇಕ ಐಸೋಲೇಶನ್‌: ರೆಫ‌ರಲ್‌ ಆಸ್ಪತ್ರೆಯಾಗಿ ವೆನ್ಲಾಕ್‌


Team Udayavani, Aug 29, 2024, 6:45 AM IST

Monkeypox: ಶಂಕಿತ ಪ್ರಕರಣಕ್ಕೆ ಪ್ರತ್ಯೇಕ ಐಸೋಲೇಶನ್‌: ರೆಫ‌ರಲ್‌ ಆಸ್ಪತ್ರೆಯಾಗಿ ವೆನ್ಲಾಕ್‌

ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್‌ ಸೋಂಕಿನ ಮುನ್ನೆಚ್ಚರಿಕೆ ಕ್ರಮವಾಗಿ ಸರ್ವೇಕ್ಷಣೆ ಕಣ್ಗಾವಲು ಪಡೆಯನ್ನು ಸಕ್ರಿಯಗೊಳಿಸಿದ್ದು, ಶಂಕಿತ ಪ್ರಕರಣಗಳನ್ನು ಪ್ರತ್ಯೇಕ ಐಸೋಲೇಶನ್‌ ಹಾಗೂ ನಿರ್ವಹಣೆಗಾಗಿ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆ ಹಾಗೂ ಬೆಂಗಳೂರಿನ ಇಂದಿ ರಾನಗರದ ಇಡಿ ಆಸ್ಪತ್ರೆಯನ್ನು ರೆಫ‌ರಲ್‌ ಆಸ್ಪತ್ರೆಗಳಾಗಿ ಗುರುತಿಸಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಡಾ| ರಂದೀಪ ತಿಳಿಸಿದ್ದಾರೆ.

ವಿದೇಶದಲ್ಲಿ ಮಂಕಿಪಾಕ್ಸ್‌ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದ ವಿಮಾನ ನಿಲ್ದಾಣ ಮತ್ತು ಬಂದರಿನಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಸೋಂಕಿತ ಪ್ರದೇಶದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ.

ಜ್ವರ, ಚಳಿ, ಬೆವರುವಿಕೆ, ತಲೆ ನೋವು, ಮಾಂಸಖಂಡಗಳ ನೋವು, ಸುಸ್ತು, ಗಂಟಲ ಉರಿ, ಕೆಮ್ಮು, ಚರ್ಮದ ಮೇಲಿನ ದದ್ದುಗಳು ಮಂಕಿ ಪಾಕ್ಸ್‌ ಲಕ್ಷಣಗಳಾಗಿವೆ. ಇವುಗಳಲ್ಲಿ ಯಾವುದಾದರೂ 2 ಲಕ್ಷಣಗಳು ಪ್ರಯಾಣಿಕರಲ್ಲಿ ಪತ್ತೆಯಾದರೆ ಅಂಥವರನ್ನು ಪ್ರಾಥಮಿಕ ಪರೀಕ್ಷೆಗೆ ಒಳಪಡಿಸಿ, ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ರವಾನಿಸಬೇಕಾಗಿದೆ ಎಂದು ಮಾಹಿತಿ ನೀಡಿದರು.

ಕೋಲ್ಡ್‌ ಸ್ಟೋರೆಜ್‌ ಸಂಗ್ರಹ
ವೈದ್ಯಕೀಯ ಅಧಿಕಾರಿಗಳು ಶಂಕಿತ ಮಂಕಿ ಪಾಕ್ಸ್‌ ಪ್ರಕರಣಗಳ ವಿವರವನ್ನು ಐಎಚ್‌ಐಪಿ ಪೋರ್ಟಲ್‌ನಲ್ಲಿ “ಫೀವರ್‌ ವಿತ್‌ ರ್ಯಾಶ್‌’ ಪ್ರಕಾರವಾಗಿ ಪಿ-ಫಾರ್ಮ್ ನಲ್ಲಿಯೇ ವರದಿ ಮಾಡಬೇಕು. ಸೋಂಕಿನ ಲಕ್ಷಣಗಳಿರುವ ವ್ಯಕ್ತಿಯ ದದ್ದುಗಳ ದ್ರವ, ಗಾಯ ತಳದ ಸ್ವಾಬ್‌, ರಕ್ತದ ಮಾದರಿ, ಸೀರಂ ಮಾದರಿ, ಗಂಟಲು ಮೂಗಿನ ಸ್ವಾಬ್‌, ಮೂತ್ರದ ಮಾದರಿಯನ್ನು ಕೋಲ್ಡ್‌ ಸ್ಟೋರೆಜ್‌ನಲ್ಲಿ (+4ಸಿ)ನಲ್ಲಿ ಸಂಗ್ರಹಿಸಿಟ್ಟು, ಬೆಂಗಳೂರಿನ ಬಿಎಂಸಿ-ಆರ್‌ಐ ವೈರಾಣು ಪ್ರಯೋಗಾಲಯ, ವಿಕ್ಟೋರಿಯಾ ಮೈಕ್ರೋಬಯಾಲಜಿ ಹಾಗೂ ವೈರಸ್‌ ಸಂಶೋಧನ ಪತ್ತೆ ಪ್ರಯೋಗಾಲಯ, ಪುಣೆ ಐಸಿಎಂಆರ್‌ಗೆ ರವಾನಿಸಲಾಗುತ್ತದೆ.

21ದಿನ ಐಸೋಲೇಶನ್‌
ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ವರದಿಯಾದರೆ ಕನಿಷ್ಠ 21ದಿನಗಳವರೆಗೆ ಅಥವಾ ದದ್ದುಗಳು ಸಂಪೂರ್ಣವಾಗಿ ಗುಣಮುಖರಾಗುವ ತನಕ ಐಸೋಲೇಶನ್‌ನಲ್ಲಿ ಇರಬೇಕು. ಅವರಿಗೆ ಕೇಂದ್ರ ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಚಿಕಿತ್ಸೆ ನೀಡಲಾಗುತ್ತದೆ. ಆರೋಗ್ಯಾಧಿಕಾರಿಗಳು ಸೋಂಕಿತ ಪ್ರದೇಶದಿಂದ ಬರುವ ಸೋಂಕಿನ ಲಕ್ಷಣಗಳಿಲ್ಲದ ಪ್ರಯಾಣಿಕರ ಆರೋಗ್ಯದ ಮೇಲ್ವಿಚಾರಣೆಯನ್ನು 21 ದಿನಗಳವರೆಗೆ ನಿಗಾ ವಹಿಸಲಾಗುತ್ತದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.